ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಇನಾಂವೀರಾಪುರ ಗ್ರಾಮ ಭೇಟಿ; ವಾಸ್ತವಿಕ ಪರಿಸ್ಥಿತಿ ಅವಲೋಕನ

ಧಾರವಾಡ ಜ.06: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್ ಭಟ್ ಅವರು ಇಂದು (ಜ.06) ಬೆಳಿಗ್ಗೆ ಇನಾಂವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಕುಟುಂಬದ ಮೇಲೆ ಆಗಿರುವ ದೌರ್ಜನ್ಯ ಪ್ರಕರಣದ ಹಿನ್ನಲೆಯಲ್ಲಿ ವಾಸ್ತವಿಕ ಪರಿಸ್ಥಿತಿಯನ್ನು ಅವಲೋಕಿಸಿದರು. ದಲಿತ ಕುಟುಂಬಗಳು ವಾಸಿಸುವ ಓಣಿ ಹಾಗೂ ದೌರ್ಜನ್ಯಕ್ಕೆ ಒಳಗಾದ ವಿವೇಕಾನಂದ ಅವರ ಮನೆ ಹಾಗೂ ದೌರ್ಜನ್ಯ ಮತ್ತು ಕೊಲೆ ಕೃತ್ಯ ನಡೆದ ಸ್ಥಳ ಪರಿಶೀಲಿಸಿ, ಸ್ಥಳೀಯ ನಿವಾಸಿಗಳಿಂದ, ಪೆÇಲೀಸ್ ಅಧಿಕಾರಿಗಳಿಂದ ಹಾಗೂ ಇತರರಿಂದ ವಿವರವಾದ ಮಾಹಿತಿಯನ್ನು…

Read More

ಗುಡಗೇರಿ: ಶ್ರೀ ಶಾಂತಿನಾಥ ತೀರ್ಥಂಕರ ನೂತನ ಬಸದಿಯಲ್ಲಿ ಭಕ್ತಿಪೂರ್ವಕ ಹಾಲಗಂಬ ಪ್ರತಿಷ್ಠಾಪನೆ

ಕುಂದಗೋಳ: ತಾಲೂಕಿನ ಗುಡಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ 1008 ಭಗವಾನ್ ಶಾಂತಿನಾಥ ತೀರ್ಥಂಕರ ಬಸದಿಯ ಪಂಚಕಲ್ಯಾಣ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಇದರ ಅಂಗವಾಗಿ ಸೋಮವಾರ ನೂತನ ಬಸದಿಯ ಆವರಣದಲ್ಲಿ ಶಾಸ್ತ್ರೋಕ್ತವಾಗಿ ಹಾಲಗಂಬ ನೆಡುವ ಧಾರ್ಮಿಕ ಕಾರ್ಯಕ್ರಮ ಸಕಲ ವಿಧಿವಿಧಾನಗಳೊಂದಿಗೆ ಜರುಗಿತು. ಮುಂಬರುವ ಫೆಬ್ರವರಿ 1 ರಿಂದ 6 ರವರೆಗೆ ಅದ್ಧೂರಿಯಾಗಿ ನಡೆಯಲಿರುವ ಪಂಚಕಲ್ಯಾಣ ಮಹೋತ್ಸವದ ಪೂರ್ವಭಾವಿ ವಿಧಿಯಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಂಜಾನೆ ಶ್ರೀ 1008 ಭಗವಾನ್ ಮಹಾವೀರ ತೀರ್ಥಂಕರರ ಕೋಟೆ ಬಸದಿಯಲ್ಲಿ ಭಗವಂತನಿಗೆ ಪಂಚಾಮೃತ…

Read More

ಧಾರವಾಡ: ನಾಳೆ ಹಿರಿಯ ಸಂಗೀತಗಾರ ಡಾ. ಅಶೋಕ ಹುಗ್ಗನ್ನವರ ಅವರಿಗೆ ‘ನುಡಿ ನಮನ’

ಧಾರವಾಡ: ಇತ್ತೀಚೆಗೆ ನಿಧನರಾದ ಹಿರಿಯ ಸಂಗೀತಗಾರ ಹಾಗೂ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಸದಸ್ಯ ಡಾ. ಅಶೋಕ ಹುಗ್ಗನ್ನವರ ಅವರಿಗೆ ಗೌರವ ಸಲ್ಲಿಸಲು ಜನೆವರಿ 06ರಂದು ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ​ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಾಯಣ ಆವರಣದಲ್ಲಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಭವನದಲ್ಲಿ ನಡೆಯಲಿದೆ. ​ಕಾರ್ಯಕ್ರಮದ ವಿವರ: ​ಗಣ್ಯರ…

Read More

ನನ್ನ ಬೆಳೆ ನನ್ನ ಹಕ್ಕು: ಹಿಂಗಾರು ಬೆಳೆ ಸಮೀಕ್ಷೆ ಆರಂಭ; ಜನೆವರಿ 15ರೊಳಗೆ ಮಾಹಿತಿ ನೀಡಲು ರೈತರಿಗೆ ಮನವಿ

