​ಧಾರವಾಡ: ನಾಗರಿಕ ಬಂದೂಕು ತರಬೇತಿಗೆ ಪೊಲೀಸ್ ಇಲಾಖೆಯಿಂದ ಅರ್ಜಿ ಆಹ್ವಾನ

ಧಾರವಾಡ: ಸಾರ್ವಜನಿಕರಲ್ಲಿ ಆತ್ಮರಕ್ಷಣೆ ಹಾಗೂ ಶಿಸ್ತು ಮೂಡಿಸುವ ಉದ್ದೇಶದಿಂದ ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯು ಜಿಲ್ಲೆಯ ನಾಗರಿಕರಿಗಾಗಿ ವಿಶೇಷ ‘ಬಂದೂಕು ತರಬೇತಿ’ ಶಿಬಿರವನ್ನು ಆಯೋಜಿಸಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು, ಆಸಕ್ತ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ನಗರದ ಡಿ.ಎ.ಆರ್ (D.A.R) ಘಟಕದ ಪೊಲೀಸ್ ಕವಾಯತು ಮೈದಾನದಲ್ಲಿ ಜನೆವರಿ 12 ರಿಂದ ಜನೆವರಿ 18 ರವರೆಗೆ ಒಟ್ಟು ಏಳು ದಿನಗಳ ಕಾಲ ಈ ತರಬೇತಿ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 6:30…

Read More

ಜನೆವರಿ 5 ರಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಂದ ‘ಅಕ್ಕ ಪಡೆ’ ಯೋಜನೆಗೆ ಚಾಲನೆ

ಧಾರವಾಡ: ಸಂಕಷ್ಟದಲ್ಲಿರುವ ಹಾಗೂ ಅಪಾಯದ ಅಂಚಿನಲ್ಲಿರುವ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ರಾಜ್ಯ ಸರ್ಕಾರವು ಮಹತ್ವಾಕಾಂಕ್ಷಿ ‘ಅಕ್ಕ ಪಡೆ’ ಯೋಜನೆಯನ್ನು ಜಾರಿಗೆ ತಂದಿದ್ದು, ಜನೆವರಿ 5 ರಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಈ ಯೋಜನೆಗೆ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ​ನಗರದ ಸೃಜನಾ ರಂಗಮಂದಿರದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿರುವ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಸಚಿವರು ಈ ಹೊಸ ರಕ್ಷಣಾ ಪಡೆಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಮಹಿಳಾ ಮತ್ತು…

Read More

​ಧಾರವಾಡ ಜಿಲ್ಲೆಯಾದ್ಯಂತ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನಕ್ಕೆ ಚಾಲನೆ

​ಧಾರವಾಡ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಹಾಗೂ ರಾಜಿ ಮಾಡಿಕೊಳ್ಳಲು ಸಾಧ್ಯವಿರುವ ಪ್ರಕರಣಗಳ ವಿಲೇವಾರಿಗಾಗಿ ಜನೆವರಿ 2ರಿಂದ ಸತತ 90 ದಿನಗಳ ಕಾಲ ‘ವಿಶೇಷ ಮಧ್ಯಸ್ಥಿಕೆ ಅಭಿಯಾನ’ವನ್ನು ಆಯೋಜಿಸಲಾಗಿದೆ. ​’ದೇಶಕ್ಕಾಗಿ 90 ದಿನಗಳು 2.0′ ಎಂಬ ಘೋಷವಾಕ್ಯದೊಂದಿಗೆ ಈ ಬೃಹತ್ ಅಭಿಯಾನ ನಡೆಯುತ್ತಿದ್ದು, ನ್ಯಾಯಾಲಯಗಳಲ್ಲಿ ದೀರ್ಘಕಾಲದಿಂದ ಬಾಕಿಯಿರುವ ಸಿವಿಲ್, ಕೌಟುಂಬಿಕ ಹಾಗೂ ರಾಜಿ ಸಂಧಾನಕ್ಕೆ ಅರ್ಹವಾದ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ…

Read More

​ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕ-ಶಿಕ್ಷಕರ ಸಹಕಾರ ಅಗತ್ಯ: ಮಾಬುಸಾಬ ಯರಗುಪ್ಪಿ

