“ಪರೀಕ್ಷೆಗಳು ಅಂದು-ಇಂದು” ಕುರಿತು ಉಪನ್ಯಾಸ ಮತ್ತು ಸಂವಾದ: ಡಿ. 11 ರಂದು ಕಾರ್ಯಕ್ರಮ

Spread the love

ಧಾರವಾಡ, ಡಿ 10,: ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು, ಧಾರವಾಡದ ಛತ್ರಪತಿ ಶಿವಾಜಿ ಮಹಾರಾಜ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ “ಪರೀಕ್ಷೆಗಳು ಅಂದು-ಇಂದು” ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ.

​ಈ ಕಾರ್ಯಕ್ರಮವು ಡಿಸೆಬಂರ್ 11, ರಂದು ಬೆಳಿಗ್ಗೆ 11:15 ಗಂಟೆಗೆ ಶ್ರೀ ಶಿವಾಜಿ ಮಹಾರಾಜ ಪದವಿಪೂರ್ವ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.

​ಧಾರವಾಡ ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಎನ್. ಮೋರೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಧಾರವಾಡ ಮರಾಠಾ ವಿದ್ಯಾಪ್ರಸಾರಕ ಮಂಡಳದ ಗೌರವ ಕಾರ್ಯದರ್ಶಿ ರಾಜು ಆರ್. ಬಿರಜೆನವರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

​ಧಾರವಾಡ ಮರಾಠಾ ವಿದ್ಯಾಪ್ರಸಾರಕ ಮಂಡಳಿಯ ಕಾಲೇಜು ಸುಧಾರಣಾ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಎನ್. ಜಾಧವ ಅವರು ಅತಿಥಿಗಳಾಗಿ ಆಗಮಿಸುವರು. ಧಾರವಾಡದ ಚಿಂತಕ ಹಾಗೂ ಶಿಕ್ಷಣ ತಜ್ಞರಾದ ಎಂ.ಎ. ಚಿಕ್ಕಮಠ ಅವರು ಅತಿಥಿ ಉಪನ್ಯಾಸ ನೀಡಲಿದ್ದಾರೆ.

​ಛತ್ರಪತಿ ಶಿವಾಜಿ ಮಹಾರಾಜ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀಮತಿ ಶೈಲಶ್ರೀ ಎಂ. ಸಂಕೋಜಿ ಅವರು ಗೌರವ ಉಪಸ್ಥಿತರಿರುವರು.

​ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹಾಗೂ ಶಿಕ್ಷಣ ಮಂಟಪದ ಸಂಚಾಲಕ ವೀರಣ್ಣ ಒಡ್ಡೀನ ಅವರು ಜಂಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *