ಕೊಲಂಬೋ ಕದನ: ಪಾಕ್ ವಿರುದ್ಧ ಮತ್ತೆ ‘ನೋ ಹ್ಯಾಂಡ್ಶೇಕ್’ ಅಸ್ತ್ರ ಪ್ರಯೋಗಿಸಿದ ಟೀಂ ಇಂಡಿಯಾ
ಕೊಲಂಬೋ: ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ಮಹಾಶಿವರಾತ್ರಿಯ ಪವಿತ್ರ ದಿನದಂದೇ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ20 ವಿಶ್ವಕಪ್ನ 27ನೇ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಆದರೆ, ಪಂದ್ಯದ ಆರಂಭಕ್ಕೂ ಮುನ್ನವೇ ಮೈದಾನದಲ್ಲಿ ರಾಜತಾಂತ್ರಿಕ ಬಿಸಿ ಕಾಣಿಸಿಕೊಂಡಿದ್ದು, ಉಭಯ ತಂಡಗಳ ನಾಯಕರು ಹಸ್ತಲಾಘವ ಮಾಡದೆ ‘ಹ್ಯಾಂಡ್ಶೇಕ್ ನಿರಾಕರಣೆ’ ವಿವಾದವನ್ನು ಮುಂದುವರಿಸಿದ್ದಾರೆ. ಕಳೆದ ವರ್ಷ ನಡೆದ ಏಷ್ಯಾ ಕಪ್ ಟೂರ್ನಿಯ ವೇಳೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಾಕಿಸ್ತಾನ ನಾಯಕನೊಂದಿಗೆ ಕೈಕುಲುಕಲು ನಿರಾಕರಿಸಿದ್ದು ಜಾಗತಿಕ ಕ್ರಿಕೆಟ್ ವಲಯದಲ್ಲಿ…

