ಯುಗಾದಿ ಹಬ್ಬದ ಸಂಭ್ರಮಕ್ಕೆ ತಣ್ಣೀರು: ಕಂದಾಯ ಇಲಾಖೆ ಸಿಬ್ಬಂದಿಗೆ ರಜೆ ರದ್ದು, ಕಚೇರಿಗೆ ಹಾಜರಾಗಲು ಸರ್ಕಾರಿ ಆದೇಶ
ಬೆಂಗಳೂರು: ರಾಜ್ಯಾದ್ಯಂತ ಯುಗಾದಿ ಹಬ್ಬದ ಸಡಗರ ಮನೆಮಾಡಿರುವ ಬೆನ್ನಲ್ಲೇ, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸರ್ಕಾರ ಶಾಕ್ ನೀಡಿದೆ. ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಕೇಳಲಾದ ಬಾಕಿ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಸಿದ್ಧಪಡಿಸಬೇಕಾದ ಅನಿವಾರ್ಯತೆ ಇರುವುದರಿಂದ, ಮಾರ್ಚ್ 19ರ ಯುಗಾದಿ ಹಬ್ಬದ ದಿನದಂದೂ ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇದು ಹಬ್ಬದ ರಜೆಯ ನಿರೀಕ್ಷೆಯಲ್ಲಿದ್ದ ಸಿಬ್ಬಂದಿ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ಈವರೆಗೆ ಸರಿಯಾದ…

