ಬೇಸಿಗೆ ಶಿಬಿರಗಳು ಮಕ್ಕಳಲ್ಲಿಯ ಸೃಜನಶೀಲತೆ ಹೆಚ್ಚಿಸುತ್ತವೆ: ಪ್ರೊ. ಲಲಿತಾ ನಾಯಕ ಅಭಿಮತ

ಧಾರವಾಡ: ಇಂದಿನ ಮಕ್ಕಳಲ್ಲಿ ಮೊಬೈಲ್ ವ್ಯಸನ ಹೆಚ್ಚಾಗಿರುವ ಆತಂಕಕಾರಿ ಸಂದರ್ಭದಲ್ಲಿ, ಬೇಸಿಗೆ ಶಿಬಿರಗಳು ಮಕ್ಕಳನ್ನು ಮೊಬೈಲ್‌ನಿಂದ ದೂರವಿಟ್ಟು ಅವರಲ್ಲಿ ಸುಪ್ತವಾಗಿರುವ ಸೃಜನಶೀಲತೆಯನ್ನು ಹೊರತರಲು ಸಹಕಾರಿಯಾಗಿವೆ ಎಂದು ಚಿತ್ರದುರ್ಗದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ಪ್ರಾಧ್ಯಾಪಕಿ ಪ್ರೊ. ಲಲಿತಾ ನಾಯಕ ಅವರು ಅಭಿಪ್ರಾಯಪಟ್ಟರು. ​ನಗರದ ಲೇಕ್ ಸಿಟಿಯ ಸಾಂಸ್ಕೃತಿಕ ಭವನದಲ್ಲಿ ‘ರೈಜಿಂಗ್ ಸ್ಟಾರ್ಸ್ ಆರ್ಟ್ ಮತ್ತು ಕಲ್ಚರಲ್ ಅಕಾಡೆಮಿ’ ಹಾಗೂ ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆ’ಯ ಸಹಯೋಗದಲ್ಲಿ ಆಯೋಜಿಸಿದ್ದ ‘ಮಕ್ಕಳ ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…

Read More

ಗುಡಿಸಾಗರ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಸಡಗರ: ಸಾಮೂಹಿಕ ವಿವಾಹಕ್ಕೆ ಸಾಕ್ಷಿಯಾದ ಭಕ್ತಸಾಗರ

ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಭಕ್ತಿ ಮತ್ತು ಸೌಹಾರ್ದತೆಯ ಸಂಗಮದಂತಿದ್ದ ಈ ಜಾತ್ರಾ ಮಹೋತ್ಸವಕ್ಕೆ ನರಗುಂದ ಪತ್ರಿವನದ ಪೂಜ್ಯ ಅಜ್ಜರು ಆಗಮಿಸಿ, ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿದರು. ಮಂತ್ರಘೋಷಗಳ ನಡುವೆ ನೂತನ ವಧು-ವರರಿಗೆ ಅಕ್ಷತೆ ಹಾಕಿ ಹರಸಿದ ಪೂಜ್ಯರು, ದಾಂಪತ್ಯ ಜೀವನಕ್ಕೆ ಶುಭ ಹಾರೈಸಿದರು. ​ಜಾತ್ರೆಯ ಅಂಗವಾಗಿ ವಿವಿಧ ಊರುಗಳಿಂದ ಆಗಮಿಸಿದ್ದ ಶ್ರೀ ಬೀರಲಿಂಗೇಶ್ವರನ ಪಲ್ಲಕ್ಕಿಗಳು ಗ್ರಾಮದ…

Read More

ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್: ಮೇ 3 ರಂದು ಧಾರವಾಡದಲ್ಲಿ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ

ಧಾರವಾಡ: ಮಹಾರಾಷ್ಟ್ರದ ಸಾತಾರಾದಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಹಿಂದ್ ಕೇಸರಿ’ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಯನ್ನು ಮೇ 3 ರಂದು ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ (ಕೆ.ಸಿ.ಡಿ) ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಭಾರತೀಯ ಶೈಲಿ ಕುಸ್ತಿ ಸಂಘದ ಅಧ್ಯಕ್ಷ ರತನಕುಮಾರ ಮಠಪತಿ ತಿಳಿಸಿದರು. ​ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 14 ರಿಂದ 17 ರವರೆಗೆ ಸಾತಾರಾದಲ್ಲಿ 52ನೇ ಪುರುಷರ ಹಾಗೂ 4ನೇ ಮಹಿಳಾ ‘ಹಿಂದ್ ಕೇಸರಿ’ ಮತ್ತು…

Read More

ಕುಡಿಯುವ ನೀರಿಗಾಗಿ ಮಲಪ್ರಭಾ ಕಾಲುವೆಗೆ ನೀರು ಬಿಡುಗಡೆ: ಕೃಷಿ ಬಳಕೆಗೆ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ನಿಷೇಧ

ಧಾರವಾಡ: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಹಾಗೂ ನರಗುಂದ ಶಾಖಾ ಕಾಲುವೆಗಳಿಗೆ ಮೇ 1 ರಿಂದ ಮೇ 10ರವರೆಗೆ ನೀರು ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಈ ನೀರನ್ನು ಕೇವಲ ಕೆರೆಗಳನ್ನು ತುಂಬಿಸಿಕೊಳ್ಳಲು ಮಾತ್ರ ಬಳಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ​ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕಿನ…

Read More

ಧಾರವಾಡ ತಾಲೂಕಿನ ಗೃಹಲಕ್ಷ್ಮಿಯರ ಖಾತೆಗೆ ತಲಾ 58 ಸಾವಿರ ರೂ. ಜಮೆ: ಅರವಿಂದ ಏಗನಗೌಡರ

ಧಾರವಾಡ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವುದೇ ಸಮಿತಿಯ ಪ್ರಮುಖ ಆದ್ಯತೆಯಾಗಿದೆ. ಅದರಂತೆ ಗೃಹಲಕ್ಷ್ಮಿ ಯೋಜನೆಯಡಿ ಧಾರವಾಡ ತಾಲೂಕಿನ ಪ್ರತಿ ಅರ್ಹ ಮಹಿಳೆಯ ಖಾತೆಗೆ ಇದುವರೆಗೆ ತಲಾ 58,000 ರೂ.ಗಳಷ್ಟು ಹಣ ನೇರವಾಗಿ ಜಮೆಯಾಗಿದೆ ಎಂದು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ತಿಳಿಸಿದರು. ​ಬುಧವಾರ ಧಾರವಾಡ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯತಿ ಮಟ್ಟದಲ್ಲಿ ನಿರಂತರ ಸಭೆಗಳನ್ನು…

Read More

​ಧಾರವಾಡ: ಲಂಚದ ಬೇಡಿಕೆಗೆ ಬಿ.ಎಸ್ಸಿ ವಿದ್ಯಾರ್ಥಿ ಬಲಿ; ಮೂವರು ಪೊಲೀಸರ ಅಮಾನತು

ಧಾರವಾಡ: ನಗರದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿ.ಎಸ್ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ​ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಸೋಮವಾರ ರಾತ್ರಿ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತನ ತಾಯಿ ಕವಿತಾ ಅವರು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಗಾಂಜಾ ಪ್ರಕರಣವೊಂದರಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಆದಿತ್ಯನಿಗೆ ಪೊಲೀಸರು ಮಾನಸಿಕ ಕಿರುಕುಳ…

Read More

​ಧಾರವಾಡ: ಮರ್ಯಾದೆಗೆ ಅಂಜಿ ಬಿಎಸ್‌ಸಿ ವಿದ್ಯಾರ್ಥಿ ನೇಣಿಗೆ ಶರಣು; ವಿದ್ಯಾಗಿರಿ ಪೊಲೀಸರ ವಿರುದ್ಧ ಸುಲಿಗೆಯ ಗಂಭೀರ ಆರೋಪ.

​ಧಾರವಾಡ: ಪೊಲೀಸರ ಕಿರುಕುಳ ಹಾಗೂ ಸುಳ್ಳು ಪ್ರಕರಣದಲ್ಲಿ ಸಿಲುಕಿಸುವ ಬೆದರಿಕೆಯಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಮನಕಲುಕುವ ಘಟನೆ ಜಿಲ್ಲೆಯ ಗಿರಿನಗರದಲ್ಲಿ ನಡೆದಿದೆ. ನಗರದ ಕಿಟಲ್ ಕಾಲೇಜಿನಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ಆದಿತ್ಯ ಮ್ಯಾಗೇರಿ ಎಂಬಾತನೇ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡ ದುರ್ದೈವಿ. ​ಕಳೆದ ಶನಿವಾರ ವಿದ್ಯಾಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ ಆದಿತ್ಯ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಯುವಕರನ್ನು ಗಾಂಜಾ ಸೇವನೆಯ ಶಂಕೆಯ ಮೇಲೆ ವಶಕ್ಕೆ ಪಡೆದಿದ್ದರು. ಈ ವೇಳೆ ಆದಿತ್ಯನಿಗೆ…

Read More

ಅಮ್ಮಿನಬಾವಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ರಾಜ್ಯ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಚಾಲನೆ

ಧಾರವಾಡ  ಏ.27: ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರವನ್ನು ಉನ್ನತೀಕರಿಸುವ ಬೇಡಿಕೆ ಇತ್ತು. ಈಗ ಕಾರ್ಯರೂಪಕ್ಕೆ ಬರುತ್ತಿದೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಅವರು ಹೇಳಿದರು. ​ಅವರು ಸೋಮವಾರದಂದು (ಏ. 27) ಮಧ್ಯಾಹ್ನ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿನ ಸರ್ಕಾರಿ ಆರೋಗ್ಯ ಕೇಂದ್ರದ ಆವರಣದಲ್ಲಿರುವ ಅಮ್ಮಿನಬಾವಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ, ಮಾತನಾಡಿದರು. ​ಕೇವಲ…

Read More

ಬೇಸಿಗೆ ಮುಗಿಯುವವರೆಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾವಹಿಸಿ: ಉಸ್ತುವಾರಿ ಸಚಿವ ಸಂತೋಷ ಲಾಡ್ ಸೂಚನೆ

ಧಾರವಾಡ .27: ಬೇಸಿಗೆ ಕಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಯಾವುದೇ ಗ್ರಾಮ ಹಾಗೂ ಪಟ್ಟಣಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ತಹಶೀಲ್ದಾರರು ಮತ್ತು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ನಿರಂತರವಾಗಿ ನಿಗಾವಹಿಸಬೇಕು. ಈಗಾಗಲೇ ಜಿಲ್ಲೆಯ ವಿವಿಧ ತಾಲೂಕುಗಳ 15 ಗ್ರಾಮಗಳಲ್ಲಿ 17 ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಜಿಲ್ಲಾಡಳಿತ ಮೇಲಸ್ತುವಾರಿಯಲ್ಲಿ ಕ್ರಮವಹಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ…

Read More

ಮಾಹಿತಿ ನೀಡದೆ ಸತಾಯಿಸುತ್ತಿರುವ ಅಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು:

ನವಲಗುಂದ: ಮಾಹಿತಿ ಹಕ್ಕು ಕಾಯ್ದೆಯಡಿ ನಿಯಮಬದ್ಧವಾಗಿ ಸಾವಿರಾರು ರೂಪಾಯಿ ಶುಲ್ಕ ಪಾವತಿಸಿದರೂ ಮಾಹಿತಿ ನೀಡದೆ ಸತಾಯಿಸುತ್ತಿರುವ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿಯ ವಿರುದ್ಧ ಇದೀಗ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕರ್ತವ್ಯಲೋಪದ ಆರೋಪದಡಿ ಆರ್.ಟಿ.ಐ ಕಾರ್ಯಕರ್ತ ಮಾಬುಸಾಬ ಯರಗುಪ್ಪಿ ಅವರು ಈ ದೂರು ದಾಖಲಿಸಿದ್ದು, ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ​ಪ್ರಕರಣದ ಹಿನ್ನೆಲೆ: ಮಾಬುಸಾಬ ಯರಗುಪ್ಪಿ ಅವರು ದಿನಾಂಕ 13-10-2025 ರಂದು ಮಾಹಿತಿ ಹಕ್ಕು ಕಾಯ್ದೆ 2005 ರ ಅಡಿಯಲ್ಲಿ ಧಾರವಾಡ ಜಿಲ್ಲಾ…

Read More