​ಧಾರವಾಡ: ನಾಪತ್ತೆಯಾಗಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ನಿರ್ಜನ ಪ್ರದೇಶದಲ್ಲಿ ಶವ ಪತ್ತೆ

ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದ 19 ವರ್ಷದ ಯುವತಿಯೋರ್ವಳನ್ನು ಬರ್ಬರವಾಗಿ ಹತ್ಯೆಗೈದು, ಶವವನ್ನು ನಗರದ ಹೊರವಲಯದಲ್ಲಿ ಎಸೆದು ಹೋಗಿರುವ ಆಘಾತಕಾರಿ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ​ನಗರದ ಗಾಂಧಿ ಚೌಕ್ ನಿವಾಸಿ ಝಕಿಯಾ ಮುಲ್ಲಾ (19) ಎಂಬುವವರೇ ಹತ್ಯೆಯಾದ ದುರ್ದೈವಿ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಝಕಿಯಾ, ರಾತ್ರಿಯಾದರೂ ಮನೆಗೆ ಮರಳಿರಲಿಲ್ಲ. ಇದರಿಂದ ಕಂಗಾಲಾದ ಕುಟುಂಬಸ್ಥರು ರಾತ್ರಿಯಿಡೀ ಹುಡುಕಾಟ ನಡೆಸಿದ್ದರು. ಆದರೆ, ಇಂದು (ಬುಧವಾರ) ಮುಂಜಾನೆ ನಗರದ ಹೊರವಲಯದ…

Read More

ಮಹಿಳಾ ಅಧಿಕಾರಿಗಳಿಗೆ ಅಶ್ಲೀಲ ನಿಂದನೆ, ಜೀವ ಬೆದರಿಕೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಜಯ ಕರ್ನಾಟಕ ಬೃಹತ್ ಪ್ರತಿಭಟನೆ

​ಧಾರವಾಡ, : ಚಿಕ್ಕಬಳ್ಳಾಪುರ ಹಾಗೂ ಮುಖ್ಯಮಂತ್ರಿಗಳ ಸ್ವಕ್ಷೇತ್ರ ವರುಣಾದಲ್ಲಿ ಮಹಿಳಾ ಅಧಿಕಾರಿಗಳ ಮೇಲೆ ನಡೆದ ದೌರ್ಜನ್ಯ, ಅಶ್ಲೀಲ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣಗಳನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬುದುವಾರದಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ​ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಾದ ಅಮೃತಾ ಗೌಡ ಹಾಗೂ ಪೌರಕಾರ್ಮಿಕರಿಗೆ ಅಶ್ಲೀಲ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಹಾಗೂ ವರುಣಾ ಕ್ಷೇತ್ರದಲ್ಲಿ…

Read More

ಹೃದಯಾಘಾತವಲ್ಲ, ಕೊಲೆ ಶಂಕೆ: 2 ತಿಂಗಳ ಬಳಿಕ ಸಾರಿಗೆ ಸಿಬ್ಬಂದಿಯ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

​ಧಾರವಾಡ/ಅಣ್ಣಿಗೇರಿ: ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ನಂಬಲಾದ ಪ್ರಕರಣವೊಂದು ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಮಗನ ಸಾವು ಸಹಜವಾದುದಲ್ಲ, ಇದೊಂದು ಕೊಲೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ, ಹೂತಿದ್ದ ಶವವನ್ನು ಎರಡು ತಿಂಗಳ ಬಳಿಕ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ ಘಟನೆ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ನಡೆದಿದೆ. ​ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKSRTC) ಚಾಲಕರಾಗಿದ್ದ ಬಾಬಾಜಾನ್ ಚಿನ್ನೂರು (51) ಮೃತಪಟ್ಟವರು. ಪತ್ನಿ ವಹಿದಾಬಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಬಾಬಾಜಾನ್,…

Read More

ಧಾರವಾಡದ ‘ಕಿಸಾನ್ ಮಾಲ್’: ಒಂದೇ ಸೂರಿನಡಿ ರಿಯಾಯಿತಿ ದರದಲ್ಲಿ ಕೃಷಿ ಪರಿಕರ ಲಭ್ಯ

ಧಾರವಾಡ, ಜ. 21: ಧಾರವಾಡ ಜಿಲ್ಲೆ ಹಾಗೂ ಸುತ್ತಮುತ್ತಲಿನ ರೈತರ ಅನುಕೂಲಕ್ಕಾಗಿ ತೋಟಗಾರಿಕೆ ಇಲಾಖೆಯು ಇಲ್ಲಿನ ಕುಂಬಾಪುರ ಫಾರ್ಮ್ ಆವರಣದಲ್ಲಿರುವ ತರಕಾರಿ ಬೆಳೆಗಳ ಉತ್ಕೃಷ್ಟ ಕೇಂದ್ರದಲ್ಲಿ ‘ಕಿಸಾನ್ ಮಾಲ್’ ಅನ್ನು ಸ್ಥಾಪಿಸಿದ್ದು, ರೈತರಿಗೆ ಅಗತ್ಯವಿರುವ ಕೃಷಿ ಪರಿಕರಗಳನ್ನು ರಿಯಾಯಿತಿ ದರದಲ್ಲಿ ಒದಗಿಸುತ್ತಿದೆ. ​ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಸ್ಥಾಪಿಸಲಾಗಿರುವ ಈ ಕಿಸಾನ್ ಮಾಲ್‌ನಲ್ಲಿ, ತೋಟಗಾರಿಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅವಶ್ಯಕವಾದ ಬಿತ್ತನೆ ಬೀಜಗಳು, ರಸಗೊಬ್ಬರಗಳು, ಸಾವಯವ ಗೊಬ್ಬರಗಳು, ನೀರಾವರಿ ಪರಿಕರಗಳು, ಕೃಷಿ ಯಂತ್ರೋಪಕರಣಗಳು ಹಾಗೂ ಸಲಕರಣೆಗಳು ಲಭ್ಯವಿವೆ….

Read More

​ಬಾಲಗೌರವ ಹಾಗೂ ‘ಪುಸ್ತಕ ಚಂದಿರ’ ಪ್ರಶಸ್ತಿಗೆ ಅರ್ಜಿ ಆಹ್ವಾನ: ಫೆ. 20 ಕೊನೆಯ ದಿನ

​ಧಾರವಾಡ: ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2024-25 ಹಾಗೂ 2025-26ನೇ ಸಾಲಿನ ‘ಬಾಲಗೌರವ’ ಪ್ರಶಸ್ತಿ ಹಾಗೂ 2024 ಮತ್ತು 2025ನೇ ಸಾಲಿನ ‘ಮಕ್ಕಳ ಪುಸ್ತಕ ಚಂದಿರ’ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ​ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ನೀಡಲಾಗುತ್ತದೆ. ಕ್ರೀಡೆ, ಸಂಗೀತ, ನೃತ್ಯ, ನಟನೆ, ಚಿತ್ರಕಲೆ, ವಿಜ್ಞಾನ ಹಾಗೂ ಸಂಶೋಧನೆ ಸೇರಿದಂತೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ಪ್ರಶಸ್ತಿ ಪುರಸ್ಕೃತವಾಗಿರುವ ಮಕ್ಕಳು ಇದಕ್ಕೆ ಅರ್ಜಿ…

Read More

ಹೆಚ್ಚುವರಿ ಶಿಕ್ಷಕರ ನಿಯೋಜನೆಯಲ್ಲಿ ಕರ್ತವ್ಯಲೋಪ: ನವಲಗುಂದ ಬಿಇಒ, ಡಿಡಿಪಿಐ ವಿರುದ್ಧ ಲೋಕಾಯುಕ್ತಕ್ಕೆ ದೂರು

