ಫರೀದಾಬಾದ್‌ನಲ್ಲಿ ವಶಪಡಿಸಿಕೊಂಡ ಸ್ಫೋಟಕ ಸ್ಪೋಟ: ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ಆರು ಮಂದಿ ಸಾವು

ಶ್ರೀನಗರ:ಹರಿಯಾಣದ ಫರೀದಾಬಾದ್‌ನಿಂದ ವಶಪಡಿಸಿಕೊಂಡಿದ್ದ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಸ್ಫೋಟಗೊಂಡ ಪರಿಣಾಮ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ನೌಗಾಮ್ ಪೊಲೀಸ್ ಠಾಣೆಯಲ್ಲಿ ಆರು ಮಂದಿ ಮೃತಪಟ್ಟು, 27ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ದುರಂತ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತರಾದವರಲ್ಲಿ ಹೆಚ್ಚಾಗಿ ಪೊಲೀಸ್ ಸಿಬ್ಬಂದಿ ಮತ್ತು ವಿಧಿವಿಜ್ಞಾನ ತಂಡದ (FSL) ಅಧಿಕಾರಿಗಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಭ್ಯವಿರುವ ಮಾಹಿತಿ ಪ್ರಕಾರ, ಇತ್ತೀಚೆಗೆ ಪತ್ತೆಯಾದ ‘ವೈಟ್‌-ಕಾಲರ್’ ಭಯೋತ್ಪಾದಕ ಮಾಡ್ಯೂಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫರೀದಾಬಾದ್‌ನಿಂದ ವಶಪಡಿಸಿಕೊಂಡಿದ್ದ 360…

Read More

ದೆಹಲಿ ಕೆಂಪು ಕೋಟೆ ಬಳಿ ಭೀಕರ ಕಾರು ಸ್ಫೋಟ: 8 ಮಂದಿ ಸಾವು; ಉಗ್ರ ಕೃತ್ಯ ಶಂಕೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆ (ಲಾಲ್ ಕಿಲಾ) ಮೆಟ್ರೋ ನಿಲ್ದಾಣದ ಗೇಟ್ ನಂ. 1 ರ ಸಮೀಪ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಭೀಕರ ಕಾರು ಸ್ಫೋಟ ಸಂಭವಿಸಿದ್ದು, ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ ಮತ್ತು 24 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ರಭಸಕ್ಕೆ ಹಲವಾರು ಕಾರುಗಳು ಮತ್ತು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೆಂಪುಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿಯ ಸುಭಾಷ್…

Read More

ಶಾಲೆ ಆವರಣದಲ್ಲಿ ಆಘಾತಕಾರಿ ಘಟನೆ: ವಿರಾಜಪೇಟೆ ಶಾಲೆಯ 25ಕ್ಕೂ ಅಧಿಕ ಮಕ್ಕಳ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಜೇನು ಹಿಂಡು ಏಕಾಏಕಿ ದಾಳಿ ನಡೆಸಿದ್ದು, ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪ್ರತಿದಿನದಂತೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ಬೆಳಗಿನ ಪ್ರಾರ್ಥನೆ ಮುಗಿಸಿದ್ದರು. ಬಿಸಿ ಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದ ವೇಳೆ, ಸಮೀಪದ ತೋಟದಿಂದ ಹಾರಿಬಂದ ಜೇನು ಹಿಂಡು ಮಕ್ಕಳು ಮತ್ತು ಶಿಕ್ಷಕರ ಮೇಲೆ ದಾಳಿ ಮಾಡಿತು. ಮಕ್ಕಳು ನೋವಿನಿಂದ ಚೀರಾಡುತ್ತಿದ್ದ ಶಬ್ದ ಕೇಳುತ್ತಿದ್ದಂತೆ ಸ್ಥಳೀಯರು…

Read More

🛑 ಗೋರ ದುರಂತ: ಟಿಪ್ಪರ್–ಬಸ್ ಭೀಕರ ಡಿಕ್ಕಿ; ತೆಲಂಗಾಣದಲ್ಲಿ 20 ಸಾವು

🛑 ಗೋರ ದುರಂತ: ಟಿಪ್ಪರ್–ಬಸ್ ಭೀಕರ ಡಿಕ್ಕಿ; ತೆಲಂಗಾಣದಲ್ಲಿ 20 ಸಾವು ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 20 ಮಂದಿ ದುರ್ಮರಣ ಹೊಂದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಹೈದರಾಬಾದ್–ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (RTC) ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಘೋರ ದುರಂತ…

Read More

🚨 ಕೋಳಿವಾಡದಲ್ಲಿ ಬೀಗ ಮುರಿದು ಕಳ್ಳತನ: ₹6.20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

🚨 ಕೋಳಿವಾಡದಲ್ಲಿ ಬೀಗ ಮುರಿದು ಕಳ್ಳತನ: ₹6.20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ ಹುಬ್ಬಳ್ಳಿ: ನಗರ ಸಮೀಪದ ಕೋಳಿವಾಡ ಗ್ರಾಮದಲ್ಲಿ ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು, ಅಡುಗೆ ಮನೆಯ ಪೆಟ್ಟಿಗೆಯಲ್ಲಿ ಇರಿಸಿದ್ದ ಅಂದಾಜು ₹6.20 ಲಕ್ಷ ಮೌಲ್ಯದ 62 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಕಳ್ಳತನದ ಘಟನೆಯು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಾರ್ಯನಿಮಿತ್ತ ಹೊರ ಹೋದಾಗ ಕೃತ್ಯಗ್ರಾಮದ ನಿವಾಸಿ ಮಂಜುನಾಥ ಸಣಕಲ್ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮಂಜುನಾಥ ಸಣಕಲ್…

Read More

ರಾಜಸ್ಥಾನ:ಭೀಕರ ಅಪಘಾತ: ದೇವಸ್ಥಾನದಿಂದ ಮರಳುತ್ತಿದ್ದ ಭಕ್ತರ ಬಸ್ ಟ್ರೈಲರ್‌ಗೆ ಡಿಕ್ಕಿ; 18 ಮಂದಿ ದುರ್ಮರಣ

💥 ಭೀಕರ ಅಪಘಾತ: ದೇವಸ್ಥಾನದಿಂದ ಮರಳುತ್ತಿದ್ದ ಭಕ್ತರ ಬಸ್ ಟ್ರೈಲರ್‌ಗೆ ಡಿಕ್ಕಿ; 18 ಮಂದಿ ದುರ್ಮರಣ ಫಲೋದಿ (ರಾಜಸ್ಥಾನ): ನವೆಂಬರ್ 2 ರಾಜಸ್ಥಾನದ ಫಲೋದಿ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 18 ಮಂದಿ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೇವಸ್ಥಾನಕ್ಕೆ ದರ್ಶನ ಮಾಡಿ ಮರಳುತ್ತಿದ್ದ ಟೆಂಪೋ ಟ್ರಾವೆಲರ್ (ಬಸ್) ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರೈಲರ್ ವಾಹನಕ್ಕೆ ಅಪ್ಪಳಿಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಮಟೋದ ಬಳಿ…

Read More

ಭೀಕರ ನಿರ್ಲಕ್ಷ್ಯ: ಸಾರಾಯಿ ಸೇವಿಸಿ ಕೆಎಸ್‌ಆರ್‌ಟಿಸಿ ಬಸ್ ಚಾಲನೆ; ನಾಯಿಗೆ ಮತ್ತು ಟಾಟಾ ಏಸ್ ವಾಹನಕ್ಕೆ ಡಿಕ್ಕಿ – ಪ್ರಯಾಣಿಕರಿಂದ ತೀವ್ರ ತರಾಟೆ

📰 ಭೀಕರ ನಿರ್ಲಕ್ಷ್ಯ: ಸಾರಾಯಿ ಸೇವಿಸಿ ಕೆಎಸ್‌ಆರ್‌ಟಿಸಿ ಬಸ್ ಚಾಲನೆ; ನಾಯಿಗೆ ಮತ್ತು ಟಾಟಾ ಏಸ್ ವಾಹನಕ್ಕೆ ಡಿಕ್ಕಿ – ಪ್ರಯಾಣಿಕರಿಂದ ತೀವ್ರ ತರಾಟೆ ಲಕ್ಷ್ಮೇಶ್ವರ (ಗದಗ ಜಿಲ್ಲೆ):ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟವಾಡಿದ ಗಂಭೀರ ಘಟನೆಯೊಂದು ಇತ್ತೀಚೆಗೆ ಲಕ್ಷ್ಮೇಶ್ವರ ಡಿಪೋ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನೊಬ್ಬ ಅತಿಯಾದ ಸಾರಾಯಿ (ಮದ್ಯ) ಸೇವಿಸಿ ಬಸ್ಸನ್ನು ನಿಯಂತ್ರಣ ತಪ್ಪಿ ಚಲಾಯಿಸಿದ್ದು, ಇದರಿಂದಾಗಿ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾದರು. ಚಾಲಕನ ಈ ದುರ್ವರ್ತನೆಗೆ ಕೋಪಗೊಂಡ ಪ್ರಯಾಣಿಕರು ಆತನನ್ನು…

Read More

ದಾರುಣ ಅಂತ್ಯ: ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣು; ಕೊಪ್ಪಳದ ಬೆಣಕಲ್‌ನಲ್ಲಿ ಘಟನೆ

