ತರ್ಲಘಟ್ಟ: ಹುಲಗೂರ-ಶಿಗ್ಗಾವ ರಸ್ತೆ ಪಕ್ಕದ ಜಮೀನಿನಲ್ಲಿ ಅಗ್ನಿ ಅವಘಡ; ಆರು ಮೇವಿನ ಬಣವೆಗಳು ಭಸ್ಮ

ಕುಂದಗೋಳ: ತಾಲೂಕಿನ ತರ್ಲಘಟ್ಟ ಗ್ರಾಮದ ವ್ಯಾಪ್ತಿಯಲ್ಲಿರುವ ಹುಲಗೂರ-ಶಿಗ್ಗಾವ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಜಮೀನಿನಲ್ಲಿ ಇಂದು ಸಂಜೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ರೈತರು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಹಾಗೂ ಬೆಳೆ ಬೆಂಕಿಗಾಹುತಿಯಾಗಿದೆ. ಸುಮಾರು 5 ಗಂಟೆ ವೇಳೆಗೆ ಕಾಣಿಸಿಕೊಂಡ ಈ ಬೆಂಕಿಯು ಕಿಡಿಗೇಡಿಗಳ ದುಷ್ಕೃತ್ಯವಿರಬಹುದು ಎಂದು ಶಂಕಿಸಲಾಗಿದೆ. ​ಗ್ರಾಮದ ರೈತರಾದ ಸಿದ್ದಲಿಂಗಪ್ಪ ಅಂಗಡಿ, ಬಸಪ್ಪ ಹಸಬಿ ಹಾಗೂ ಗುರುಸಿದ್ದಪ್ಪ ದ್ಯಾವನೂರ ಎಂಬುವವರಿಗೆ ಸೇರಿದ ಆರು ಗೋವಿನಜೋಳದ ಹೊಟ್ಟಿನ ಬಣವೆಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ…

Read More

ಹಾವೇರಿಯಲ್ಲಿ ‘ಹಂಚು’ ಸರಿಸಿದ ಕಿಲಾಡಿ ಕಳ್ಳರು: 15 ಲಕ್ಷ ಮೌಲ್ಯದ ಚಿನ್ನಾಭರಣ ಲೂಟಿ,

ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರು ಗ್ರಾಮದಲ್ಲಿ ಅತಿಮಾನುಷ ರೀತಿಯಲ್ಲಿ ಮನೆಯೊಳಗೆ ನುಗ್ಗಿರುವ ಕಳ್ಳರು ಬರೋಬ್ಬರಿ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ಜನತೆಯನ್ನು ಬೆಚ್ಚಿಬೀಳಿಸಿದೆ. ಮನೆಗೆ ಹಾಕಿರುವ ದುಬಾರಿ ಬೀಗಗಳು ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ನಾಗರಿಕರು ಹೆಮ್ಮೆಪಡುವ ಕಾಲದಲ್ಲಿ, ಕಳ್ಳರು ಈ ಬಾರಿ ಆರಿಸಿಕೊಂಡಿದ್ದು ಮನೆಯ ಅತ್ಯಂತ ದುರ್ಬಲ ಭಾಗವಾದ ‘ಮೇಲ್ಛಾವಣಿ’ಯನ್ನು! ​ಅಡುಗೆ ಮನೆಯೇ ಕಳ್ಳರ ರಹದಾರಿ! ​ಹಿರೂರು ಗ್ರಾಮದ ನಿವಾಸಿ ಮೊಹಮ್ಮದ್ ಗೌಸ್ ಎಂಬುವವರ ಮನೆಯಲ್ಲಿ ಈ ಸಿನೆಮಾ…

Read More

​ಬೀದರ್: ಕಾರಂಜಾ ಡ್ಯಾಂ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಭಾಲ್ಕಿ: ಆಕಸ್ಮಿಕವಾಗಿ ಕಾಲುವೆಗೆ ಬಿದ್ದು ತಂದೆ ಮತ್ತು ಮಗ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಹಳ್ಳಿಖೇಡ್ (ಬಿ) ಗ್ರಾಮದ ನಿವಾಸಿಗಳಾದ ವಿಶ್ವನಾಥ (50) ಹಾಗೂ ಅವರ ಪುತ್ರ ಅಮರೇಶ (23) ಮೃತಪಟ್ಟ ದುರ್ದೈವಿಗಳು. ​ಕಾರಂಜಾ ಜಲಾಶಯದ ಕಾಲುವೆ ಪಕ್ಕದಲ್ಲಿ ಸಂಚರಿಸುತ್ತಿದ್ದಾಗ ಈ ಆಕಸ್ಮಿಕ ನಡೆದಿದೆ ಎಂದು ತಿಳಿದುಬಂದಿದೆ. ಕಾಲುವೆಗೆ ಬಿದ್ದವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ, ನೀರಿನ ಸೆಳೆತ ಹೆಚ್ಚಿದ್ದರಿಂದ ಇಬ್ಬರೂ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ…

Read More

ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ಪ್ರವಾಸಿಗನ ಕೊಲೆ ಪ್ರಕರಣ: ಕೊಪ್ಪಳದ ಮೂವರು ಕಾಮುಕರಿಗೆ ಮರಣದಂಡನೆ ಶಿಕ್ಷೆ

​ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ನಡೆದಿದ್ದ ವಿದೇಶಿ ಪ್ರವಾಸಿ ಮಹಿಳೆ ಹಾಗೂ ಹೋಂ ಸ್ಟೇ ಒಡತಿಯ ಮೇಲಿನ ಅತ್ಯಾಚಾರ ಮತ್ತು ಒಡಿಶಾ ಮೂಲದ ಪ್ರವಾಸಿಗನ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಮೂವರು ಅಪರಾಧಿಗಳಿಗೆ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಗಂಗಾವತಿಯ ಸಾಯಿನಗರದ ನಿವಾಸಿಗಳಾದ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಅಲಿಯಾಸ್ ಚೈತನ್ಯಸಾಯಿ ಹಾಗೂ ಶರಣಪ್ಪ ಅಲಿಯಾಸ್ ಶರಣು…

Read More

​ಮಂಡ್ಯದಲ್ಲಿ ಭೀಕರ ಕೆಮಿಕಲ್ ಟ್ಯಾಂಕ್ ಸ್ಫೋಟ: ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಾವು. ನಾಲ್ವರಿಗೆ ಗಂಭೀರ ಗಾಯ

ಮಂಡ್ಯ: ಜಿಲ್ಲೆಯ ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದ ಸಮೀಪವಿರುವ ‘ಕೀರ್ತಿ ಕೆಮಿಕಲ್ ಕಾರ್ಖಾನೆ’ಯಲ್ಲಿ ಭಾನುವಾರ ರಾಸಾಯನಿಕ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಭೀಕರವಾಗಿ ಮೃತಪಟ್ಟಿದ್ದಾರೆ. ಕಾರ್ಖಾನೆಯ ಸಾಮಗ್ರಿಗಳನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ​ಛಿದ್ರಗೊಂಡ ದೇಹಗಳು: ​ಬಿಹಾರ ಮೂಲದ ಕಲೂಪ್‌ಖಾನ್ (27) ಮತ್ತು ಅಶೋಕ್ (26) ಮೃತಪಟ್ಟ ದುರ್ದೈವಿಗಳು. ಟ್ಯಾಂಕ್ ಸ್ಫೋಟಗೊಂಡ ರಭಸಕ್ಕೆ ಇಬ್ಬರು ಕಾರ್ಮಿಕರ ದೇಹಗಳು ಛಿದ್ರಛಿದ್ರಗೊಂಡು ನೂರಾರು ಅಡಿ ದೂರಕ್ಕೆ ಎಸೆಯಲ್ಪಟ್ಟಿವೆ. ಘಟನೆಯಲ್ಲಿ ಖಾಸಿಂ, ರವಿ, ಮಹಾಂತೇಶ್ ಹಾಗೂ ರಾಜೀವ್‌ಕುಮಾರ್…

