ಜಮ್ಮು-ಕಾಶ್ಮೀರದಲ್ಲಿ ಭೀಕರ ಮಳೆ, ಪ್ರವಾಹ: ನಾಲ್ವರು ಬಲಿ, ಜನಜೀವನ ಅಸ್ತವ್ಯಸ್ತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೋಮವಾರ (ಆಗಸ್ಟ್‌ 26) ಸುರಿದ ಭಾರೀ ಮಳೆ ಮತ್ತು ಭೂಕುಸಿತಕ್ಕೆ ನಾಲ್ವರು ಬಲಿಯಾಗಿದ್ದು, ಹಲವಾರು ಮನೆಗಳು ನೆಲಸಮಗೊಂಡಿವೆ. ಅನಿರೀಕ್ಷಿತ ಪ್ರವಾಹ ಮತ್ತು ಭೂಕುಸಿತದಿಂದಾಗಿ ಇಡೀ ಪ್ರದೇಶವೇ ನಲುಗಿ ಹೋಗಿದೆ. ಅಧಿಕಾರಿಗಳ ಮಾಹಿತಿಯ ಪ್ರಕಾರ, ದಿಢೀರ್ ಪ್ರವಾಹಕ್ಕೆ ಇಬ್ಬರು ಕೊಚ್ಚಿಹೋಗಿ ಮೃತಪಟ್ಟರೆ, ಮನೆ ಕುಸಿದು ಮತ್ತಿಬ್ಬರು ಬಲಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನದಿಯ ಅಪಾಯ ಮಟ್ಟ ಏರಿಕೆ, ರಸ್ತೆ ಸಂಪರ್ಕ ಕಡಿತಭಾರೀ…

Read More

ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ: 8 ಸಾವು, 43 ಮಂದಿಗೆ ಗಾಯ

ಲಖನೌ: ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 43 ಮಂದಿ ಗಾಯಗೊಂಡಿರುವ ದುರಂತ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿರುವ ಅರ್ನಿಯಾ ಬೈಪಾಸ್ ಬಳಿ ಬೆಳಗಿನ ಜಾವ 2.10ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಟ್ರಕ್ ಹಿಂಬದಿಯಿಂದ ಟ್ರ್ಯಾಕ್ಟರ್‌ ಟ್ರಾಲಿಗೆ ಡಿಕ್ಕಿ ಹೊಡೆದ ರಭಸಕ್ಕೆ ಟ್ರಾಲಿ ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ತೀರ್ಥಯಾತ್ರೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳು:ಟ್ರಾಕ್ಟರ್…

Read More