​ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಪ್ರತಿಯೊಬ್ಬರಿಗೂ ಸ್ಮರಣೀಯ: ನಿವೃತ್ತ ಶಿಕ್ಷಕ ಕಲ್ಲಯ್ಯ ಮಠಪತಿ

Spread the love

ನವಲಗುಂದ: 1950ರಲ್ಲಿ ಸಂವಿಧಾನ ಜಾರಿಗೆ ಬಂದ ಈ ದಿನದಂದು ಭಾರತವು ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಹೊರಹೊಮ್ಮಿತು. ಈ ಮಹತ್ವದ ದಿನದ ಹಿಂದೆ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವಿದ್ದು, ಅದನ್ನು ಪ್ರತಿಯೊಬ್ಬ ಭಾರತೀಯನೂ ಸದಾ ಸ್ಮರಿಸಬೇಕು ಎಂದು ನಿವೃತ್ತ ಶಿಕ್ಷಕ ಕಲ್ಲಯ್ಯ ಮಠಪತಿ ತಿಳಿಸಿದರು.

​ತಾಲೂಕಿನ ಗೊಬ್ಬಗುಂಪಿ ಗ್ರಾಮದ ರೇವಣಸಿದ್ದೇಶ್ವರ ಯುವಕ ಮಂಡಳದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಸಂವಿಧಾನದ ಆಶಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶದ ಏಕತೆ ಮತ್ತು ಅಭಿವೃದ್ಧಿಗಾಗಿ ಶ್ರಮಿಸಲು ಈ ಸುದಿನ ನಮಗೆ ಸದಾ ಪ್ರೇರಣೆಯಾಗಿದೆ ಎಂದು ಅಭಿಪ್ರಾಯಪಟ್ಟರು.

​ಕಾರ್ಯಕ್ರಮದಲ್ಲಿ ಸೈನಿಕರಾದ ಅರುಣ ಸಾಲಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿವಲಿಂಗಯ್ಯ ಹಿರೇಮಠ, ಮಲ್ಲಿಕಾರ್ಜುನಸ್ವಾಮಿ ಮಠಪತಿ, ಬಾಪುಗೌಡ ಕುಲಕರ್ಣಿ, ನಾಗಪ್ಪ ಮುಗದ, ಮಹಾಂತೇಶ ಸಾಲಿ, ಚನ್ನಬಸಪ್ಪ ಕುಂದಗೋಳ, ಪ್ರಭು ಸೂರಪ್ಪನವರ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ಸರ್ಕಾರಿ ಶಾಲೆಯ ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *