ಪತ್ನಿಯನ್ನು ಕೊಡಲಿಯಿಂದ ಕೊಲೆ ಮಾಡಿದ ಗುರುಶಾಂತಪ್ಪನಿಗೆ ಜೀವಾವಧಿ ಶಿಕ್ಷೆ: ಧಾರವಾಡ ಜಿಲ್ಲಾ ನ್ಯಾಯಾಲಯ ತೀರ್ಪು
ಧಾರವಾಡ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಾಲವಾಡ ಗ್ರಾಮದ ಗುರುಶಾಂತಪ್ಪ ಅನವಾಲದನಿ ಎಂಬಾತ ತನ್ನ ಪತ್ನಿ ಪಾರವ್ವ ಹಾಗೂ ಮನೆಯ ಸದಸ್ಯರು ತನ್ನ ಮೇಲೆ ಮಾಟಮಂತ್ರ ಮಾಡಿಸಿದ್ದಾರೆ ಎಂದು ಆರೋಪಿಸಿ ನಿರಂತರ ಕಿರುಕುಳ ನೀಡುತ್ತಿದ್ದನು. ಇದೇ ವಿಚಾರವಾಗಿ 2024ರ ಮಾರ್ಚ್ 30ರಂದು ನಸುಕಿನ ವೇಳೆ ಮಲಗಿದ್ದ ಪತ್ನಿ ಪಾರವ್ವಳ ಮೇಲೆ…

