ಪತ್ನಿಯನ್ನು ಕೊಡಲಿಯಿಂದ ಕೊಲೆ ಮಾಡಿದ ಗುರುಶಾಂತಪ್ಪನಿಗೆ ಜೀವಾವಧಿ ಶಿಕ್ಷೆ: ಧಾರವಾಡ ಜಿಲ್ಲಾ ನ್ಯಾಯಾಲಯ ತೀರ್ಪು

ಧಾರವಾಡ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಾಲವಾಡ ಗ್ರಾಮದ ಗುರುಶಾಂತಪ್ಪ ಅನವಾಲದನಿ ಎಂಬಾತ ತನ್ನ ಪತ್ನಿ ಪಾರವ್ವ ಹಾಗೂ ಮನೆಯ ಸದಸ್ಯರು ತನ್ನ ಮೇಲೆ ಮಾಟಮಂತ್ರ ಮಾಡಿಸಿದ್ದಾರೆ ಎಂದು ಆರೋಪಿಸಿ ನಿರಂತರ ಕಿರುಕುಳ ನೀಡುತ್ತಿದ್ದನು. ಇದೇ ವಿಚಾರವಾಗಿ 2024ರ ಮಾರ್ಚ್ 30ರಂದು ನಸುಕಿನ ವೇಳೆ ಮಲಗಿದ್ದ ಪತ್ನಿ ಪಾರವ್ವಳ ಮೇಲೆ…

Read More

ಧಾರವಾಡದಲ್ಲಿ ಘೋರ ಕೃತ್ಯ: ಪತ್ನಿಯಿಂದಲೇ ವೈದ್ಯ ಪತಿಯ ಹತ್ಯೆ, ಮಗನ ಮೇಲೂ ಮಾರಣಾಂತಿಕ ಹಲ್ಲೆ!

ಧಾರವಾಡದಲ್ಲಿ ಘೋರ ಕೃತ್ಯ: ಪತ್ನಿಯಿಂದಲೇ ವೈದ್ಯ ಪತಿಯ ಹತ್ಯೆ, ಮಗನ ಮೇಲೂ ಮಾರಣಾಂತಿಕ ಹಲ್ಲೆ! ಧಾರವಾಡ: ಇಡೀ ಸಾಂಸ್ಕೃತಿಕ ನಗರಿಯನ್ನೇ ಬೆಚ್ಚಿಬೀಳಿಸುವ ಭೀಕರ ದುರಂತವೊಂದು ರಂಕಾ ಅಪಾರ್ಟ್‌ಮೆಂಟ್‌ನಲ್ಲಿ ವರದಿಯಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವೈದ್ಯರೊಬ್ಬರನ್ನು ಅವರ ಧರ್ಮಪತ್ನಿಯೇ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ನಲವತ್ತೈದು ವರ್ಷದ ಡಾ. ಕಿರಣ್ ಹೊನಣ್ಣವರ್ ಎಂದು ಗುರುತಿಸಲಾಗಿದೆ. ಆರೋಪ ಎದುರಿಸುತ್ತಿರುವ ಪತ್ನಿ ಪ್ರಿಯಾಂಕಾ ಅವರನ್ನು ಸದ್ಯ ಧಾರವಾಡ ನಗರ ಪೊಲೀಸರು ವಶಕ್ಕೆ ಪಡೆದು ತೀವ್ರ…

Read More

11 ಲಕ್ಷ ಲಂಚ ಪ್ರಕರಣ: ಅಫಜಲಪುರ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ

ಕಲಬುರಗಿ: ಏಳು ವರ್ಷಗಳ ಹಿಂದೆ ಇಡೀ ರಾಜ್ಯದ ಗಮನ ಸೆಳೆದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಅಫಜಲಪುರದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಹಾಗೂ ಮಧ್ಯವರ್ತಿ ಶಿವಾನಂದ ಜಮಖಂಡಿ ಅವರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತಲಾ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹20 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಆದೇಶ ಹೊರಡಿಸಿದ್ದಾರೆ. ದಂಡ ಪಾವತಿಸಲು ವಿಫಲರಾದರೆ ಹೆಚ್ಚುವರಿ ಜೈಲು…

Read More

ಯಲ್ಲಾಪುರ ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ: ಧಾರವಾಡ ಮೂಲದ 6 ಮಂದಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಸಮೀಪ ಇಂದು ಮುಂಜಾನೆ ಲಾರಿ ಹಾಗೂ ತೂಫಾನ್ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಧಾರವಾಡ ಮೂಲದ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ (26), ಅಭಿಷೇಕ್ (26), ಸಂಜೀವ್/ಸಂಜಯ ಅಂಗಡಿ ಸೇರಿದಂತೆ ಒಟ್ಟು ಆರು ಮಂದಿ ಎಂದು ಗುರುತಿಸಲಾಗಿದೆ. ಇವರಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು…

