ಸ್ವಾವಲಂಬಿ ಬದುಕಿಗೆ ಕೌಶಲ್ಯ ತರಬೇತಿ ಅಗತ್ಯ: ಅಣ್ಣಿಗೇರಿಯಲ್ಲಿ ಬ್ಯೂಟಿ ಪಾರ್ಲರ್ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಅಣ್ಣಿಗೇರಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನವಿದ್ದು, ಪ್ರತಿಯೊಬ್ಬ ಮಹಿಳೆಯು ಸರ್ಕಾರದ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ಮುಂದಾಗಬೇಕು ಎಂದು ಅಣ್ಣಿಗೇರಿಯ ಆದಿಕವಿ ಪಂಪ ಕನ್ನಡ ಬಳಗದ ಅಧ್ಯಕ್ಷ ವೀರೇಶ್ ಎಸ್. ಕುಬಸದ ಕರೆ ನೀಡಿದರು. ಶೇಷಾದ್ರಿ ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರದ ಸಮಾರೋಪ ಹಾಗೂ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ತಮಗೆ ಸಿಕ್ಕ…

