ಕಲಘಟಗಿ ವಲಯ ಅರಣ್ಯ ಕಚೇರಿಯಲ್ಲಿ ಹರಾಜು; ನ. 26 ರೊಳಗೆ ತಕರಾರು ಸಲ್ಲಿಸಲು ಅವಕಾಶ
ಧಾರವಾಡ: ನವೆಂಬರ್ 25: ಕಲಘಟಗಿ ವಲಯ ವ್ಯಾಪ್ತಿಯ ವಿವಿಧ ಬಡಾವಣೆಗಳ ರಸ್ತೆ ಬದಿ ಮತ್ತು ಸರ್ಕಾರಿ ಕಚೇರಿಗಳ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ವಿವಿಧ ಜಾತಿಯ ಒಟ್ಟು 13 ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯು ಬಹಿರಂಗ ಹರಾಜು ಪ್ರಕ್ರಿಯೆ ಹಮ್ಮಿಕೊಂಡಿದೆ.
ಈ ಹರಾಜು ಪ್ರಕ್ರಿಯೆಯು ನವೆಂಬರ್ 28, 2025 ಮತ್ತು ಡಿಸೆಂಬರ್ 10, 2025 ರಂದು ಮಧ್ಯಾಹ್ನ 3 ಗಂಟೆಗೆ ಕಲಘಟಗಿ ವಲಯ ಅರಣ್ಯ ಅಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಕರಾರು ಸಲ್ಲಿಕೆಗೆ ಅವಕಾಶ:
ಮರ ಸಂರಕ್ಷಣಾ ಕಾಯ್ದೆ 1976 ರ ಸೆಕ್ಷನ್ 8 (3) (ಗಿII) ರ ನಿಯಮಗಳಂತೆ, ಈ ಮರಗಳ ತೆರವು ಕುರಿತು ಯಾವುದೇ ವ್ಯಕ್ತಿಗಳು ತಕರಾರು ಸಲ್ಲಿಸಲು ಬಯಸಿದರೆ, ಅವರು ತಮ್ಮ ತಕರಾರನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ.
ತಕರಾರು ಅರ್ಜಿಗಳನ್ನು ನವೆಂಬರ್ 26, 2025 ರ ಒಳಗಾಗಿ ಧಾರವಾಡ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಧಾರವಾಡ ಹಾಗೂ ಧಾರವಾಡದ ಕೆ.ಸಿ. ಪಾರ್ಕ್ ಎದುರು ಇರುವ ಅರಣ್ಯ ಸಂಕೀರ್ಣದಲ್ಲಿರುವ ಮರ ಅಧಿಕಾರಿಯವರಿಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