ನವಲಗುಂದ: ಹೆಚ್ಚುವರಿ ಶಿಕ್ಷಕರು ತಾವೇ ಆಯ್ಕೆ ಮಾಡಿಕೊಂಡ ಶಾಲೆಗಳಿಗೆ ಹಾಜರಾಗುವಂತೆ ನೋಡಿಕೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ನವಲಗುಂದದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಹಾಗೂ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಎಸ್.ಎಸ್. ಕೆಳದಿಮಠ ಅವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮಾಬುಸಾಬ ಯರಗುಪ್ಪಿ ತಿಳಿಸಿದ್ದಾರೆ. ​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2025ನೇ ಸಾಲಿನ ಸೆಪ್ಟೆಂಬರ್ 9 ರಂದು ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕುಗಳ ಹೆಚ್ಚುವರಿ ಶಿಕ್ಷಕರ…

Read More

ಕುಂದಗೋಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅಶೋಕ ಘೋರ್ಪಡೆ ಆಯ್ಕೆ

ಕುಂದಗೋಳ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕುಂದಗೋಳ ತಾಲ್ಲೂಕು ಘಟಕದ ಪದಾಧಿಕಾರಿಗಳ ಚುನಾವಣೆ ಬುಧವಾರ ಪಟ್ಟಣದಲ್ಲಿ ಜರುಗಿದ್ದು, ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಅಶೋಕ ಘೋರ್ಪಡೆ ಅವರು ಆಯ್ಕೆಯಾಗಿದ್ದಾರೆ. ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಶೋಕ ಘೋರ್ಪಡೆ ಹಾಗೂ ಖಾದರಸಾಬ ಡಗಲಿ ಅವರು ನಾಮಪತ್ರ ಸಲ್ಲಿಸಿದ್ದರು. ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಶೋಕ ಘೋರ್ಪಡೆ 04 ಮತಗಳನ್ನು ಪಡೆದು ಜಯಶಾಲಿಯಾದರು. ಇದೇ ವೇಳೆ ಪ್ರಧಾನ ಕಾರ್ಯದರ್ಶಿಯಾಗಿ ಬಸವರಾಜ ದೀಪಾವಳಿ ಹಾಗೂ ಖಜಾಂಚಿಯಾಗಿ ಶೇಖಪ್ಪ ಕುಂದಗೋಳ ಅವರು ಅವಿರೋಧವಾಗಿ…

Read More

ಜಿಲ್ಲಾ ಮಾನವ ಅಭಿವೃದ್ಧಿ ಹಾಗೂ ಸುಸ್ಥಿರ ಯೋಜನೆ: ನಿಖರ ದತ್ತಾಂಶ ಒದಗಿಸುವುದು ಇಲಾಖೆಗಳ ಕರ್ತವ್ಯ – ಎಚ್.ಶಶಿಧರ್

ಧಾರವಾಡ, ಜ. 20: ಜಿಲ್ಲಾ ಮಾನವ ಅಭಿವೃದ್ಧಿ ವರದಿ (DHDR)-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ (ISDDP)-2031ರ ತಯಾರಿಕೆಯಲ್ಲಿ ಸರ್ಕಾರಿ ಇಲಾಖೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮುಂದಿನ 5 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ನಿಖರವಾದ, ವಿಶ್ವಾಸಾರ್ಹ ಹಾಗೂ ವಾಸ್ತವಿಕ ಮಾಹಿತಿಯನ್ನು ಒದಗಿಸುವುದು ಪ್ರತಿಯೊಂದು ಇಲಾಖೆಯ ಕರ್ತವ್ಯವಾಗಿದೆ ಎಂದು ರಾಜ್ಯ ಸಂಪನ್ಮೂಲ ಅಧಿಕಾರಿ ಎಚ್.ಶಶಿಧರ್ ತಿಳಿಸಿದರು. ​ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಾನವ ಅಭಿವೃದ್ಧಿ ಯೋಜನೆ ಕುರಿತ ಒಂದು…

Read More

ಸೇವೆಯಿಂದ ನಿವೃತ್ತರಾದರೂ ‘ವೃತ್ತಿ’ಯಿಂದಲ್ಲ: ಸಂಬಳವಿಲ್ಲದೆ ಪಾಠ ಮುಂದುವರಿಸಿದ ಶಿಕ್ಷಕ!