Read More

ಬೆಂಗಳೂರು ಫ್ಲೈಓವರ್ ಮೇಲೆ ಭೀಕರ ದುರಂತ: ಬಸ್‌ಗೆ ಕಾರು ಡಿಕ್ಕಿ, ದೊಡ್ಡಬಳ್ಳಾಪುರದ ಐವರು ಯುವಕರ ಸಾವು

ಬೆಂಗಳೂರು: ರಾಜಧಾನಿಯ ಫ್ಲೈಓವರ್ ಮೇಲೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಅತಿಯಾದ ವೇಗದಿಂದ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರುಗಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದ್ದೇ ಈ ಕರುಣಾಜನಕ ಘಟನೆಗೆ ಕಾರಣವಾಗಿದೆ. ​ದುರಂತದ ವಿವರ: ​ಮೃತರನ್ನು ದೊಡ್ಡಬಳ್ಳಾಪುರದ ನಿವಾಸಿಗಳಾದ ಲಲಿತ್ (22), ಧನುಷ್ (21), ದುರ್ಗಾ ಪ್ರಸಾದ್ (20), ಹರ್ಷಿತ್ (20) ಮತ್ತು ಕೇಶವ್ (19) ಎಂದು ಗುರುತಿಸಲಾಗಿದೆ. ಲಲಿತ್ ಇತ್ತೀಚೆಗಷ್ಟೇ ಸೆಕೆಂಡ್ ಹ್ಯಾಂಡ್ ಟಾಟಾ…

Read More

​ಮಾರಣಾಂತಿಕ ‘ಕೊರಿಯನ್ ಲವ್ ಗೇಮ್’ ವ್ಯಸನ: ಗಾಜಿಯಾಬಾದ್‌ನಲ್ಲಿ ಮೂವರು ಸೋದರಿಯರ ಸಾಮೂಹಿಕ ಆತ್ಮಹತ್ಯೆ

ಗಾಜಿಯಾಬಾದ್: ಆನ್‌ಲೈನ್ ಗೇಮ್‌ಗಳ ಹುಚ್ಚು ಮತ್ತು ಮೊಬೈಲ್ ವ್ಯಸನವು ಎಷ್ಟು ಭೀಕರ ಪರಿಣಾಮ ಬೀರಬಲ್ಲದು ಎಂಬುದಕ್ಕೆ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಬ್ಲೂವೇಲ್ ಮತ್ತು ಮೋಮೋ ಚಾಲೆಂಜ್‌ನಂತಹ ಪ್ರಾಣಾಪಾಯಕಾರಿ ಆಟಗಳ ಬೆನ್ನಲ್ಲೇ ಈಗ ‘ಕೊರಿಯನ್ ಲವ್ ಗೇಮ್’ ಎಂಬ ಹೊಸ ಮಾಯಾಜಾಲಕ್ಕೆ ಬಲಿಯಾಗಿ ಒಂದೇ ಕುಟುಂಬದ ಮೂವರು ಅಪ್ರಾಪ್ತ ಸೋದರಿಯರು 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ​ಮೃತರನ್ನು ನಿಶಿಕಾ (16), ಪ್ರಾಚಿ (14) ಮತ್ತು ಪಾಖಿ (12) ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ…

