ಪತ್ರಿಕಾರಂಗವು ಸರ್ಕಾರದ ತಪ್ಪುಗಳನ್ನು ತಿದ್ದುವ ಶಕ್ತಿ ಹೊಂದಿದೆ: ಶಾಸಕ ಎಂ.ಆರ್. ಪಾಟೀಲ್
ಕುಂದಗೋಳ: ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕಾರಂಗಕ್ಕೆ ಸರ್ಕಾರದ ಕಿವಿ ಹಿಂಡಿ ತಪ್ಪುಗಳನ್ನು ತಿದ್ದುವ ಶಕ್ತಿಯಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಹೇಳಿದರು. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ ಘೋರ್ಪಡೆ ಅವರನ್ನು ಶಾಸಕರ ನಿವಾಸದಲ್ಲಿ ಶಾಸಕರು ಹಾಗೂ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಪತ್ರಕರ್ತರು ಕೇವಲ ಸುದ್ದಿಯನ್ನು ನೀಡುವವರಾಗದೆ, ವಸ್ತುನಿಷ್ಠ ವರದಿಗಳ ಮೂಲಕ ಸಮಾಜದಲ್ಲಿರುವ ಅಂಕುಡೊಂಕುಗಳನ್ನು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನಸಾಮಾನ್ಯರ ಧ್ವನಿಯಾಗಿ ಕೆಲಸ…