Read More

ಹುಬ್ಬಳ್ಳಿ: ಮದುವೆಯಾಗಿ ಐದನೇ ತಿಂಗಳಲ್ಲೇ ಪತ್ನಿ ಕೊಲೆ: ಕ್ಷುಲ್ಲಕ ಜಗಳಕ್ಕೆ ಹೆಲ್ಮೆಟ್‌ನಿಂದ ತಲೆಗೆ ಹೊಡೆದು ಹತ್ಯೆ; ಪತಿ ಪರಾರಿ

ಹುಬ್ಬಳ್ಳಿ: ಮದುವೆಯಾಗಿ ನಾಲ್ಕು ತಿಂಗಳು ಪೂರ್ಣಗೊಂಡು ಐದನೇ ತಿಂಗಳು ಆರಂಭವಾಗಿದ್ದರೂ ದಾಂಪತ್ಯ ಜೀವನ ಸರಿಯಾಗಿ ಸಾಗದ ಹಿನ್ನೆಲೆ ಕ್ಷುಲ್ಲಕ ಜಗಳವೇ ಯುವತಿಯ ಜೀವ ಕಸಿದಿರುವ ಘಟನೆ ಹುಬ್ಬಳ್ಳಿ ಸಮೀಪದ ತಾರಿಹಾಳ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಮೃತೆಯನ್ನು ಇಬ್ರಾಹಿಂಪುರ ಗ್ರಾಮದ ನಾಗರತ್ನ (22) ಎಂದು ಗುರುತಿಸಲಾಗಿದೆ. ಆರೋಪಿ ಪತಿ ತಾರಿಹಾಳ ಗ್ರಾಮದ ಗಣೇಶನಗರ ನಿವಾಸಿ ಶಿವರಾಜ್ ಹುಲಿಮನಿ (28) ಎಂದು ತಿಳಿದುಬಂದಿದೆ. ನಾಲ್ಕೂವರೆ ತಿಂಗಳ ಹಿಂದೆ ಇವರಿಬ್ಬರ ವಿವಾಹ ನಡೆದಿತ್ತು. ಕುಟುಂಬದ ಮೂಲಗಳ ಪ್ರಕಾರ, ಮದುವೆಯಾದ ಬಳಿಕ…

Read More

ಅಕ್ರಮ ಸಂಬಂಧದ ದುರಂತ ಅಂತ್ಯ: ಮದುವೆಗೆ ಒತ್ತಾಯಿಸಿದ್ದ ಮಹಿಳೆಯನ್ನು ಕೊಲೆಗೈದು ಮೃತದೇಹ ಸುಟ್ಟ ಆರೋಪ; ತನಿಖೆ ಭೀತಿಗೆ ಆರೋಪಿ ಆತ್ಮಹತ್ಯೆ

ಮಂಡ್ಯ: ಅಕ್ರಮ ಸಂಬಂಧದ ಹಿನ್ನೆಲೆ ಮದುವೆಗೆ ಒತ್ತಾಯಿಸಿದ್ದ ಮಹಿಳೆಯನ್ನು ಕೊಲೆಗೈದು ಮೃತದೇಹವನ್ನು ಸುಟ್ಟು ಸಾಕ್ಷ್ಯ ನಾಶಪಡಿಸಿದ ಪ್ರಕರಣ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಪ್ರಮುಖ ಆರೋಪಿ ತನ್ನ ತಾಯಿಯೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ನಳಿನಿ ಎಂದು ಗುರುತಿಸಲಾಗಿದೆ. ಅವರು ವೈಯಕ್ತಿಕ ಕಾರಣಗಳಿಂದ ಪತಿಯಿಂದ ದೂರವಾಗಿ ಒಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಕೆಲ ತಿಂಗಳ ಹಿಂದೆ ದೇವಸ್ಥಾನವೊಂದರಲ್ಲಿ ರಾಜಶೇಖರ ಎಂಬಾತನ ಪರಿಚಯವಾಗಿದ್ದು, ಬಳಿಕ…

Read More

ಕಳಪೆ ಕಾಮಗಾರಿಗೆ ಮಕ್ಕಳ ಜೀವ ಬಲಿ? ಬಲಕುಂದಿ ಸರ್ಕಾರಿ ಶಾಲೆಯ ಗೇಟ್ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ; ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ

ಇಳಕಲ್: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯದ್ವಾರದ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ದುರ್ಘಟನೆ ಶಾಲೆಯಲ್ಲಿನ ಕಳಪೆ ಕಾಮಗಾರಿ ಹಾಗೂ ಆಡಳಿತ ಮಂಡಳಿಯ ನಿರ್ಲಕ್ಷ್ಯವನ್ನು ಬಯಲಿಗೆಳೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳ ಪೈಕಿ ನಯನಾ ಕುಮಾರಿ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಗೇಟ್ ಆಕೆಯ ಮೇಲೆ ಬಿದ್ದ ಪರಿಣಾಮ ಮೂಗಿಗೆ ತೀವ್ರ ಪೆಟ್ಟು…

Read More

ಕುಂದಗೋಳ ಬಳಿ ಭೀಕರ ರಸ್ತೆ ಅಪಘಾತ: ಲಾರಿ-ಬಸ್ ಮುಖಾಮುಖಿ ಡಿಕ್ಕಿ, ಶಿರೂರ ಗ್ರಾಮದ ಐಟಿಐ ವಿದ್ಯಾರ್ಥಿಯ ರುಂಡ ಕತ್ತರಿಸಿ ಸ್ಥಳದಲ್ಲೇ ದಾರುಣ ಸಾವು!