ನವಲಗುಂದ: ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಸರ್ವತೋಮುಖ ಬೆಳವಣಿಗೆಯು ಕೇವಲ ಶಿಕ್ಷಕರಿಂದ ಮಾತ್ರ ಸಾಧ್ಯವಿಲ್ಲ, ಅದರಲ್ಲಿ ಪಾಲಕ-ಪೋಷಕರು ಸಹ ಕೈಜೋಡಿಸುವುದು ಅತ್ಯಂತ ಅವಶ್ಯಕ ಎಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಹೇಳಿದರು. ​ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-3 ರಲ್ಲಿ ಆಯೋಜಿಸಲಾಗಿದ್ದ ‘ಪೋಷಕರು ಹಾಗೂ ಶಿಕ್ಷಕರ ಸಭೆ’ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ​ಜವಾಬ್ದಾರಿಯುತ ಪೋಷಕರಾಗಿ: “ಇಂದಿನ ಮಕ್ಕಳು ನಾಳೆಯ ಸುಪ್ರಜೆಗಳು. ಅವರ ಶೈಕ್ಷಣಿಕ ವಿಕಾಸದಲ್ಲಿ ಪೋಷಕರು ಸಮಾನ ಪಾಲುದಾರರಾಗಬೇಕು. ಮಕ್ಕಳು ಶಾಲೆಯಿಂದ ಮನೆಗೆ ಬಂದ…

Read More

ಇನಾಮವೀರಾಪುರ ಮರ್ಯಾದೆ ಹತ್ಯೆ: ನವಲಗುಂದದಲ್ಲಿ ದಲಿತ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ

ನವಲಗುಂದ: ಹುಬ್ಬಳ್ಳಿ ತಾಲೂಕಿನ ಇನಾಮವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿ ಮಹಿಳೆಯ ಬರ್ಬರ ಮರ್ಯಾದೆ ಹತ್ಯೆ ಪ್ರಕರಣವನ್ನು ಖಂಡಿಸಿ ಹಾಗೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ, ನವಲಗುಂದ ತಾಲೂಕು ದಲಿತ ಒಕ್ಕೂಟಗಳ ಸಮಿತಿ ವತಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ​ನಗರದ ಗಣಪತಿ ದೇವಸ್ಥಾನದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಜಾತಿ ವ್ಯವಸ್ಥೆ ಮತ್ತು ಮರ್ಯಾದೆ ಹತ್ಯೆಯಂತಹ ಅನಿಷ್ಟ ಪದ್ಧತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಸೀಲ್ದಾರ್ ಸುಧೀರ್ ಸಾವುಕಾರ ಅವರ ಮೂಲಕ…

Read More

ಪಶುಪತಿಹಾಳ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸುಧಾ ಡೊಳ್ಳಿನ ಅವಿರೋಧ ಆಯ್ಕೆ

ಕುಂದಗೋಳ: ತಾಲ್ಲೂಕಿನ ಪಶುಪತಿಹಾಳ ಗ್ರಾಮ ಪಂಚಾಯತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರದಂದು ನಡೆದ ಚುನಾವಣೆಯಲ್ಲಿ ಸುಧಾ ವಿ. ಡೊಳ್ಳಿನ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 9 ಸದಸ್ಯ ಬಲ ಹೊಂದಿರುವ ಈ ಪಂಚಾಯತಿಯ ಅಧ್ಯಕ್ಷ ಸ್ಥಾನಕ್ಕೆ ಸುಧಾ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ ಬೇರೆ ಯಾರೂ ಸ್ಪರ್ಧಿಸದ ಕಾರಣ, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಐ.ಎ.ಎಸ್ ಪ್ರೊಬೇಷನರಿ ಅಧಿಕಾರಿ ಹಾಗೂ ತಾ ಪಂ ಇಒ ಆದ ಕುಮಾರಿ ರೀತಿಕಾ ವರ್ಮಾ ಅಧಿಕೃತವಾಗಿ…

Read More

ಮರೇವಾಡ ಹಾಗೂ ದೇವಲಿಂಗಿಕೊಪ್ಪ ‘ಗ್ರಾಮ-ಒನ್’ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕ: ಅರ್ಜಿ ಆಹ್ವಾನ

​ಧಾರವಾಡ: ಜಿಲ್ಲೆಯ ಮರೇವಾಡ ಹಾಗೂ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ‘ಗ್ರಾಮ-ಒನ್’ ಕೇಂದ್ರಗಳಿಗೆ ಹೊಸದಾಗಿ ಫ್ರಾಂಚೈಸಿಗಳನ್ನು ನೇಮಕ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ​ಧಾರವಾಡ ತಾಲ್ಲೂಕಿನ ಮರೇವಾಡ ಹಾಗೂ ಕಲಘಟಗಿ ತಾಲ್ಲೂಕಿನ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮ-ಒನ್ ಕೇಂದ್ರಗಳ ಫ್ರಾಂಚೈಸಿಗಳು ರಾಜೀನಾಮೆ ನೀಡಿದ ಹಾಗೂ ತಾಂತ್ರಿಕ ಕಾರಣಗಳಿಂದ ಕೇಂದ್ರಗಳನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇ-ಆಡಳಿತ ಇಲಾಖೆಯ ಇ.ಡಿ.ಸಿ.ಎಸ್. ನಿರ್ದೇಶನಾಲಯದ ಮಾರ್ಗಸೂಚಿಯಂತೆ ಆನ್‌ಲೈನ್ ಮೂಲಕ ಅರ್ಜಿಗಳನ್ನು…