ಕುಕನೂರ (ಕೊಪ್ಪಳ ಜಿಲ್ಲೆ) ಜೀವನ ನಿರ್ವಹಣೆಯ ಸಮಸ್ಯೆಗಳು ಅಥವಾ ಕೌಟುಂಬಿಕ ಕಾರಣಗಳಿಂದ ಮನನೊಂದ ಮಹಿಳೆಯೊಬ್ಬರು ತಮ್ಮಿಬ್ಬರು ಪುಟ್ಟ ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅತೀ ದುರಂತ ಘಟನೆ ತಾಲ್ಲೂಕಿನ ಬೆಣಕಲ್ ಗ್ರಾಮದಲ್ಲಿ ಸೋಮವಾರ ನಡೆದಿದೆ. ಈ ಕರುಣಾಜನಕ ಘಟನೆ ಇಡೀ ಗ್ರಾಮದಲ್ಲಿ ಸೂತಕದ ವಾತಾವರಣ ಸೃಷ್ಟಿಸಿದೆ. ​ಮಕ್ಕಳಿಗೆ ನೇಣು ಹಾಕಿ ತಾಯಿ ಆತ್ಮಹತ್ಯೆ: ​ಮೃತ ದುರ್ದೈವಿಗಳನ್ನು ಲಕ್ಷ್ಮವ್ವ ಭಜಂತ್ರಿ (30), ಆಕೆಯ ಪುತ್ರ ರಮೇಶ್ (4) ಮತ್ತು ಪುತ್ರಿ ಜಾಹ್ನವಿ (2) ಎಂದು ಗುರುತಿಸಲಾಗಿದೆ. ಲಕ್ಷ್ಮವ್ವ…

Read More

ಸತಾರಾ: “ಪೊಲೀಸ್‌ನಿಂದ 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ”- ಕೈಯಲ್ಲಿ ‘ಡೆತ್ ನೋಟ್’ ಬರೆದು ವೈದ್ಯೆ ಆತ್ಮಹತ್ಯೆ; ಪಿಎಸ್‌ಐ ಅಮಾನತು

ಮಹಾರಾಷ್ಟ್ರದ: ಸತಾರಾ ಜಿಲ್ಲೆಯಲ್ಲಿ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆ ಕೈ ಮೇಲೆ ಬರೆದ ‘ಡೆತ್ ನೋಟ್’ (ಮರಣಪತ್ರ) ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಐದು ತಿಂಗಳ ಅವಧಿಯಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಒಬ್ಬರು ತನ್ನ ಮೇಲೆ ಸರಣಿ ಅತ್ಯಾಚಾರ ಎಸಗಿದ್ದಾರೆ ಎಂದು ವೈದ್ಯೆ ಆರೋಪಿಸಿ ಸಾವಿಗೆ ಶರಣಾಗಿದ್ದಾರೆ. ಕೈ ಮೇಲೆ ಡೆತ್ ನೋಟ್ ಬರೆದ ವೈದ್ಯೆ:ಸತಾರಾ ಜಿಲ್ಲೆಯ ಫಲಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 28 ವರ್ಷದ ವೈದ್ಯೆ, ಗುರುವಾರ (ಅಕ್ಟೋಬರ್ 23,) ರಾತ್ರಿ ಸ್ಥಳೀಯ ಹೋಟೆಲ್ ಒಂದರ…

Read More

ಹಾವೇರಿ: ಇನ್‌ಸ್ಟಾಗ್ರಾಮ್ ಮೂಲಕ ಪರಿಚಿತಳಾದ ಅಪ್ರಾಪ್ತೆ ಮೇಲೆ ಸರಣಿ ಅತ್ಯಾಚಾರ; ನಾಲ್ವರು ಆರೋಪಿಗಳ ಬಂಧನ

ಹಾನಗಲ್ಲ: ಜಿಲ್ಲೆಯ ಹಾನಗಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ: ಇನ್‌ಸ್ಟಾಗ್ರಾಮ್ (Instagram) ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯ ಮೇಲೆ ಸರಣಿ ಅತ್ಯಾಚಾರ ಎಸಗಿರುವ ಆಘಾತಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯ ವಿವರ:ಆರೋಪಿಗಳು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು, ನಂತರ ಆಕೆಯನ್ನು ಪುಸಲಾಯಿಸಿ ಸರಣಿ ಅತ್ಯಾಚಾರ ಎಸಗಿರುವ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿಯ ಕುಟುಂಬಸ್ಥರು ದೂರು ನೀಡಿದ ಬೆನ್ನಲ್ಲೇ ಹಾನಗಲ್ಲ ಪೊಲೀಸರು ತಕ್ಷಣ…

Read More