
ಧಾರವಾಡ: ನಗರದ ಉಪನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ರುದ್ರಪ್ಪ ಗುಡದರಿ ಅವರು ರೌಡಿಶೀಟರ್ಗಳು ಮತ್ತು ಎನ್ಡಿಪಿಎಸ್ (ಮಾದಕ ವಸ್ತುಗಳ ಕಾಯಿದೆ) ಪ್ರಕರಣಗಳ ಆರೋಪಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಘಟನೆ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕ ವಲಯದಲ್ಲಿ ಪೊಲೀಸ್ ಇಲಾಖೆಯ ವಿಶ್ವಾಸಾರ್ಹತೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.

ಕೃಷಿ ವಿಶ್ವವಿದ್ಯಾಲಯದ ಸಮೀಪವಿರುವ ಒಂದು ಖಾಸಗಿ ಹೋಟೆಲ್ನಲ್ಲಿ ಈ ಜನ್ಮದಿನದ ಆಚರಣೆ ನಡೆದಿದೆ ಎಂದು ವರದಿಯಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸ್ ಅಧಿಕಾರಿಯೇ ಸಮಾಜಘಾತುಕ ಶಕ್ತಿಗಳ ಜೊತೆಗೂಡಿ ಈ ರೀತಿ ಸಂಭ್ರಮದಲ್ಲಿ ಪಾಲ್ಗೊಂಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಅಪರಾಧಿಗಳೊಂದಿಗಿನ ಅಧಿಕಾರಿಗಳ ನಿಕಟ ಸಂಪರ್ಕವು ಇಲಾಖೆಯ ಕರ್ತವ್ಯ ನಿಷ್ಠೆ ಕುರಿತು ಆಳವಾದ ಚರ್ಚೆಗೆ ನಾಂದಿ ಹಾಡಿದೆ.

ವೈರಲ್ ಆಗಿರುವ ಫೋಟೊಗಳಲ್ಲಿ ಪಿಎಸ್ಐ ರುದ್ರಪ್ಪ ಗುಡದರಿ ಅವರೊಂದಿಗೆ ರೌಡಿಶೀಟರ್ಗಳು ಮತ್ತು ಮಾದಕ ವಸ್ತುಗಳ ಸಾಗಾಣಿಕೆ ಆರೋಪಿಗಳು ಭಾಗಿಯಾಗಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಈ ಗಂಭೀರ ಘಟನೆಯ ಬಗ್ಗೆ ಮುಂದೆ ಎನಾಗುತ್ತದೆ ಸಾರ್ವಜನಿಕರೆ ಕಾದು ನೋಡಬೇಕಿದೆ.

