ಕಾದಂಬರಿಗಳ ಮೂಲಕ ಭಾಷಾ ಜಾಗೃತಿ ಮೂಡಿಸಿದ ಕೀರ್ತಿ ಗಳಗನಾಥರಿಗೆ ಸಲ್ಲುತ್ತದೆ: ಸಿ. ಆರ್. ಜೋಶಿ
ಧಾರವಾಡ: ಗಳಗನಾಥರು ಆಧುನಿಕ ಕನ್ನಡ ಸಾಹಿತ್ಯದ ಮೊದಲ ಕಾದಂಬರಿಕಾರರು. ಮರಾಠಿ ಪ್ರಾಬಲ್ಯವಿದ್ದ ಕಾಲಘಟ್ಟದಲ್ಲಿ ತಮ್ಮ ಕಾದಂಬರಿಗಳ ಮೂಲಕ ನಾಡಿನಾದ್ಯಂತ ಸಾಹಿತ್ಯ ಪ್ರಸಾರ ಮಾಡಿ, ಕನ್ನಡಿಗರಲ್ಲಿ ಭಾಷಾ ಜಾಗೃತಿ ಮೂಡಿಸಿದರು ಎಂದು ನಿವೃತ್ತ ಉಪನ್ಯಾಸಕ ಸಿ. ಆರ್. ಜೋಶಿ ಅಭಿಪ್ರಾಯಪಟ್ಟರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಕನ್ನಡ ಕಾದಂಬರಿ ಪಿತಾಮಹ ಗಳಗನಾಥರು ಹಾಗೂ ಸಂಶೋಧಕ ಶ್ರೀ ನಾ. ಶ್ರೀ. ರಾಜಪುರೋಹಿತರ ಸ್ಮರಣಾರ್ಥ ದತ್ತಿ ಉಪನ್ಯಾಸ’ ಕಾರ್ಯಕ್ರಮದಲ್ಲಿ ‘ಬದುಕು-ಬರಹ’ ವಿಷಯದ ಕುರಿತು ಅವರು ಮಾತನಾಡಿದರು. ಮರಾಠಿ ಪ್ರಭಾವವಿದ್ದ…

