ವಡೋದರಾದಲ್ಲಿ ಗಣೇಶ ಚತುರ್ಥಿ ವೇಳೆ ಗಣೇಶ ವಿಗ್ರಹಕ್ಕೆ ಮೊಟ್ಟೆ ಎಸೆದ ಕಿಡಿಗೇಡಿಗಳಿಗೆ ಕೈ ಹಗ್ಗ ಕಟ್ಟಿ ಸಾರ್ವಜನಿಕವಾಗಿ ಊರೆಲ್ಲ ಮೆರವಣಿಗೆ
ವಡೋದರ (ಗುಜರಾತ್), ಆ.28 – ವಡೋದರ ನಗರದ ಸತ್ಯವಿಸ್ತಾರ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಗಣೇಶ ಚತುರ್ಥಿಯ ಮೆರವಣಿಗೆಯ ಸಂದರ್ಭದಲ್ಲಿ ಕಿಡಿಗೇಡಿಗಳು ಗಣೇಶನ ವಿಗ್ರಹಕ್ಕೆ ಮೊಟ್ಟೆ ಎಸೆದ ಹೀನ ಕೃತ್ಯದಿಂದ ನಗರದಲ್ಲಿ ತೀವ್ರ ಉದ್ವಿಗ್ನತೆ ನಿರ್ಮಾಣವಾಗಿದೆ. ಈ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಅಮಾನುಷ ಕೃತ್ಯವು ಭಕ್ತರಲ್ಲಿ ಆಕ್ರೋಶ ಉಂಟುಮಾಡಿದೆ. ಪೊಲೀಸ್ ಆಯುಕ್ತ ನರಸಿಂಹ ಕೋಮರ್ ಅವರ ಆದೇಶದ ಮೇರೆಗೆ, ದುಷ್ಕರ್ಮಿಗಳನ್ನು ಪೊಲೀಸರು ತಕ್ಷಣವೇ ಬಂಧಿಸಿದರು. ಬಂಧಿತ ಆರೋಪಿಗಳಲ್ಲಿ ಸುಫಿಯಾನ್ ಅಲಿಯಾಸ್ ಗಾಮಾ ಸಲೀಂಬಾಯಿ ಮನ್ಸೂರಿ, ಶಹನವಾಜ್ ಅಲಿಯಾಸ್…

