​ದಾವಣಗೆರೆ: ಕೌಟುಂಬಿಕ ಕಲಹಕ್ಕೆ ಬಲಿಯಾದ ಮಾಜಿ ಪಾಲಿಕೆ ಸದಸ್ಯ; ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ದಾವಣಗೇರೆ:ಕೌಟುಂಬಿಕ ಕಲಹದ ಕಿಚ್ಚು ದಾವಣಗೆರೆಯಲ್ಲಿ ಭೀಕರ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಚಂದ್ರಶೇಖರ್ ಸಂಕೋಲ್ ಅವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಡೀ ಜಿಲ್ಲೆಯನ್ನು ಈ ಘಟನೆ ಬೆಚ್ಚಿಬೀಳಿಸಿದೆ. ​ದಾವಣಗೆರೆಯ ನಾಗನೂರು ಬಳಿಯಿರುವ ತಮ್ಮ ತೋಟದ ಮನೆಯಲ್ಲಿ ಈ ಭೀಭತ್ಸ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಂದ್ರಶೇಖರ್ ಅವರ ಇಬ್ಬರು ಮಕ್ಕಳು ಮೊದಲು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮಕ್ಕಳ ಈ…

Read More

ಹುಬ್ಬಳ್ಳಿಯಲ್ಲಿ ನರರೂಪಿ ರಾಕ್ಷಸರ ಕೃತ್ಯ: ಅಸಹಾಯಕ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ವೈರಲ್! ಕಾಮುಕರ ಬಂಧನ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಹಾಗೂ ಭೀಭತ್ಸ ಘಟನೆ ಒಂದು ಬೆಳಕಿಗೆ ಬಂದಿದೆ. ಅಸಹಾಯಕ ಮಹಿಳೆಯೊಬ್ಬಳ ಮೇಲೆ ಇಬ್ಬರು ನರಾಧಮರು ಸಾಮೂಹಿಕ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಘೋರ ಪ್ರಕರಣ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಶಿವಶಂಕರ ಕಾಲೋನಿಯ ನಿವಾಸಿಗಳಾದ ಶಿವಾನಂದ್ (29) ಹಾಗೂ ಗಣೇಶ್ ಗಿಡ್ಡಣ್ಣವರ (31) ಎಂದು ಗುರುತಿಸಲಾಗಿದೆ. ಹಾವೇರಿ…

Read More

​ಬೈಲಹೊಂಗಲ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಭೀಕರ ದುರಂತ; ಬಿಸಿ ಪದಾರ್ಥ ಸೋರಿಕೆಯಾಗಿ ಮೂವರು ಕಾರ್ಮಿಕರ ಸಾವು ಕೆಲವರಿಗೆ ಗಾಯ,

​ಬೈಲಹೊಂಗಲ: ತಾಲ್ಲೂಕಿನ ಮರಕುಂಬಿ ಗ್ರಾಮದ ಸಮೀಪವಿರುವ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಖಾನೆಯ ಎವಿಸಿಪಿ ನಂ-1ರ ಕಂಪಾರ್ಟ್‌ಮೆಂಟ್ ವಾಲ್ ದುರಸ್ತಿ ಕಾರ್ಯದ ವೇಳೆ ಏಕಾಏಕಿ ಕುದಿಯುವ ಬಿಸಿ ಪದಾರ್ಥ ಸೋರಿಕೆಯಾದ ಪರಿಣಾಮ ಈ ಸಾವು-ನೋವು ಸಂಭವಿಸಿದೆ. ​ಸುಮಾರು 40 ಅಡಿ ಎತ್ತರದಲ್ಲಿರುವ ವಾಲ್ ದುರಸ್ತಿ ಕಾರ್ಯಕ್ಕಾಗಿ ಎವಿಸಿಪಿ ನಂ-1ನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕಾರ್ಮಿಕರು ವಾಲ್‌ನ ನಟ್ ಬೋಲ್ಟ್‌ಗಳನ್ನು ತೆಗೆಯುತ್ತಿದ್ದ…

Read More

​ಹುಬ್ಬಳ್ಳಿ: ಉಣಕಲ್ ಬಳಿ ಭೀಕರ ಅಪಘಾತ; ಬಿಆರ್‌ಟಿಎಸ್ ರಸ್ತೆಯಲ್ಲಿ ಚಿಗರಿ ಬಸ್-ಕಾರು ಮುಖಾಮುಖಿ ಡಿಕ್ಕಿ

​ಹುಬ್ಬಳ್ಳಿ: ನಗರದ ಉಣಕಲ್ ಬಳಿಯ ಬಿಆರ್‌ಟಿಎಸ್ (BRTS) ಕಾರಿಡಾರ್‌ನಲ್ಲಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯಿಂದ ಧಾರವಾಡದ ಕಡೆಗೆ ತೆರಳುತ್ತಿದ್ದ ‘ಚಿಗರಿ’ ಬಸ್ ಹಾಗೂ ಎದುರುಗಡೆಯಿಂದ ಬರುತ್ತಿದ್ದ ನೆಕ್ಸಾನ್ ಕಾರಿನ ನಡುವೆ ಸಂಭವಿಸಿದ ಈ ಮುಖಾಮುಖಿ ಡಿಕ್ಕಿಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ​ಭಾನುವಾರ ಬೆಳಿಗ್ಗೆ ಈ ಅವಘಡ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ…

Read More

​ಅಂಚಟಗೇರಿ ಬಳಿ ಬಸ್-ಬೈಕ್ ಭೀಕರ ಅಪಘಾತ: ತಂದೆ ಮತ್ತು ಮಗು ಸ್ಥಳದಲ್ಲೇ ಸಾವು; ಮತ್ತೊಂದು ಮಗುವಿನ ಸ್ಥಿತಿ ಗಂಭೀರ

ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕಾರವಾರದಿಂದ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದ್ದು, ಮತ್ತೊಂದು ಮಗು ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ತಡಸ ಗ್ರಾಮದ ನಿವಾಸಿ ಮೆಹಬೂಬ ಖಾನ್ ಉಸ್ತಾದಿ (36) ಹಾಗೂ ಅವರ ಎರಡು ವರ್ಷದ…

Read More

ಸವದತ್ತಿ ಬಳಿ ಭೀಕರ ರಸ್ತೆ ಅಪಘಾತ: ಡಿಸಿಎಂ ಆಪ್ತ ಕಾರ್ಯದರ್ಶಿ ಕಾರು ಪಲ್ಟಿ, ಬೈಕ್ ಸವಾರ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎಸ್) ರಾಜೇಂದ್ರ ಪ್ರಸಾದ್ ಅವರಿಗೆ ತೀವ್ರ ಗಾಯಗಳಾಗಿವೆ. ​ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ (30) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸದ ನಿಮಿತ್ತ ಮಂಜುನಾಥ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಮಂಜುನಾಥ್ ಅವರ…

Read More

ಧಾರವಾಡ ಕವಲಗೇರಿ ಮಠದ ಸ್ವಾಮಿ ವಿಡಿಯೋ ವಿವಾದ: 10 ಲಕ್ಷಕ್ಕೆ ಡೀಲ್, 7 ಲಕ್ಷ ಪಾವತಿ – ಬಾಕಿ ಹಣಕ್ಕಾಗಿ ಬ್ಲ್ಯಾಕ್‌ಮೇಲರ್‌ಗಳ ಕೃತ್ಯ?

ಧಾರವಾಡ: ವಿದ್ಯಾಕಾಶಿ ಧಾರವಾಡದ ಪವಿತ್ರ ನೆಲದಲ್ಲಿ ಧಾರ್ಮಿಕ ಕೇಂದ್ರವೊಂದು ಈಗ ಅಪಚಾರದ ಕೇಂದ್ರವಾಗಿ ಸುದ್ದಿಯಾಗುತ್ತಿದೆ. ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿ ಅವರದ್ದೆನ್ನಲಾದ ಅಶ್ಲೀಲ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು, ಮಠದ ಘನತೆ ಹಾಗೂ ಭಕ್ತರ ನಂಬಿಕೆಗೆ ತೀವ್ರ ಧಕ್ಕೆ ತಂದಿದೆ. ಆದರೆ, ಈ ವಿಡಿಯೋ ವೈರಲ್ ಆಗಿರುವ ಹಿಂದೆ ಕೇವಲ ನೈತಿಕ ಪತನವಷ್ಟೇ ಅಲ್ಲದೆ, ಲಕ್ಷಾಂತರ ರೂಪಾಯಿಗಳ ಬ್ಲ್ಯಾಕ್‌ಮೇಲ್ ದಂಧೆ ಅಡಗಿರುವುದು ಈಗ ಸ್ಫೋಟಕ ಮಾಹಿತಿಯೊಂದಿಗೆ ಹೊರಬಿದ್ದಿದೆ. ​ಘಟನೆಯ ಕರಾಳ…

Read More

ಸಂಶಿ: ಪಾದಚಾರಿಗೆ ಬೈಕ್ ಡಿಕ್ಕಿ, ಗಂಭೀರ ಗಾಯ – ಸಮಯಕ್ಕೆ ಬಾರದ ಆಂಬ್ಯುಲೆನ್ಸ್‌!

ಕುಂದಗೋಳ: ಹುಬ್ಬಳ್ಳಿ-ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಬಳಿ ನಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್‌ ಲಭ್ಯವಾಗದೆ ಸ್ಥಳೀಯ ಆಸ್ಪತ್ರೆಯಲ್ಲಿ ನರಳಾಟ ನಡೆಸಿದ ದಾರುಣ ಪರಿಸ್ಥಿತಿ ಎದುರಾಯಿತು. ​ಅಪಘಾತದ ವಿವರ ​ಸಂಶಿ ಗ್ರಾಮದ ಬಳಿ, ರಸ್ತೆಯ ಮೇಲೆ ಹೊರಟಿದ್ದ ಮಂಜುನಾಥ ದ್ಯಾಮನಗೌಡ ಧರಣಿ ಎಂಬುವವರಿಗೆ ಮಲಿಕರೆಹಾನ್ ನದಾಫ್ ಎಂಬ ಯುವಕ ಚಲಾಯಿಸುತ್ತಿದ್ದ…

Read More

ಬೃಹತ್‌ ಸ್ಪಿರಿಟ್‌ ಹಾಗೂ ಗಾಂಜಾ ಜಾಲ ಭೇದಿಸಿದ ಧಾರವಾಡ ಪೊಲೀಸರು: ಇಬ್ಬರ ಬಂಧನ

ಬೃಹತ್‌ ಸ್ಪಿರಿಟ್‌ ಹಾಗೂ ಗಾಂಜಾ ಜಾಲ ಭೇದಿಸಿದ ಧಾರವಾಡ ಪೊಲೀಸರು: ಇಬ್ಬರ ಬಂಧನ ​ಧಾರವಾಡ, ಡಿಸೆಂಬರ್ 8: ಜಿಲ್ಲಾ ಪೊಲೀಸರು ಅಬಕಾರಿ ಕಾಯಿದೆ ಅಡಿಯಲ್ಲಿ ದಾಖಲಾಗಿದ್ದ ಪ್ರಮುಖ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರ ವಶದಿಂದ ಬೃಹತ್ ಪ್ರಮಾಣದ ಒಣಗಿದ ಮಾದಕ ಗಾಂಜಾವನ್ನು ಜಪ್ತಿ ಮಾಡುವ ಮೂಲಕ ಸ್ಪಿರಿಟ್ ಮತ್ತು ಮಾದಕವಸ್ತುಗಳ ಅಕ್ರಮ ಜಾಲವನ್ನು ಭೇದಿಸಿದ್ದಾರೆ. ​ನವೆಂಬರ್ 24 ರಂದು ಮುಂಜಾನೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ತೇಗೂರ ಗ್ರಾಮದ ಭಾರತ ಪ್ಯಾಲೇಸ್ ಹೋಟೆಲ್…

Read More

ಮಾದಕ ವಸ್ತು ತಡೆದಿದ್ದಕ್ಕೆ ಜೈಲರ್‌ ಮೇಲೆ ಖೈದಿಗಳಿಂದ ಮಾರಣಾಂತಿಕ ಹಲ್ಲೆ: ಕಾರವಾರ ಜೈಲಿನಲ್ಲಿ ಭೀಕರ ಘಟನೆ

ಮಾದಕ ವಸ್ತು ತಡೆದಿದ್ದಕ್ಕೆ ಜೈಲರ್‌ ಮೇಲೆ ರೌಡಿಗಳ ಮಾರಣಾಂತಿಕ ಹಲ್ಲೆ: ಕಾರವಾರ ಜೈಲಿನಲ್ಲಿ ಭೀಕರ ಘಟನೆ ಕಾರವಾರ (ಉತ್ತರಕನ್ನಡ): ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆ ಮತ್ತು ಬಳಕೆಗೆ ಸಂಪೂರ್ಣವಾಗಿ ಕಡಿವಾಣ ಹಾಕಿದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ಮಂಗಳೂರಿನ ಮೂಲದ ಇಬ್ಬರು ಕುಖ್ಯಾತ ರೌಡಿಗಳು ಜೈಲರ್ ಮತ್ತು ಇತರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಘಟನೆ ಕಾರವಾರದ ಜಿಲ್ಲಾ ಕಾರಾಗೃಹದಲ್ಲಿ ವರದಿಯಾಗಿದೆ. ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಕರ್ತವ್ಯ ನಿರತ ಇತರೆ ಮೂವರು ಸಿಬ್ಬಂದಿ ಮೇಲೆ…

Read More