ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಇನಾಂವೀರಾಪುರ ಗ್ರಾಮ ಭೇಟಿ; ವಾಸ್ತವಿಕ ಪರಿಸ್ಥಿತಿ ಅವಲೋಕನ
ಧಾರವಾಡ ಜ.06: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್ ಭಟ್ ಅವರು ಇಂದು (ಜ.06) ಬೆಳಿಗ್ಗೆ ಇನಾಂವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಕುಟುಂಬದ ಮೇಲೆ ಆಗಿರುವ ದೌರ್ಜನ್ಯ ಪ್ರಕರಣದ ಹಿನ್ನಲೆಯಲ್ಲಿ ವಾಸ್ತವಿಕ ಪರಿಸ್ಥಿತಿಯನ್ನು ಅವಲೋಕಿಸಿದರು. ದಲಿತ ಕುಟುಂಬಗಳು ವಾಸಿಸುವ ಓಣಿ ಹಾಗೂ ದೌರ್ಜನ್ಯಕ್ಕೆ ಒಳಗಾದ ವಿವೇಕಾನಂದ ಅವರ ಮನೆ ಹಾಗೂ ದೌರ್ಜನ್ಯ ಮತ್ತು ಕೊಲೆ ಕೃತ್ಯ ನಡೆದ ಸ್ಥಳ ಪರಿಶೀಲಿಸಿ, ಸ್ಥಳೀಯ ನಿವಾಸಿಗಳಿಂದ, ಪೆÇಲೀಸ್ ಅಧಿಕಾರಿಗಳಿಂದ ಹಾಗೂ ಇತರರಿಂದ ವಿವರವಾದ ಮಾಹಿತಿಯನ್ನು…