​ಕುಂದಗೋಳ: ಪಟ್ಟಣದ ಹುಬ್ಬಳ್ಳಿ-ಲಕ್ಷ್ಮೇಶ್ವರ ಮುಖ್ಯ ರಸ್ತೆಯ ಕೊಪ್ಪದ ಕೆರೆಯ ಬಳಿ ಬುಧವಾರ ಸಂಜೆ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐಟಿಐ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ್ದಾನೆ. ಶಿರೂರ ಗ್ರಾಮದ ನಿವಾಸಿಯಾದ, ಐಟಿಐ ಓದುತ್ತಿದ್ದ ಫಕ್ಕೀರೇಶ ಚನ್ನಯ್ಯ ಮುತ್ತಳ್ಳಿಮಠ (ಅಂದಾಜು 17 ವರ್ಷ) ಎಂಬಾತನೇ ಈ ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ​ಸಂಜೆ ಸುಮಾರು 5 ಗಂಟೆಯ ವೇಳೆಗೆ ಲಕ್ಷ್ಮೇಶ್ವರ ಡಿಪೋಗೆ ಸೇರಿದ ಕೆ.ಎ. 26 ಎಫ್-1039 ನಂಬರಿನ…

Read More

ಮಧುವನಹಳ್ಳಿ ಬೈಪಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಇಬ್ಬರ ದುರ್ಮರಣ, 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ವರದಿ: ಕಾರ್ತಿಕ್ ಗೌಡ, ಹನೂರ ಚಾಮರಾಜನಗರ: ಮಲೆ ಮಹದೇಶ್ವರ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬೈಪಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್‌ನ ಟೈರ್ ಸಿಡಿದ ಪರಿಣಾಮ ಸೋಮವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಚಾಮರಾಜನಗರದ ಕುದೇರು ಗ್ರಾಮದ ನಿವಾಸಿ ಪುಟ್ಟಸ್ವಾಮಿ ಅವರ ಪುತ್ರ ಪ್ರಕಾಶ್ (51) ಹಾಗೂ ಕೊಳ್ಳೇಗಾಲ ಪಟ್ಟಣದ ನಿವಾಸಿ, ಒಂದು…

Read More

ಗದಗ: ಅಕ್ರಮ ಬಡ್ಡಿ ವ್ಯವಹಾರಕ್ಕೆ ಪೊಲೀಸರ ಬಿಗಿ ಕ್ರಮ: ₹60 ಲಕ್ಷ ಮೌಲ್ಯದ ಚಿನ್ನ, ₹5.5 ಲಕ್ಷ ನಗದು ವಶ

ಗದಗ: ಅಕ್ರಮ ಬಡ್ಡಿ ವ್ಯವಹಾರ, ಅತಿಯಾದ ಬಡ್ಡಿ ವಸೂಲಿ ಹಾಗೂ ಸಾಲಗಾರರಿಗೆ ಬೆದರಿಕೆ ಹಾಕುತ್ತಿರುವ ಕುರಿತು ಬಂದ ದೂರಿನ ಮೇರೆಗೆ ಗದಗ ಜಿಲ್ಲಾ ಪೊಲೀಸರು ಆರು ವಿಶೇಷ ತಂಡಗಳನ್ನು ರಚಿಸಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯ ವೇಳೆ 150ಕ್ಕೂ ಹೆಚ್ಚು ಚೆಕ್‌ಗಳು, 65ಕ್ಕೂ ಹೆಚ್ಚು ಖಾಲಿ ಬಾಂಡ್‌ಗಳು, ವಿವಿಧ ಒಪ್ಪಂದ ಪತ್ರಗಳು ಹಾಗೂ ಪ್ರಮುಖ ದಾಖಲೆಗಳು ಪತ್ತೆಯಾಗಿವೆ. ಅಲ್ಲದೆ 9 ಬ್ಯಾಂಕ್ ಪಾಸ್‌ಬುಕ್‌ಗಳು, 11 ಚೆಕ್‌ಬುಕ್‌ಗಳು, 5ಕ್ಕೂ ಹೆಚ್ಚು ಎಟಿಎಂ ಕಾರ್ಡ್‌ಗಳು ಹಾಗೂ 3…

Read More