ಧಾರವಾಡ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ನನ್ನ ಬೆಳೆ ನನ್ನ ಹಕ್ಕು’ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ಸ್ವತಃ ತಾವೇ ಮೊಬೈಲ್ ಆ್ಯಪ್ ಮೂಲಕ ದಾಖಲಿಸಲು ಕೃಷಿ ಇಲಾಖೆ ಅವಕಾಶ ಕಲ್ಪಿಸಿದೆ. ​ಆ್ಯಪ್ ಮೂಲಕ ವಿವರ ದಾಖಲಿಸಲು ಅವಕಾಶ: ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ ‘ಹಿಂಗಾರು ರೈತರ ಬೆಳೆ ಸಮೀಕ್ಷೆ 2025-26’ ಎಂಬ ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡು, ಜನೆವರಿ…

Read More

ಕುಂದಗೋಳ: ಕಡಲೆ ಖರೀದಿ ಕೇಂದ್ರ ಆರಂಭಿಸಿ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ತಹಶೀಲ್ದಾರ ರಾಜು ಮಾವರಕರಿಗೆ ರೈತರ ಮನವಿ

ಕುಂದಗೋಳ: ತಾಲೂಕಿನಾದ್ಯಂತ ಸತತ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ಕಡಲೆ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸಿ ತಕ್ಷಣವೇ ಎಂ.ಎಸ್.ಪಿ (MSP) ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿ ಕುಂದಗೋಳ ಬೆಳೆ ರಕ್ಷಕ ರೈತ ಸಂಘದ ವತಿಯಿಂದ ತಹಶೀಲ್ದಾರ್ ರಾಜು ಮಾವರಕರ ಅವರಿಗೆ ಮನವಿ ಸಲ್ಲಿಸಲಾಯಿತು. ಕಳೆದ 4–5 ವರ್ಷಗಳಿಂದ ಪ್ರಕೃತಿ ವಿಕೋಪ ಹಾಗೂ ಅತಿವೃಷ್ಟಿಯಿಂದ ತಾಲೂಕಿನ ರೈತರು ತತ್ತರಿಸಿ ಹೋಗಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ, ಗೊಬ್ಬರ ಹಾಗೂ ಕ್ರಿಮಿನಾಶಕಕ್ಕಾಗಿ ಸಾಲಸೋಲ ಮಾಡಿ…

Read More

​ಮೆಕ್ಕೆಜೋಳ ಬೆಳೆಗಾರರಿಗೆ ಬೆಲೆ ವ್ಯತ್ಯಾಸದ ಮೊತ್ತ ಪಾವತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಧಾರವಾಡ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಮೆಕ್ಕೆಜೋಳ ಬೆಳೆಗಾರರ ಹಿತರಕ್ಷಣೆಗಾಗಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಧಾರವಾಡ ಜಿಲ್ಲೆಗೆ ಗರಿಷ್ಠ 1.85 ಲಕ್ಷ ಕ್ವಿಂಟಾಲ್ ಮೆಕ್ಕೆಜೋಳದ ಪ್ರಮಾಣವನ್ನು ನಿಗದಿಪಡಿಸಲಾಗಿದ್ದು, ನಿಯಂತ್ರಿತ ಮಾರುಕಟ್ಟೆಗಳಲ್ಲಿನ ವಹಿವಾಟಿನ ಆಧಾರದ ಮೇಲೆ ರೈತರಿಗೆ ಆರ್ಥಿಕ ನೆರವು ದೊರೆಯಲಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ​ಪ್ರಸ್ತುತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ಸರಾಸರಿ ಧಾರಣೆ ಪ್ರತಿ ಕ್ವಿಂಟಾಲ್‌ಗೆ 1,900 ರೂಪಾಯಿ ಇರುವುದನ್ನು ಗಮನಿಸಿರುವ ಸರ್ಕಾರ,…

Read More

​ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಧಾರವಾಡ ಜಿಲ್ಲೆ ರಾಜ್ಯಕ್ಕೇ ಪ್ರಥಮ: ಅಧ್ಯಕ್ಷ ಹೆಚ್.ಎಂ. ರೇವಣ್ಣ ಪ್ರಶಂಸೆ

​ಧಾರವಾಡ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ ಧ್ಯೇಯದೊಂದಿಗೆ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಧಾರವಾಡ ಜಿಲ್ಲೆಯು ಶೇ. 98 ರಷ್ಟು ಪ್ರಗತಿ ಸಾಧಿಸುವ ಮೂಲಕ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರು ಹರ್ಷ ವ್ಯಕ್ತಪಡಿಸಿದರು. ​ನಗರದ ಕೆ.ಸಿ.ಡಿ ಕಾಲೇಜು ಆವರಣದ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ…

