ಚಾಮರಾಜನಗರದಲ್ಲಿ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ

ಚಾಮರಾಜನಗರದಲ್ಲಿ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ ಚಾಮರಾಜನಗರ:ಜಿಲ್ಲೆಯ ಗಾಳೀಪುರ ಸಮೀಪದ ರಿಂಗ್‌ರೋಡ್‌ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಬಾಲಕರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಮೊಪೆಡ್‌ನಲ್ಲಿ ಪ್ರಯಾಣಿಸುತ್ತಿದ್ದ ರೆಹಾನ್, ಆದಾನ್ ಪಾಷಾ, ಫೈಜಲ್ ಮತ್ತು ಮೆರಾನ್‌ರನ್ನು ಲಾರಿ–ಕಾರು–ಮೊಪೆಡ್ ನಡುವೆ ಸಂಭವಿಸಿದ ಅಪಘಾತ ಕಸಿದುಕೊಂಡಿತು. ಮೆರಾನ್ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರು ಗಂಭೀರ ಗಾಯಗೊಂಡಿದ್ದರು. ತುರ್ತುವಾಗಿ ಸಿಕ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಯಿತಾದರೂ,…

Read More

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ: ಬಸ್ ಚಾಲಕನಿಗೆ ಗಂಭೀರ ಗಾಯ, ಸಂಚಾರ ಅಸ್ತವ್ಯಸ್ತ

ಚಿಕ್ಕಮಗಳೂರು, ಸೆ. ೭: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಇಂದು ಸಂಭವಿಸಿದ ಸರಣಿ ಅಪಘಾತದಿಂದಾಗಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ವಿವರಘಾಟಿಯ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ, ಹಿಂದಿನಿಂದ ಬರುತ್ತಿದ್ದ ಮತ್ತೊಂದು ಲಾರಿಯು ಸಹ ಅಪಘಾತಕ್ಕೀಡಾದ ಲಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತಕ್ಕೆ ಕಾರಣವಾಗಿದೆ. ಗಾಯಾಳುಗಳ ಸ್ಥಿತಿಈ ದುರ್ಘಟನೆಯಲ್ಲಿ ಬಸ್…

Read More

ಮುರಳಿ ಸಾವಜಿ ಹೋಟೆಲ್‌ ಮೇಲೆ ಅಬಕಾರಿ ದಾಳಿ, ಅಕ್ರಮ ಮದ್ಯ ವಶ: ಶಾಸಕರ ಕ್ಷೇತ್ರದಲ್ಲಿ ಕಳ್ಳ ದಂಧೆಗೆ ಆಕ್ರೋಶ

ನವಲಗುಂದ: ಪಟ್ಟಣದಲ್ಲಿರುವ ‘ಮುರಳಿ ಸಾವಜಿ ಹೋಟೆಲ್’ ಮತ್ತು ಅದರ ಮಾಲೀಕ ರಾಜು ದೊಂಗಡಿ ಅವರ ಮನೆಯ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ವಿವಿಧ ಬ್ರಾಂಡ್‌ಗಳ ಅಕ್ರಮ ಮದ್ಯ ಮತ್ತು ಬೀರ್ ವಶಪಡಿಸಿಕೊಂಡಿದ್ದಾರೆ. ಈ ಘಟನೆ ಶಾಸಕ ಎನ್.ಎಚ್. ಕೊನರಡ್ಡಿ ಅವರ ಕ್ಷೇತ್ರದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದಾಳಿ ವೇಳೆ ಒಟ್ಟು ₹18,955 ಮೌಲ್ಯದ ಮದ್ಯ ಮತ್ತು ₹960 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ….

