ವಿಭಾಗ ಮಟ್ಟದ ಉದ್ಯೋಗ ಮೇಳ ಶೀಘ್ರ: ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಒತ್ತು – ಕಾಂತಾ ನಾಯಕ
ಧಾರವಾಡ, ಜೂ.24: ಬೆಳಗಾವಿ ವಿಭಾಗ ಮಟ್ಟದ ಉದ್ಯೋಗ ಮೇಳ ಆಯೋಜನೆ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಿದರೆ ಬೆಳಗಾವಿ ವಿಭಾಗ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಹುಬ್ಬಳ್ಳಿ-ಧಾರವಾಡ ನಗರಗಳು ಕೈಗಾರಿಕಾ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ…