Read More

ಅಬಕಾರಿ ಸನ್ನದುಗಳ ಇ-ಹರಾಜು: ಬಿಡ್ಡುದಾರರಿಗೆ ಜನೆವರಿ 5 ರಂದು ತರಬೇತಿ ಕಾರ್ಯಾಗಾರ

​ಧಾರವಾಡ: ಅಬಕಾರಿ ಇಲಾಖೆಯಲ್ಲಿ ಸ್ಥಗಿತಗೊಂಡಿರುವ ಹಾಗೂ ಮಂಜೂರಾಗದೇ ಬಾಕಿ ಉಳಿದಿರುವ ಸನ್ನದುಗಳನ್ನು ಇ-ಹರಾಜು ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಈ ಕುರಿತು ಬಿಡ್ಡುದಾರರಿಗೆ ಜನೆವರಿ 5 ರಂದು ವಿಶೇಷ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ​ಭಾರತ ಸರ್ಕಾರದ ಸ್ವಾಮ್ಯದ ಎಮ್‍ಎಸ್‍ಟಿಸಿ ಲಿಮಿಟೆಡ್‍ನ ಇ-ಪೋರ್ಟಲ್ (https://www.mstcecommerce.com) ಮೂಲಕ ಈ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜು ಮತ್ತು ಅಂಗೀಕಾರ ಪತ್ರ (ಎಲ್‌ಓಎ) ನೀಡುವ ವರ್ಷವನ್ನೂ ಒಳಗೊಂಡಂತೆ ಒಟ್ಟು ಐದು ಅಬಕಾರಿ ವರ್ಷಗಳ ಅವಧಿಗೆ ಈ ಸನ್ನದುಗಳು ಅನ್ವಯಿಸಲಿವೆ. ರಾಜ್ಯದಾದ್ಯಂತ ಒಟ್ಟು 569…

Read More

ನವಲಗುಂದದಲ್ಲಿ ಇಂದಿನಿಂದ ಎರಡು ದಿನ ಹುರಕಡ್ಲಿ ಅಜ್ಜನವರ ರಥೋತ್ಸವ

ನವಲಗುಂದ: ಪಟ್ಟಣದಲ್ಲಿ ಪರಮಪೂಜ್ಯ ಶ್ರೀ ಹುರಕಡ್ಲಿ ಅಜ್ಜನವರ ರಥೋತ್ಸವ ಪೂಜೆ ಹಾಗೂ 36ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನು ಇಂದು ಮತ್ತು ನಾಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದೆ. ಇಂದು ಮಧ್ಯಾಹ್ನ ವೇಳೆಗೆ ಶ್ರೀ ಹುರಕಡ್ಲಿ ಅಜ್ಜನವರ ರಥೋತ್ಸವ ಪೂಜೆ ನೆರವೇರಲಿದ್ದು, ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಡಾ. ಕೊಟ್ಟೂರೇಶ್ವರ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ರಥೋತ್ಸವಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಸಂಜೆ 6 ಗಂಟೆಗೆ ಶ್ರೀ ಬೂದೇಶ್ವರ ಕೋಲಾಟ…

Read More

ನ್ಯಾಯವೇ ಸಮಾಜದ ಆಧಾರ; ಕರ್ತವ್ಯದ ಅರಿವು ಮೂಡಲಿ: ಈಶಪ್ಪ ಭೂತೆ

ಧಾರವಾಡ: “ಕಾನೂನು ಎನ್ನುವುದು ಕೇವಲ ನ್ಯಾಯ ಪಡೆಯುವ ಮಾರ್ಗವಲ್ಲ, ನ್ಯಾಯಾಲಯಗಳ ಮೂಲಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದೇ ನಿಜವಾದ ನ್ಯಾಯ,” ಎಂದು ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ ಅವರು ಅಭಿಪ್ರಾಯಪಟ್ಟರು. ನಗರದ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ‘ಕಾನೂನು ಮತ್ತು ನ್ಯಾಯ ಮಂಟಪ’ ಆಯೋಜಿಸಿದ್ದ ಪ್ರಸಕ್ತ ತ್ರೈವಾರ್ಷಿಕ ಅವಧಿಯ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯವೇ ಸಮಾಜದ ಭದ್ರಬುನಾದಿಯಾಗಿದ್ದು, ಕಾನೂನಿನ ವಿಸ್ತೃತ ಫಲಿತಾಂಶಗಳು ನಮಗೆ ಸದಾ ದಾರಿದೀಪವಾಗಿರುತ್ತವೆ ಎಂದರು. ಕಾರ್ಯಕ್ರಮದಲ್ಲಿ…

Read More