Read More

ಗುಜರಾತ:ಪಾವಗಢದಲ್ಲಿ ರೋಪ್‌ವೇ ದುರಂತ: ಆರು ಕಾರ್ಮಿಕರು ದುರ್ಮರಣ

ಗುಜರಾತ್: ಪ್ರಸಿದ್ಧ ಯಾತ್ರಾಸ್ಥಳವಾದ ಪಾವಗಢದಲ್ಲಿ ರೋಪ್‌ವೇ ನಿರ್ಮಾಣ ಕಾರ್ಯಕ್ಕೆ ಬಳಸುತ್ತಿದ್ದ ಸರಕು ಸಾಗಣೆ ಟ್ರಾಲಿಯ ವೈಯರ್ ತುಂಡಾಗಿ ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಈ ದುರಂತ ಇಡೀ ಪ್ರದೇಶದಲ್ಲಿ ಆತಂಕ ಮತ್ತು ಶೋಕದ ವಾತಾವರಣ ಸೃಷ್ಟಿಸಿದೆ. ಪಂಚಮಹಲ್ ಪೊಲೀಸ್ ಉಪ ವರಿಷ್ಠಾಧಿಕಾರಿ ಹರ್ಷ ದುಧಾತ್ ಅವರು ನೀಡಿರುವ ಮಾಹಿತಿ ಪ್ರಕಾರ, ರೋಪ್‌ವೇ ನಿರ್ಮಾಣಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಸಾಗಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ತಾಂತ್ರಿಕ ದೋಷ ಅಥವಾ ತೂಕದ ಕಾರಣದಿಂದಾಗಿ ಟ್ರಾಲಿಯು ನಿಯಂತ್ರಣ…

Read More

ಪಡಿತರ ಅಕ್ಕಿ ಅಕ್ರಮ ಸಾಗಾಟ: ಪ್ರಮುಖ ಆರೋಪಿ ಸಚಿನ್ ಕಲ್ಕೂರ ಬಂಧನ

ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ 49 ಟನ್ ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸಚಿನ್ ಕಲ್ಕೂರನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಮೂಲಕ ಪ್ರಕರಣದ ಹಿಂದಿನ ಬೃಹತ್ ಜಾಲ ಭೇದಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ, ಅಕ್ರಮವಾಗಿ ಸಾಗಿಸಲಾಗುತ್ತಿದ್ದ 49 ಟನ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಕಾರ್ಯಾಚರಣೆಯಲ್ಲಿ ಎರಡು ಲಾರಿಗಳು ಸೇರಿದಂತೆ ಹಲವು ವಾಹನಗಳನ್ನು ಜಪ್ತಿ ಮಾಡಲಾಗಿತ್ತು ಮತ್ತು ಒಂಭತ್ತು…

Read More

ಲಂಚ ಪ್ರಕರಣ: ಲೋಕಾಯುಕ್ತ ಬಲೆಗೆ: ಇಬ್ಬರು ಅಧಿಕಾರಿಗಳಿಗೆ ಜೈಲು ಶಿಕ್ಷೆ

ಧಾರವಾಡ: ನ್ಯಾಯಯುತವಾಗಿ ಮಾಡಬೇಕಾಗಿದ್ದ ಕೆಲಸಕ್ಕೆ ₹10,000 ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳಿಗೆ ಧಾರವಾಡದ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಕುರಿತು ಧಾರವಾಡ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕಾನೂನು ಮಾಪನಶಾಸ್ತ್ರ ಇಲಾಖೆ, ಎಪಿಎಂಸಿ, ಹುಬ್ಬಳ್ಳಿಯ ಸಹಾಯಕ ನಿಯಂತ್ರಕರಾಗಿದ್ದ ಮಧುಕರ ರಾಜಾರಾಮ ಘೋಡಕೆ ಮತ್ತು ಅದೇ ಕಚೇರಿಯ ಎಸ್.ಡಿ.ಎ. ಎಸ್.ಎನ್. ಲೀಲಾವತಿ ಅವರು ಲಂಚ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿದ್ದಾರೆ….

Read More

ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಗ್ರಾಪಂ ಮಾಜಿ ಅಧ್ಯಕ್ಷನ ಹತ್ಯೆ

ವಿಜಯಪುರ: ಚಡಚಣ: (ಸೆಪ್ಟೆಂಬರ್ 4, 2025): ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಭೀಮಾ ತೀರದ ರೌಡಿಸಂ ಮತ್ತೆ ಮುನ್ನಲೆಗೆ ಬಂದಿದ್ದು, ಕ್ಷೌರದ ಅಂಗಡಿಯಲ್ಲೇ ಗ್ರಾಪಂ ಮಾಜಿ ಅಧ್ಯಕ್ಷ ಭೀಮನಗೌಡ ಬಿರಾದಾರ (40) ಅವರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಬುಧವಾರ ಬೆಳಿಗ್ಗೆ ನಡೆದಿದ್ದು, ಹತ್ಯೆಯಾದ ಕೆಲವೇ ಗಂಟೆಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆಗೆ ವೈಯಕ್ತಿಕ ದ್ವೇಷ, ಹಣಕಾಸಿನ ವಿವಾದ ಹಾಗೂ ರಾಜಕೀಯ ಎಂಬ ಸಂಶಾತ್ಮಕಬಕಾರಣಗಳು ಪ್ರಮುಖವಾಗಿವೆ ಎಂದು…