Read More

​ಗಂಬ್ಯಾಪೂರದಲ್ಲಿ ‘ಯುವ ಶಕ್ತಿ’ ಗ್ರಾಮ ಘಟಕದ ಬ್ಯಾನರ್ ಉದ್ಘಾಟನೆ: ಗ್ರಾಮ ಸುಧಾರಣೆಗೆ ಯುವಕರ ಸಂಕಲ್ಪ

ಕಲಘಟಗಿ: ತಾಲೂಕಿನ ಗಂಬ್ಯಾಪೂರ ಗ್ರಾಮದಲ್ಲಿ ಇಂದು ‘ಯುವ ಶಕ್ತಿ’ ಗ್ರಾಮ ಘಟಕದ ವತಿಯಿಂದ ಅಧಿಕೃತವಾಗಿ ಬ್ಯಾನರ್ ಅಳವಡಿಸುವ ಮೂಲಕ ಸಂಘಟನೆಯ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ​ಗ್ರಾಮದ ಅಭಿವೃದ್ಧಿ ಮತ್ತು ಸುಧಾರಣೆಯಲ್ಲಿ ಯುವಜನತೆಯ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಈ ನಿಟ್ಟಿನಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸಲು ಯುವ ಶಕ್ತಿ ಘಟಕವು ಮುಂದಾಗಿದ್ದು, ಗ್ರಾಮದ ಸರ್ವತೋಮುಖ ಏಳಿಗೆಗಾಗಿ ಶ್ರಮಿಸುವ ಉದ್ದೇಶವನ್ನು ಹೊಂದಿದೆ. ಸಂಘ-ಸಂಸ್ಥೆಗಳ ಮೂಲಕ ಯುವಕರು ಒಗ್ಗೂಡಿದಾಗ ಮಾತ್ರ ಗ್ರಾಮದ ಬೆಳವಣಿಗೆ ಸಾಧ್ಯ ಎಂಬ ಆಶಯದೊಂದಿಗೆ ಈ ಘಟಕವನ್ನು ಸಕ್ರಿಯಗೊಳಿಸಲಾಗಿದೆ. ​ಬ್ಯಾನರ್ ಅಳವಡಿಸುವ…

Read More

ಅಣ್ಣಿಗೇರಿಯಲ್ಲಿ ಅಯ್ಯಪ್ಪ ಸ್ವಾಮಿಯ ಭವ್ಯ ಕುಂಭಮೇಳ ಹಾಗೂ ಮಹಾಪೂಜೆ: ಭಕ್ತರ ಸಾಗರ

ಅಣ್ಣಿಗೇರಿ: ಪಟ್ಟಣದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತಾದಿಗಳ ವತಿಯಿಂದ 108 ಕುಂಭಮೇಳದೊಂದಿಗೆ ಅಯ್ಯಪ್ಪ ಸ್ವಾಮಿಯ ಭವ್ಯ ಮೆರವಣಿಗೆ ಹಾಗೂ ಮಹಾಪೂಜಾ ಕಾರ್ಯಕ್ರಮಗಳು ಅತ್ಯಂತ ಸಡಗರ–ಸಂಭ್ರಮದಿಂದ ಜರುಗಿದವು. ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂಬ ಘೋಷಗಳ ನಡುವೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಯ್ಯಪ್ಪ ಸ್ವಾಮಿಯ ಭಾವಚಿತ್ರದ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸಲಾಯಿತು. ದಾಸೋಹ ಮಠದ ಡಾ. ಶಿವಕುಮಾರ ಮಹಾಸ್ವಾಮಿಗಳು ಮೆರವಣಿಗೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದರು. “ಅಯ್ಯಪ್ಪ ಮಾಲಾಧಾರಿಗಳು ಮಾಲೆ ಧರಿಸಿದ ಅವಧಿಯಲ್ಲಿ ಅತ್ಯಂತ ಕಠಿಣ ವ್ರತವನ್ನು ಪಾಲಿಸುತ್ತಾರೆ. ಮಾಲೆ ವಿಸರ್ಜನೆ ಮಾಡಿದ…

Read More

​ಗ್ಯಾರಂಟಿ ಉತ್ಸವ ಮಾದರಿಯಾಗಿ ಆಯೋಜಿಸಿ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ

ಧಾರವಾಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪ್ರತಿ ಮನೆ-ಮನಗಳಿಗೆ ತಲುಪಿಸುವ ನಿಟ್ಟಿನಲ್ಲಿ ಜನೆವರಿ 5 ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ **‘ಗ್ಯಾರಂಟಿ ಉತ್ಸವ’**ವನ್ನು ಅತ್ಯಂತ ಅರ್ಥಪೂರ್ಣ ಹಾಗೂ ಮಾದರಿಯಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಶನಿವಾರ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜರುಗಿದ ಗ್ಯಾರಂಟಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಗ್ಯಾರಂಟಿ ಯೋಜನೆಗಳು ನಿರ್ಣಾಯಕ ಪಾತ್ರ ವಹಿಸಿವೆ. ಈ…

Read More