ಧಾರವಾಡದಲ್ಲಿ ಮಾರ್ಚ್ 28ರಂದು ವಿಶ್ವ ರಂಗಭೂಮಿ ದಿನಾಚರಣೆ: ಮಾಲತಿ ಕುಂದಾಪುರ ಅವರಿಗೆ ‘ರಂಗ ಸ್ನೇಹಿತ’ ಪ್ರಶಸ್ತಿ ಪ್ರದಾನ

ಧಾರವಾಡ: ನಗರದ ಸ್ನೇಹಿತರು ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯ ಪ್ರಯುಕ್ತ ವಿಶೇಷ ಸಮಾರಂಭವನ್ನು ಮಾರ್ಚ್ 28ರಂದು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 5:30ಕ್ಕೆ ಧಾರವಾಡದ ಜಿಲ್ಲಾ ಸಾಹಿತ್ಯ ಪರಿಷತ್ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಹುಬ್ಬಳ್ಳಿಯ ಹಿರಿಯ ವೃತ್ತಿ ರಂಗಭೂಮಿ ಕಲಾವಿದೆ ಶ್ರೀಮತಿ ಮಾಲತಿ ಕುಂದಾಪುರ ಅವರಿಗೆ ಪ್ರತಿಷ್ಠಿತ ‘ರಂಗ ಸ್ನೇಹಿತ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ವಿಜಯೀಂದ್ರ ಅರ್ಚಕ…

Read More

​ಧಾರವಾಡ ಜಿಲ್ಲೆಯಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಬ್ಬ: 105 ಕೇಂದ್ರಗಳಲ್ಲಿ 29,568 ವಿದ್ಯಾರ್ಥಿಗಳಿಂದ ಪರೀಕ್ಷೆ

ಧಾರವಾಡ: ಜಿಲ್ಲೆಯಲ್ಲಿ 2026ರ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ ಜರುಗಲಿದ್ದು, ಸುಗಮ ಹಾಗೂ ಪಾರದರ್ಶಕ ಪರೀಕ್ಷೆಗಾಗಿ ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲೆಯ ಒಟ್ಟು 105 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 29,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಇದರಲ್ಲಿ 26,171 ಹೊಸ ವಿದ್ಯಾರ್ಥಿಗಳು, 960 ಬಾಹ್ಯ ಅಭ್ಯರ್ಥಿಗಳು ಹಾಗೂ 2,437 ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗಳು ಪ್ರತಿದಿನ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:15 ಗಂಟೆಯವರೆಗೆ…

Read More

ಕುಂದಗೋಳ: ಶಾಸಕ ಎಂ.ಆರ್. ಪಾಟೀಲ್ ಜನ್ಮದಿನಾಚರಣೆ ಅಂಗವಾಗಿ ಉಚಿತ ಕಣ್ಣಿನ ತಪಾಸಣಾ ಶಿಬಿರ

ಕುಂದಗೋಳ: ಕ್ಷೇತ್ರದ ಜನಪ್ರಿಯ ಶಾಸಕ ಎಂ.ಆರ್. ಪಾಟೀಲ್ ಅವರ 64ನೇ ಹುಟ್ಟುಹಬ್ಬದ ನಿಮಿತ್ತ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರ ವತಿಯಿಂದ ಪಟ್ಟಣದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.   ಈ ಶಿಬಿರದ ಉದ್ಘಾಟನೆಯನ್ನು ಶಾಸಕರ ಸಹೋದರ ಹಾಗೂ ಪ್ರಮುಖ ಮುಖಂಡ ಬಿ.ಆರ್. ಪಾಟೀಲ್ ನೆರವೇರಿಸಿದರು. ಇದಕ್ಕೂ ಮುನ್ನ ಶಾಸಕ ಎಂ.ಆರ್. ಪಾಟೀಲ್ ಅಭಿಮಾನಿ ಬಳಗದ ವತಿಯಿಂದ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನವನ್ನು…

Read More

ಧಾರವಾಡ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತಿಗಳಲ್ಲಿ ಹೊಸ ‘ಗ್ರಾಮ ಒನ್’ ಕೇಂದ್ರಗಳ ಸ್ಥಾಪನೆ: ಅರ್ಜಿ ಆಹ್ವಾನ

ಧಾರವಾಡ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಜನಸಂಖ್ಯೆ ಮತ್ತು ಗ್ರೇಡ್‌ಗಳ ವರ್ಗೀಕರಣದ ಆಧಾರದ ಮೇಲೆ ಹೆಚ್ಚುವರಿ ‘ಗ್ರಾಮ ಒನ್’ ಕೇಂದ್ರಗಳನ್ನು ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ಇ.ಡಿ.ಸಿ.ಎಸ್ ನಿರ್ದೇಶಕರ ಸೂಚನೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಾಯತಿಗಳ ವಿವರಗಳನ್ನು ನವೀಕರಿಸಿದೆ. ಈ ನವೀಕರಣದ ಅನ್ವಯ ಕೆಲವು ಗ್ರಾಮ ಪಂಚಾಯತಿಗಳು ಗ್ರೇಡ್-2 ರಿಂದ ಗ್ರೇಡ್-1 ಕ್ಕೆ ಮೇಲ್ದರ್ಜೆಗೇರಿವೆ. ಇಂತಹ ಉನ್ನತೀಕರಿಸಿದ ಹಾಗೂ ಹೊಸದಾಗಿ ಸೇರ್ಪಡೆಯಾದ ಪಂಚಾಯತಿಗಳಲ್ಲಿ…

Read More

ಜಿಲ್ಲೆಯಲ್ಲಿ ಗೃಹಬಳಕೆ ಸಿಲೆಂಡರ್ ಕೊರತೆ ಇಲ್ಲ; ವದಂತಿಗಳಿಗೆ ಕಿವಿಗೊಡಬೇಡಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ: ಜಿಲ್ಲೆಯ ಸಾರ್ವಜನಿಕರು ಹಾಗೂ ಗೃಹಬಳಕೆ ಅಡಿಗೆ ಅನಿಲ (ಎಲ್‌ಪಿಜಿ) ಗ್ರಾಹಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು. ಜಿಲ್ಲೆಯಲ್ಲಿ ಗೃಹಬಳಕೆ ಸಿಲೆಂಡರ್‌ಗಳ ಸಾಕಷ್ಟು ದಾಸ್ತಾನು ಲಭ್ಯವಿದ್ದು ಯಾವುದೇ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶಾದ್ಯಂತ ಎಲ್‌ಪಿಜಿ ಉತ್ಪಾದನೆ ಹಾಗೂ ಬಾಟಲಿಂಗ್ ಪ್ರಮಾಣ ಹೆಚ್ಚಿರುವುದರಿಂದ ಸಿಲೆಂಡರ್‌ಗಳ ಸರಬರಾಜು ಸಮರ್ಪಕವಾಗಿದ್ದು ಗ್ರಾಹಕರು ಗಾಬರಿಗೊಳ್ಳುವ ಅಗತ್ಯವಿಲ್ಲ. ಹೆಚ್ಚುವರಿಯಾಗಿ ಸಿಲೆಂಡರ್‌ಗಳನ್ನು ಸಂಗ್ರಹಿಸಿಕೊಳ್ಳುವುದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದ್ದಾರೆ. ಹೆಚ್ಚಿನ…

Read More

ಹೆದ್ದಾರಿಯಲ್ಲೇ ಅಡುಗೆ, ಟ್ರ್ಯಾಕ್ಟರ್ ನಿಲ್ಲಿಸಿ ರೈತರ ಬೃಹತ್ ಪ್ರತಿಭಟನೆ: 300 ಕೋಟಿ ಅನುದಾನಕ್ಕೆ ಕುಂದಗೋಳ ರೈತರ ಪಟ್ಟು

ಕುಂದಗೋಳ: ತಾಲ್ಲೂಕಿನ ಜಿಗಳೂರು ಕ್ರಾಸ್ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲೇ ರೈತರು ತಮ್ಮ ಎತ್ತು, ಚಕ್ಕಡಿ, ಟ್ರ್ಯಾಕ್ಟರ್ ಹಾಗೂ ನೀರಿನ ಟ್ಯಾಂಕರ್‌ಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ರೈತರು ಹೆದ್ದಾರಿಯಲ್ಲೇ ಅಡುಗೆ ಪಾತ್ರೆಗಳನ್ನಿಟ್ಟು ಅಡುಗೆ ಮಾಡುವ ಮೂಲಕ ತಮ್ಮ ಹೋರಾಟದ ತೀವ್ರತೆಯನ್ನು ಪ್ರದರ್ಶಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಹೊಸೂರಿನಿಂದ ಉದ್ಭವವಾಗುವ ಹಳ್ಳದಿಂದ ಕುಂದಗೋಳ ಹಾಗೂ ನವಲಗುಂದ ತಾಲ್ಲೂಕಿನ ಅಕ್ಕಪಕ್ಕದ ಸಾವಿರಾರು ಎಕರೆ ಜಮೀನುಗಳು ಮಳೆಯಾದಾಗ ಜಲಾವೃತಗೊಂಡು ಸಂಪೂರ್ಣ ಹಾಳಾಗುತ್ತಿವೆ….

Read More

ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುನ್ನುಗ್ಗಿ ಸಾಧನೆ ಮಾಡಲಿ: ಮಾಜಿ ಶಾಸಕಿ ಕುಸುಮಾವತಿ ಚ ಶಿವಳ್ಳಿ ಕರೆ

​ಕುಂದಗೋಳ: ಆಧುನಿಕ ಯುಗದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಅಪ್ರತಿಮ ಸಾಧನೆ ಮಾಡುತ್ತಿದ್ದು, ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು ಎಂದು ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಕರೆ ನೀಡಿದರು. ​ಪಟ್ಟಣದ ಮರಾಠಾ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕ ಹಾಗೂ ವಿವಿಧ ವೃಂದಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ ಹಾಗೂ ‘ಮಹಿಳಾ ಸಬಲೀಕರಣ’ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಇಂದು ಕೇವಲ ಮನೆಗೆ ಸೀಮಿತವಾಗದೆ ಭಾರತೀಯ ಸೇನೆ, ಪೊಲೀಸ್ ಇಲಾಖೆ,…

Read More

ಕುಂದಗೋಳ: ಅಂಚೆ ಕಚೇರಿಯಲ್ಲಿ ಗ್ರಾಹಕರು ಮರೆತ 50 ಸಾವಿರ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಪೋಸ್ಟ್ ಮಾಸ್ಟರ್

ಕುಂದಗೋಳ: ಇಂದಿನ ಕಾಲದಲ್ಲಿ ಹಣದ ವ್ಯಾಮೋಹಕ್ಕೆ ಬಿದ್ದು ಮನುಷ್ಯತ್ವ ಮರೆಯುವವರ ನಡುವೆ, ಅಂಚೆ ಇಲಾಖೆಯ ಅಧಿಕಾರಿಯೊಬ್ಬರು ಗ್ರಾಹಕರು ಮರೆತು ಹೋದ ಬರೋಬ್ಬರಿ 50 ಸಾವಿರ ರೂಪಾಯಿ ನಗದು ಹಣವನ್ನು ಸುರಕ್ಷಿತವಾಗಿ ಮರಳಿಸುವ ಮೂಲಕ ಆದರ್ಶಪ್ರಾಯರಾಗಿದ್ದಾರೆ. ಪಟ್ಟಣದ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಮಹೇಶ್ ರಾಮನಕೊಪ್ಪ ಅವರ ಈ ಕರ್ತವ್ಯ ಪ್ರಜ್ಞೆ ಈಗ ಸಾರ್ವಜನಿಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ. ​ಕಳೆದ ಮಾರ್ಚ್ 10 ರಂದು ಗ್ರಾಹಕರೊಬ್ಬರು ಅಂಚೆ ಕಚೇರಿಗೆ ಒಟ್ಟು 3 ಲಕ್ಷ ರೂಪಾಯಿ ನಗದು ತೆಗೆದುಕೊಂಡು ಬಂದಿದ್ದರು….

Read More

​ಗುಡಿಸಾಗರ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸಾಂಸ್ಕೃತಿಕ ವೈಭವ

ನವಲಗುಂದ: ತಾಲೂಕಿನ ಗುಡಿಸಾಗರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಸರಸ್ವತಿ ಪೂಜೆ, 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿದವು. ಕಾರ್ಯಕ್ರಮದ ಆರಂಭದಲ್ಲಿ ಗಣ್ಯರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ನಂತರ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು. ​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿದಾನಂದ ಮುತ್ತಣ್ಣವರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗುರುಲಿಂಗಯ್ಯ ಹಿರೇಮಠ್ ಆಗಮಿಸಿದ್ದರು. ರಜಪೂತ ಶಿಕ್ಷಕಿಯರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಡಿಎಂಸಿ ಸದಸ್ಯ…

Read More