Read More

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣ, ನಟಿ ರನ್ಯಾ ರಾವ್‌ಗೆ 1,102 ಕೋಟಿ ಮೊತ್ತದ ದಂಡ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ₹1,102 ಕೋಟಿ ದಂಡ ವಿಧಿಸಿದೆ. ಸುಮಾರು 127 ಕೆಜಿ ಚಿನ್ನ ಅಕ್ರಮವಾಗಿ ಸಾಗಣೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 14.2 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದಾಗ ರನ್ಯಾ ರಾವ್‌ ಮಾರ್ಚ್ 3ರಂದು ಡಿಆರ್‌ಐ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಉದ್ಯಮಿ ತರುಣ್ ಕೊಂಡರಾಜು,…

Read More

ಬೀದರ್‌: ₹12 ಕೋಟಿ ಮೌಲ್ಯದ ಅಕ್ರಮ ಗುಟ್ಕಾ ಜಪ್ತಿ, 8 ಮಂದಿ ಬಂಧನ

ಬೀದರ್: ನಗರದಲ್ಲಿ ಅಕ್ರಮವಾಗಿ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಸುತ್ತಿದ್ದ ಜಾಲವನ್ನು ಭೇದಿಸಿರುವ ಗಾಂಧಿಗಂಜ್ ಹಾಗೂ ನೂತನ ನಗರ ಠಾಣೆ ಪೊಲೀಸರು, 12 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಎಂಟು ಜನ ಆರೋಪಿಗಳನ್ನು ವಶಕ್ಕೆ ಪಡೆದು, ಭಾನುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರನ್ನು ತೆಲಂಗಾಣದ ತನ್ವಿರ್, ಬೀದರ್‌ನ ರಿಜ್ವಾನ್, ತನ್ನೀರ್ ಶೇರಿಕಾರ್, ಮಣಿಪುರದ ಥೋಂಬಲ್ ಮೌಜಿಂಗ್‌ನ ಯಾಸೀನ್, ಬಿಶೇನಪುರ ಕೊಕ್ಕಾದ ಮುಹಮ್ಮದ್ ಸಿರಾಜ್ ಖಾನ್, ಮುಹಮ್ಮದ್ ಷರೀಫ್ ಖಾನ್, ಮುಹಮ್ಮದ್…

Read More

ಡಿ.ಜೆ.ಗೆ ನಿರ್ಬಂಧ: ಸರ್ಕಾರದ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ; ಹಾವೇರಿಯಲ್ಲಿ ಮೊದಲ ಎಫ್‌ಐಆರ್‌ ದಾಖಲು!

ಹಾವೇರಿ: ಗಣೇಶೋತ್ಸವದ ಮೆರವಣಿಗೆಗಳಲ್ಲಿ ಡಿ.ಜೆ. (ಡಿಸ್ಕ್ ಜಾಕಿ) ಬಳಸದಂತೆ ಸರ್ಕಾರ ನೀಡಿರುವ ಕಟ್ಟುನಿಟ್ಟಿನ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಹಾವೇರಿ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದಾರೆ. ನಿಯಮ ಮೀರಿ ಡಿ.ಜೆ. ಬಳಸಿದ ಆರೋಪದಡಿ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಸಕ್ತ ವರ್ಷದ ಗಣೇಶೋತ್ಸವದ ಮೊದಲ ಎಫ್‌ಐಆರ್ ದಾಖಲಾಗಿದೆ. ಯುವ ಸಮುದಾಯ ಸಂಭ್ರಮದ ಹೆಸರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತಂದರೆ ಕಾನೂನು ಕ್ರಮ ಎದುರಿಸುವುದು ಅನಿವಾರ್ಯ ಎಂಬುದನ್ನು ಈ ಘಟನೆ ಎತ್ತಿ ತೋರಿಸಿದೆ. ಘಟನೆ ವಿವರಹಾವೇರಿಯ ಸುಭಾಷ್ ವೃತ್ತದಲ್ಲಿ ‘ಹಾವೇರಿ…

Read More