ಬೇಸಿಗೆ ಶಿಬಿರಗಳು ಮಕ್ಕಳಲ್ಲಿಯ ಸೃಜನಶೀಲತೆ ಹೆಚ್ಚಿಸುತ್ತವೆ: ಪ್ರೊ. ಲಲಿತಾ ನಾಯಕ ಅಭಿಮತ
ಧಾರವಾಡ: ಇಂದಿನ ಮಕ್ಕಳಲ್ಲಿ ಮೊಬೈಲ್ ವ್ಯಸನ ಹೆಚ್ಚಾಗಿರುವ ಆತಂಕಕಾರಿ ಸಂದರ್ಭದಲ್ಲಿ, ಬೇಸಿಗೆ ಶಿಬಿರಗಳು ಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಅವರಲ್ಲಿ ಸುಪ್ತವಾಗಿರುವ ಸೃಜನಶೀಲತೆಯನ್ನು ಹೊರತರಲು ಸಹಕಾರಿಯಾಗಿವೆ ಎಂದು ಚಿತ್ರದುರ್ಗದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ಪ್ರಾಧ್ಯಾಪಕಿ ಪ್ರೊ. ಲಲಿತಾ ನಾಯಕ ಅವರು ಅಭಿಪ್ರಾಯಪಟ್ಟರು. ನಗರದ ಲೇಕ್ ಸಿಟಿಯ ಸಾಂಸ್ಕೃತಿಕ ಭವನದಲ್ಲಿ ‘ರೈಜಿಂಗ್ ಸ್ಟಾರ್ಸ್ ಆರ್ಟ್ ಮತ್ತು ಕಲ್ಚರಲ್ ಅಕಾಡೆಮಿ’ ಹಾಗೂ ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆ’ಯ ಸಹಯೋಗದಲ್ಲಿ ಆಯೋಜಿಸಿದ್ದ ‘ಮಕ್ಕಳ ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…

