ಕರ್ನಾಟಕದ 9 ಜಿಲ್ಲೆಗಳಲ್ಲಿ ಲೋಕಾಯುಕ್ತ ಬಿಗ್ ಶಾಕ್: 12 ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ, $38 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆ!

Spread the love

ಬೆಂಗಳೂರು: ಆದಾಯಕ್ಕಿಂತ ಮೀರಿ ಅಕ್ರಮ ಆಸ್ತಿ ಗಳಿಕೆ ಮಾಡಿದ ಆರೋಪದ ಮೇಲೆ ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದ ಒಟ್ಟು 12 ಸರ್ಕಾರಿ ಅಧಿಕಾರಿಗಳ ನಿವಾಸಗಳು, ಕಚೇರಿಗಳು ಮತ್ತು ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು (ಅಕ್ಟೋಬರ್ 15, 2025) ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ತೀವ್ರ ಆಘಾತ ನೀಡಿದ್ದಾರೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಟ್ಟು 48 ಕಡೆಗಳಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ $38.10 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಲಾಗಿದೆ.

ದಾಳಿಯ ವಿವರ ಮತ್ತು ಪತ್ತೆಯಾದ ಆಸ್ತಿ:
ಲೋಕಾಯುಕ್ತ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, 12 ಅಧಿಕಾರಿಗಳಿಗೆ ಸೇರಿದ ವಿವಿಧ ಆಸ್ತಿಗಳ ಒಟ್ಟು ಮೌಲ್ಯ $38.10 ಕೋಟಿ ಎಂದು ಅಂದಾಜಿಸಲಾಗಿದೆ. ಇದರಲ್ಲಿ $24.34 ಕೋಟಿ ಮೌಲ್ಯದ ಸ್ಥಿರಾಸ್ತಿಗಳು, ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು, ಷೇರುಗಳು ಹಾಗೂ $1.20 ಕೋಟಿ ನಗದು ಸೇರಿವೆ. ಈ ಪೈಕಿ ಒಬ್ಬ ಅಧಿಕಾರಿಯ ಮನೆಯಲ್ಲಿಯೇ $83.09 ಲಕ್ಷ ನಗದು ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ.

ಯಾವೆಲ್ಲಾ ಜಿಲ್ಲೆಗಳಲ್ಲಿ ದಾಳಿ?:
ಲೋಕಾಯುಕ್ತ ಪೊಲೀಸ್ ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬೀದರ್, ಉಡುಪಿ, ಬಾಗಲಕೋಟೆ ಮತ್ತು ಹಾಸನ ಸೇರಿದಂತೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಮುಖವಾಗಿ ದಾಳಿಗೊಳಗಾದ ಅಧಿಕಾರಿಗಳು:

  • ವಿ. ಸುಮಂಗಳಾ: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ (ಸಂಶೋಧನೆ ಮತ್ತು ತರಬೇತಿ) ಮಾಜಿ ನಿರ್ದೇಶಕಿ (ಪ್ರಸ್ತುತ ಅಮಾನತುಗೊಂಡಿದ್ದಾರೆ). ಇವರ ಮೇಲೆ $7.32 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದೆ. ಇವರ ಆಸ್ತಿಯಲ್ಲಿ ನಾಲ್ಕು ಸೈಟ್‌ಗಳು, ಐದು ಮನೆಗಳು, 19 ಎಕರೆ ಕೃಷಿ ಭೂಮಿ, $1 ಕೋಟಿ ಮೌಲ್ಯದ ಆಭರಣ ಹಾಗೂ $96.73 ಲಕ್ಷ ಮೌಲ್ಯದ ಷೇರುಗಳು ಪತ್ತೆಯಾಗಿವೆ.
  • ಎನ್. ಕೆ. ಗಂಗಾಮಾರಿಗೌಡ: ಕೆಐಎಡಿಬಿ ಸರ್ವೇಯರ್ (ಬೆಂಗಳೂರು). ಇವರ ಮೇಲೆ $4.66 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.
  • ಎನ್. ಚಂದ್ರಶೇಖರ್: ಹೊಳಲ್ಕೆರೆ ಸಹಾಯಕ ಕೃಷಿ ನಿರ್ದೇಶಕ (ಚಿತ್ರದುರ್ಗ). ಇವರ ಮೇಲೆ $5.14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.
  • ಜಿ. ಮಂಜುನಾಥ: ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ವೈದ್ಯಾಧಿಕಾರಿ (ಬೆಂಗಳೂರು).
  • ಲಕ್ಷ್ಮೀನಾರಾಯಣ ಪಿ. ನಾಯಕ್: ರಸ್ತೆ ಸಾರಿಗೆ ಅಧಿಕಾರಿ (ಆರ್‌ಟಿಒ), ಉಡುಪಿ.
  • ಧೂಳಪ್ಪ: ಸಹಾಯಕ ನಿರ್ದೇಶಕ, ಕೃಷಿ ಇಲಾಖೆ, ಕಲಬುರಗಿ.
  • ಜ್ಯೋತಿ ಮೇರಿ: ಪ್ರಥಮ ದರ್ಜೆ ಸಹಾಯಕರು (ಎಫ್‌ಡಿಎ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ.
  • ಅಶೋಕ್: ಕಂದಾಯ ನಿರೀಕ್ಷಕ, ರಾಣೆಬೆನ್ನೂರು ತಾಲ್ಲೂಕು (ಹಾವೇರಿ)
  • ಚೇತನ್: ಕಿರಿಯ ಇಂಜಿನಿಯರ್, ಆಲಮಟ್ಟಿ ಬಲದಂಡೆ ಕಾಲುವೆ (ಬಾಗಲಕೋಟೆ).

ದಾಳಿ ಮುಂದುವರೆದಿದ್ದು, ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡ ದಾಖಲೆಗಳು ಮತ್ತು ಬ್ಯಾಂಕ್ ಖಾತೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಆಸ್ತಿ ಗಳಿಸಿದ ಎಲ್ಲ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *