ರಾಜಸ್ಥಾನದ ಜುಂಝುನೂನಲ್ಲಿ ಆಟೋ ಗ್ಯಾರೇಜ್‌ಗೆ ಕಿಡಿಗೇಡಿಗಳ ಬೆಂಕಿ; 18 ಕಾರುಗಳು ಸುಟ್ಟು ಭಸ್ಮ

​ರಾಜಸ್ಥಾನದ: ಜುಂಝುನೂ ಜಿಲ್ಲೆಯಲ್ಲಿರುವ ಮೋಟರ್ಸ್ ವರ್ಕ್‌ಶಾಪ್‌ವೊಂದಕ್ಕೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಕನಿಷ್ಠ 18 ಕಾರುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಶನಿವಾರ (ನವೆಂಬರ್ 29) ತಡರಾತ್ರಿ ಈ ಘಟನೆ ನಡೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ​ಜುಂಝುನೂನ ಚುರು ಬೈಪಾಸ್ ರಸ್ತೆಯ ಸಗೀರಾ ವೃತ್ತದ ಸಮೀಪವಿರುವ ‘ಮನ್ನತ್ ಮೋಟರ್ಸ್’ ಎಂಬ ವರ್ಕ್‌ಶಾಪ್‌ನಲ್ಲಿ ಈ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಮೂಲಗಳ ಪ್ರಕಾರ, ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು…

Read More

ಪರಪ್ಪನ ಅಗ್ರಹಾರ: ‘ಕಳ್ಳಬಟ್ಟಿ ತಯಾರಿಕೆ’ ಜಾಲ ಬಯಲು? ಜೈಲಾಧಿಕಾರಿಗಳಿಗೆ ವಿಡಿಯೋ ಇಟ್ಟು ಬೆದರಿಕೆ!

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವು ಮತ್ತೊಮ್ಮೆ ಗಂಭೀರ ಭದ್ರತಾ ಲೋಪದ ಆರೋಪದ ಸುಳಿಯಲ್ಲಿ ಸಿಲುಕಿದ್ದು, ಸಜಾ ಬಂದಿಗಳು ಮತ್ತು ವಿಚಾರಣಾಧೀನ ಕೈದಿಗಳು ಇರಿಸಲಾದ ಬ್ಯಾರಕ್‌ಗಳಲ್ಲಿಯೇ ಕಳ್ಳಬಟ್ಟಿ ಮಾದರಿಯ ನಶೆ ಏರಿಸುವ ಮದ್ಯವನ್ನು ತಯಾರಿಸುತ್ತಿದ್ದರೆಂಬ ಆತಂಕಕಾರಿ ಸಂಶಯ ವ್ಯಕ್ತವಾಗಿದೆ. ಜೈಲಿನೊಳಗಿನ ಕೊಳೆತ ಹಣ್ಣುಗಳ ಭಾರೀ ದಾಸ್ತಾನಿನ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜೈಲಿನ ಭದ್ರತಾ ವ್ಯವಸ್ಥೆಯು ಸಂಪೂರ್ಣ ಕುಸಿದಿದೆಯೇ ಎಂಬ ಪ್ರಶ್ನೆ ಎದ್ದಿದೆ. ​ಬ್ಯಾರಕ್‌ವೊಂದರಲ್ಲಿ ಕೊಳೆತ ದ್ರಾಕ್ಷಿ, ಸೇಬು, ಗೋಧಿ, ಸಕ್ಕರೆ ಹಾಗೂ ತಂಬಾಕು ಉತ್ಪನ್ನಗಳನ್ನು ಸಂಗ್ರಹಿಸಿರುವುದು…

Read More

ಲಕ್ಷಾಂತರ ರೂ. ಮೌಲ್ಯದ ಸ್ಪಿರಿಟ್ ವಶ; ಧಾರವಾಡ ಪೊಲೀಸರ ದಿಟ್ಟ ಕಾರ್ಯಾಚರಣೆ!

ಗರಗ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಸಾಗಾಟ ಬಯಲು; 70 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಜಪ್ತಿ ​ಧಾರವಾಡ: ಅಕ್ರಮ ಸ್ಪಿರಿಟ್ ಸಾಗಾಣಿಕೆ ಜಾಲಕ್ಕೆ ಧಾರವಾಡ ಜಿಲ್ಲಾ ಪೊಲೀಸರು ಭಾರಿ ಹೊಡೆತ ನೀಡಿದ್ದು, ಬರೋಬ್ಬರಿ 34 ಲಕ್ಷಕ್ಕೂ ಹೆಚ್ಚು ಮೌಲ್ಯದ ಸ್ಪಿರಿಟ್ ಕ್ಯಾನ್‌ಗಳನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆಯ ಈ ದಿಟ್ಟ ಕಾರ್ಯಾಚರಣೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ​ಘಟನೆಯ ವಿವರ: ​ಧಾರವಾಡ ಜಿಲ್ಲೆಯ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ತೇಗೂರ ಗ್ರಾಮದ…

Read More

ಯುವ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮೂವರು ದುರಂತ ಸಾವು!

ಜೇವರ್ಗಿ ಬಳಿ ನಡೆದ ಭೀಕರ ಅಪಘಾತದಲ್ಲಿ ಅಧಿಕಾರಿ ಹಾಗೂ ಅವರ ಇಬ್ಬರು ಸಹೋದರರು ಮೃತಪಟ್ಟಿದ್ದರಿಂದ ಆಡಳಿತ ವಲಯದಲ್ಲಿ ಶೋಕದ ವಾತಾವರಣ. ​ಕಲಬುರಗಿ: ಕರ್ನಾಟಕ ಕೇಡರ್‌ನ ಯುವ ಮತ್ತು ಸಮರ್ಥ ಅಧಿಕಾರಿಯಾದ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರು ಭೀಕರ ರಸ್ತೆ ಅಪಘಾತದಲ್ಲಿ ತಮ್ಮ ಇಬ್ಬರು ಸಹೋದರರೊಂದಿಗೆ ಮೃತಪಟ್ಟಿರುವ ಸುದ್ದಿ ಆಡಳಿತ ವಲಯದಲ್ಲಿ ತೀವ್ರ ಆಘಾತ ಮೂಡಿಸಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಬೈಪಾಸ್ ರಸ್ತೆಯ ಬಳಿ ಈ ದುರಂತ ಸಂಭವಿಸಿದ್ದು, ಒಟ್ಟು ಮೂವರು ವ್ಯಕ್ತಿಗಳು ಪ್ರಾಣ ಕಳೆದುಕೊಂಡಿದ್ದಾರೆ. ​ಘಟನೆಯ…

Read More

ಹುಬ್ಬಳ್ಳಿ: ಚಿನ್ನ ದೋಚಿದ್ದ ಪ್ರಕರಣ; ಇಬ್ಬರು ಪಿಎಸ್‌ಐಗಳು ಅರೆಸ್ಟ್, ಕೋಟ್ಯಂತರ ರೂ. ಮೌಲ್ಯದ ಚಿನ್ನ ವಶ!

​ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ ನಡೆದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಮತ್ತು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆಯ ಇಬ್ಬರು ಸಬ್ ಇನ್‌ಸ್ಪೆಕ್ಟರ್‌ಗಳನ್ನು (ಪಿಎಸ್‌ಐ) ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ದಿಗ್ಭ್ರಮೆಗೊಳಿಸುವ ಘಟನೆ ಪೊಲೀಸ್ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ​ಕೇರಳ ಮೂಲದ ಆಭರಣ ವ್ಯಾಪಾರಿಯೊಬ್ಬರಿಂದ ಸುಮಾರು ಮೂರು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನ ಮತ್ತು ನಗದನ್ನು ದೋಚಿದ್ದ ಪ್ರಕರಣದಲ್ಲಿ, ಇದೇ ಇಬ್ಬರು ಪಿಎಸ್‌ಐಗಳ ಪಾತ್ರ ದೃಢಪಟ್ಟಿದೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ….

Read More

ಕೌಟುಂಬಿಕ ಕಲಹಕ್ಕೆ ಬೇಸತ್ತು ಕುರಿಗಾಹಿ ಆತ್ಮಹತ್ಯೆ: ನಾಲ್ವರ ಬಂಧನ

ಮರಣಪೂರ್ವ ವಿಡಿಯೋದಲ್ಲಿ ಕಿರುಕುಳದ ಬಗ್ಗೆ ಮಾಹಿತಿ ನೀಡಿದ ಯುವಕ ​ಹಾವೇರಿ: ಪತ್ನಿ ಹಾಗೂ ಆಕೆಯ ಕುಟುಂಬದವರಿಂದ ತೀವ್ರ ಕಿರುಕುಳಕ್ಕೆ ಬೇಸತ್ತ ಕುರಿಗಾಹಿಯೊಬ್ಬ ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಅಂಕಲಿ ಗ್ರಾಮದ ನಿವಾಸಿ ಮಂಜುನಾಥ ಚಿಲ್ಲೋಜಿ (26) ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಸೇರಿದಂತೆ ನಾಲ್ವರನ್ನು ಹಿರೇಕೆರೂರು ಪೊಲೀಸರು ಬಂಧಿಸಿದ್ದಾರೆ. ​ಹಿರೇಕೆರೂರಿನಲ್ಲಿ ದುರಂತ ಅಂತ್ಯ…

Read More

ಫರೀದಾಬಾದ್‌ನಲ್ಲಿ ವಶಪಡಿಸಿಕೊಂಡ ಸ್ಫೋಟಕ ಸ್ಪೋಟ: ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ಆರು ಮಂದಿ ಸಾವು

ಶ್ರೀನಗರ:ಹರಿಯಾಣದ ಫರೀದಾಬಾದ್‌ನಿಂದ ವಶಪಡಿಸಿಕೊಂಡಿದ್ದ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಸ್ಫೋಟಗೊಂಡ ಪರಿಣಾಮ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ನೌಗಾಮ್ ಪೊಲೀಸ್ ಠಾಣೆಯಲ್ಲಿ ಆರು ಮಂದಿ ಮೃತಪಟ್ಟು, 27ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ದುರಂತ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತರಾದವರಲ್ಲಿ ಹೆಚ್ಚಾಗಿ ಪೊಲೀಸ್ ಸಿಬ್ಬಂದಿ ಮತ್ತು ವಿಧಿವಿಜ್ಞಾನ ತಂಡದ (FSL) ಅಧಿಕಾರಿಗಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಭ್ಯವಿರುವ ಮಾಹಿತಿ ಪ್ರಕಾರ, ಇತ್ತೀಚೆಗೆ ಪತ್ತೆಯಾದ ‘ವೈಟ್‌-ಕಾಲರ್’ ಭಯೋತ್ಪಾದಕ ಮಾಡ್ಯೂಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫರೀದಾಬಾದ್‌ನಿಂದ ವಶಪಡಿಸಿಕೊಂಡಿದ್ದ 360…

Read More

ದೆಹಲಿ ಕೆಂಪು ಕೋಟೆ ಬಳಿ ಭೀಕರ ಕಾರು ಸ್ಫೋಟ: 8 ಮಂದಿ ಸಾವು; ಉಗ್ರ ಕೃತ್ಯ ಶಂಕೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆ (ಲಾಲ್ ಕಿಲಾ) ಮೆಟ್ರೋ ನಿಲ್ದಾಣದ ಗೇಟ್ ನಂ. 1 ರ ಸಮೀಪ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಭೀಕರ ಕಾರು ಸ್ಫೋಟ ಸಂಭವಿಸಿದ್ದು, ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ ಮತ್ತು 24 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ರಭಸಕ್ಕೆ ಹಲವಾರು ಕಾರುಗಳು ಮತ್ತು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೆಂಪುಕೋಟೆಯ ಚಾಂದನಿ ಚೌಕ್‌ನ ಲಾಲ್ ಕಿಲಾ ಬಳಿಯ ಸುಭಾಷ್…

Read More

ಶಾಲೆ ಆವರಣದಲ್ಲಿ ಆಘಾತಕಾರಿ ಘಟನೆ: ವಿರಾಜಪೇಟೆ ಶಾಲೆಯ 25ಕ್ಕೂ ಅಧಿಕ ಮಕ್ಕಳ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಜೇನು ಹಿಂಡು ಏಕಾಏಕಿ ದಾಳಿ ನಡೆಸಿದ್ದು, ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪ್ರತಿದಿನದಂತೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ಬೆಳಗಿನ ಪ್ರಾರ್ಥನೆ ಮುಗಿಸಿದ್ದರು. ಬಿಸಿ ಹಾಲು ಪಡೆಯಲು ಸಾಲಿನಲ್ಲಿ ನಿಂತಿದ್ದ ವೇಳೆ, ಸಮೀಪದ ತೋಟದಿಂದ ಹಾರಿಬಂದ ಜೇನು ಹಿಂಡು ಮಕ್ಕಳು ಮತ್ತು ಶಿಕ್ಷಕರ ಮೇಲೆ ದಾಳಿ ಮಾಡಿತು. ಮಕ್ಕಳು ನೋವಿನಿಂದ ಚೀರಾಡುತ್ತಿದ್ದ ಶಬ್ದ ಕೇಳುತ್ತಿದ್ದಂತೆ ಸ್ಥಳೀಯರು…

Read More

🛑 ಗೋರ ದುರಂತ: ಟಿಪ್ಪರ್–ಬಸ್ ಭೀಕರ ಡಿಕ್ಕಿ; ತೆಲಂಗಾಣದಲ್ಲಿ 20 ಸಾವು

🛑 ಗೋರ ದುರಂತ: ಟಿಪ್ಪರ್–ಬಸ್ ಭೀಕರ ಡಿಕ್ಕಿ; ತೆಲಂಗಾಣದಲ್ಲಿ 20 ಸಾವು ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 20 ಮಂದಿ ದುರ್ಮರಣ ಹೊಂದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಹೈದರಾಬಾದ್–ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (RTC) ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಘೋರ ದುರಂತ…

Read More