Read More

ರೋಣ ಬಳಿ ಭೀಕರ ಅಪಘಾತ: ಮೂವರು ಮಹಿಳಾ ಕೃಷಿ ಕಾರ್ಮಿಕರ ದುರ್ಮರಣ, 15ಕ್ಕೂ ಹೆಚ್ಚು ಜನರಿಗೆ ಗಾಯ

​ರೋಣ: ತಾಲ್ಲೂಕಿನ ಜಿಗಳೂರ ಕ್ರಾಸ್ ಬಳಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳಾ ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, 15ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾಹಕ ಘಟನೆ ನಡೆದಿದೆ. ಟಾಟಾ ಕ್ಯಾಂಟರ್ ಗೂಡ್ಸ್ ವಾಹನ ಮತ್ತು ಪ್ಯಾಸೆಂಜರ್ ಕ್ರೂಸರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಈ ದುರಂತಕ್ಕೆ ಕಾರಣವಾಗಿದೆ. ​ಗಜೇಂದ್ರಗಡ ಪಟ್ಟಣದ ಶಿವಾಜಿ ಪೇಟೆಯ ನಿವಾಸಿಗಳಾದ ಮರಿಯಂಬು ದಾದೇಸಾಬ್ ಹುನಗುಂದ (55), ಅನ್ನಪೂರ್ಣ ಲಕ್ಷ್ಮಣ ಚಂಗಳಿ (45) ಹಾಗೂ ಸುಜಾತಾ ರಾಜಪ್ಪ ಹೊಸಮನಿ…

Read More

ಕೊಟ್ಟೂರು ಬೆಚ್ಚಿಬೀಳಿಸಿದ ಭೀಕರ ತ್ರಿವಳಿ ಕೊಲೆ: ಮನೆಯ ಹಾಲ್‌ನಲ್ಲೇ ತಂದೆ-ತಾಯಿ-ತಂಗಿ ಶವ ಹೂತಿಟ್ಟ ನರಹಂತಕ ಮಗ!

​ವಿಜಯನಗರ: ಕೊಟ್ಟೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವಂತ ಭೀಕರ ತ್ರಿವಳಿ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಹೆತ್ತ ತಂದೆ-ತಾಯಿ ಹಾಗೂ ತಂಗಿಯನ್ನು ಭೀಕರವಾಗಿ ಹತ್ಯೆಗೈದ ನರಹಂತಕ ಮಗ, ಮನೆಯ ಹಾಲ್‌ನಲ್ಲೇ ಶವಗಳನ್ನು ಹೂತಿಟ್ಟು ವಿಕೃತಿ ಮೆರೆದಿದ್ದಾನೆ. ಬೆಂಗಳೂರಿನ ತಿಲಕ್ ನಗರ ಠಾಣೆ ಪೊಲೀಸರು ಹಾಗೂ ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ಶನಿವಾರ ನಡೆಸಿದ ಕಾರ್ಯಾಚರಣೆಯಲ್ಲಿ ಒಂದೇ ಕುಣಿಯಲ್ಲಿ ಹೂತಿಟ್ಟಿದ್ದ ಮೂರು ಮೃತದೇಹಗಳು ಪತ್ತೆಯಾಗಿವೆ. ಆರೋಪಿ ಅಕ್ಷಯ್ ತಂದೆ ಭೀಮರಾವ್ (50), ತಾಯಿ ಜಯಲಕ್ಷ್ಮಿ (45) ಮತ್ತು ತಂಗಿ ಎಚ್.ಅಮೃತಾ (17) ಅವರನ್ನು…

Read More

​ಯಲ್ಲಾಪುರ: ಅರಬೈಲ್ ಘಟ್ಟದಲ್ಲಿ ಇಥೆನಾಲ್ ಟ್ಯಾಂಕರ್ ಪಲ್ಟಿ; ಬೆಂಕಿಗಾಹುತಿಯಾದ ಲಾರಿ

ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರ ತಿರುವಿನಲ್ಲಿ ಇಥೆನಾಲ್ ತುಂಬಿದ್ದ ಟ್ಯಾಂಕರ್ ಲಾರಿಯೊಂದು ಪಲ್ಟಿಯಾಗಿ ಭೀಕರ ಬೆಂಕಿ ಅನಾಹುತ ಸಂಭವಿಸಿದ ಘಟನೆ ಜ.31ರ ಶನಿವಾರ ಸಂಜೆ ನಡೆದಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಲಾರಿ ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ. ​ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ನಿವಾಸಿ ಶಿವಾನಂದ ಬೀರಾದಾರ್ ಎಂಬುವವರು ಇಥೆನಾಲ್ ತುಂಬಿದ ಟ್ಯಾಂಕರ್ ಅನ್ನು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದರು….

Read More