ಸಂನ್ಯಾಸಿಗೂ ಸಿಕ್ಕಿತು ಸರ್ಕಾರಿ ಬಡ್ತಿ ಭಾಗ್ಯ: ಕಾಂಗ್ರೆಸ್ ಸರ್ಕಾರದ ಎಡವಟ್ಟಿಗೆ ಆರ್. ಅಶೋಕ್ ಆಕ್ರೋಶ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಮತ್ತು ಅದಕ್ಷತೆಯ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಹೊರಡಿಸಲಾದ ಆದೇಶದ ಪಟ್ಟಿಯಲ್ಲಿ, ಈಗಾಗಲೇ ಸೇವೆಯಿಂದ ನಿವೃತ್ತರಾಗಿ ಸಂನ್ಯಾಸ ಸ್ವೀಕರಿಸಿರುವ ಅಧಿಕಾರಿಯ ಹೆಸರಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ಎಡವಟ್ಟನ್ನು ಕಟುವಾಗಿ ಟೀಕಿಸಿರುವ ಅಶೋಕ್ ಅವರು, “ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸರ್ವಿಸ್…

