ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಧನಸಹಾಯಕ್ಕೆ ಅರ್ಜಿ ಆಹ್ವಾನ: ಡಿ. 30 ಕೊನೆಯ ದಿನ

Spread the love

ಧಾರವಾಡ: ರಾಜ್ಯಾದ್ಯಂತ ಮತ್ತು ಹೊರರಾಜ್ಯಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸಲು ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಧನಸಹಾಯ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

​ಅಲ್ಲದೆ, ಸ್ಥಳೀಯ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ, ಮತ್ತು ಚಿತ್ರಕಲೆ, ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡುವ ಉದ್ದೇಶದಿಂದಲೂ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಈ ಎಲ್ಲ ಸಹಾಯಧನ ಯೋಜನೆಗಳಿಗೆ 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅರ್ಹ ಸಂಸ್ಥೆಗಳು ಮತ್ತು ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ.

​ಅರ್ಜಿಗಳನ್ನು ಸೇವಾಸಿಂಧು (sevasindhu.karnataka.gov.in) ಪೋರ್ಟಲ್ ಮೂಲಕವೇ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 30, 2025 ಕೊನೆಯ ದಿನಾಂಕವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

​ಈ ಕುರಿತು ಸರ್ಕಾರವು ಹೊರಡಿಸಿರುವ ಆದೇಶ ಸಂಖ್ಯೆ ಕಸಂವಾ 280 ಕಸಧ 2024 (ಭಾ-1) ದಿನಾಂಕ: 31.10.2025 ರಲ್ಲಿನ ಮಾರ್ಗಸೂಚಿಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಮತ್ತು ಇಲಾಖೆಯ ವೆಬ್‌ಸೈಟ್ www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ.

​ಹೆಚ್ಚಿನ ಮಾಹಿತಿ ಮತ್ತು ವಿವರಣೆಗಾಗಿ ಇಲಾಖೆಯು ನೀಡಿರುವ ದೂರವಾಣಿ ಸಂಖ್ಯೆಗಳಾದ 08024410547, 8792662814, 8792662816, 08022213530, 9986837037, 9900337738, 9448436877, 9480197511, 9916600027, ಅಥವಾ 08022241325 ಗೆ ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *