ಪತ್ರಕರ್ತರಿಗಾಗಿ ರಾಜ್ಯಮಟ್ಟದ ಕಥೆ, ಕವನ ಸ್ಪರ್ಧೆ: ರಾಯಚೂರು ರಿಪೋರ್ಟರ್ಸ್ ಗಿಲ್ಡ್ನಿಂದ ಅರ್ಜಿ ಆಹ್ವಾನ
ಧಾರವಾಡ: ರಾಯಚೂರು ರಿಪೋರ್ಟರ್ಸ್ ಗಿಲ್ಡ್ನ ಬೆಳ್ಳಿ ಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ ಸಮಸ್ತ ಪತ್ರಕರ್ತರಿಗಾಗಿ ರಾಜ್ಯಮಟ್ಟದ ಕಥೆ ಮತ್ತು ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ಆಸಕ್ತಿಯುಳ್ಳ ಪತ್ರಕರ್ತರು ತಮ್ಮ ಸ್ವರಚಿತ ಕವನ ಹಾಗೂ ಕಥೆಗಳನ್ನು ಫೆಬ್ರವರಿ 25, 2026 ರೊಳಗಾಗಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅತ್ಯುತ್ತಮ ಕೃತಿಗಳನ್ನು ಪ್ರತ್ಯೇಕ ಪುಸ್ತಕಗಳ ರೂಪದಲ್ಲಿ ಪ್ರಕಟಿಸಲು ಸಂಘಟನೆ ನಿರ್ಧರಿಸಿದೆ. ಈ ಸಾಹಿತ್ಯಿಕ ಸ್ಪರ್ಧೆಯಲ್ಲಿ ವಿಜೇತರಾಗುವ ಕಥೆಗಾರರಿಗೆ ಪ್ರಥಮ ಬಹುಮಾನವಾಗಿ 10,000 ರೂ., ದ್ವಿತೀಯ ಬಹುಮಾನ 7,000…