ನವಲಗುಂದ: ಸಾಮಾನ್ಯವಾಗಿ ಸರ್ಕಾರಿ ನೌಕರರು ನಿವೃತ್ತಿಯ ದಿನಾಂಕ ಹತ್ತಿರ ಬರುತ್ತಿದ್ದಂತೆ ಕೆಲಸದಿಂದ ವಿರಮಿಸಲು ಕಾತುರರಾಗಿರುತ್ತಾರೆ. ಆದರೆ, ಇಲ್ಲೊಬ್ಬ ಶಿಕ್ಷಕರು ನಿವೃತ್ತರಾಗಿ ತಿಂಗಳುಗಳೇ ಕಳೆದರೂ, ಮಕ್ಕಳ ಮೇಲಿನ ಕಾಳಜಿಯಿಂದ ಸಂಬಳವಿಲ್ಲದೆ ಪಾಠ ಮುಂದುವರಿಸುವ ಮೂಲಕ ಮಾನವೀಯತೆಯ ಅಪರೂಪದ ಮಾದರಿಯಾಗಿದ್ದಾರೆ. ​ಪಟ್ಟಣದ ಸರ್ಕಾರಿ ಉರ್ದು ಗಂಡು ಮಕ್ಕಳ ಶಾಲೆ ನಂ-1ರ ಕನ್ನಡ ವಿಷಯದ ಶಿಕ್ಷಕರಾದ ಸತೀಶ ಕುಲಕರ್ಣಿ ಅವರೇ ಈ ಮಾದರಿ ವ್ಯಕ್ತಿತ್ವ. ಇವರು ಕಳೆದ 2025ರ ನವೆಂಬರ್ 30ರಂದು ಸರ್ಕಾರಿ ಸೇವೆಗೆ ಅಧಿಕೃತವಾಗಿ ನಿವೃತ್ತಿ ಹೊಂದಿದ್ದರು. ನಿಯಮದ ಪ್ರಕಾರ…

Read More

​ಕುಂದಗೋಳದ ಅಪ್ರಾಪ್ತ ಬಾಲಕನ ಬರ್ಬರ ಹತ್ಯೆ: ರಕ್ಷಣೆ ಮಾಡಬೇಕಾದ ಪೊಲೀಸರದ್ದೇ ನಿರ್ಲಕ್ಷ್ಯ? ಆರೋಪ? ಲಂಚ, ಗಾಂಜಾ ದಂಧೆಯ ಬಗ್ಗೆ ಶಾಸಕರ ಎದುರು ಸ್ಫೋಟಗೊಂಡ ಆಕ್ರೋಶ!

ಕುಂದಗೋಳ: ಶಾಂತಿ ಮತ್ತು ಸೌಹಾರ್ದತೆಗೆ ಹೆಸಾಗಿದ್ದ ಕುಂದಗೋಳ ಪಟ್ಟಣದಲ್ಲಿ ಜನವರಿ 13ರಂದು ನಡೆದ ಅಪ್ರಾಪ್ತ ಬಾಲಕನ ಭೀಕರ ಕೊಲೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಈ ರಕ್ತಸಿಕ್ತ ಅಧ್ಯಾಯದ ಹಿಂದೆ ಮಕ್ಕಳನ್ನು ತಿದ್ದಬೇಕಾದ ಹಿರಿಯರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಇಲಾಖೆಯ ‘ಅಕ್ಷಮ್ಯ ನಿರ್ಲಕ್ಷ್ಯ’ ಎದ್ದು ಕಾಣುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ​ಪಟ್ಟಣದ ಸೊಸೈಟಿ ಆವರಣದಲ್ಲಿ ನಿಂಗರಾಜ್ ಮಲ್ಲಿಕಾರ್ಜುನ ಅವಾರಿ ಎಂಬ ಬಾಲಕನನ್ನು ಆತನ ಸ್ನೇಹಿತರೇ ಆದ ಮೂವರು ಅಪ್ರಾಪ್ತರು ಚಾಕುವಿನಿಂದ…

Read More