ರಾಷ್ಟ್ರಮಟ್ಟದ ಬಾಲಕರ ಶೂಟಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಗೆಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಧಾರವಾಡ, ಜ. 01:ಧಾರವಾಡದ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ 69ನೇ ರಾಷ್ಟ್ರಮಟ್ಟದ 14 ವರ್ಷದೊಳಗಿನ ಬಾಲಕರ ಶೂಟಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿ ಜನೆವರಿ 5, 2026 ರಿಂದ ಜನೆವರಿ 9, 2026 ರವರೆಗೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆಯಲಿದೆ. ಆಯ್ಕೆಯಾದ ವಿದ್ಯಾರ್ಥಿಗಳಾದ ನವೀನಕುಮಾರ ಚವಾಣ, ಪ್ರಸನ್ನ ಯಾದವ, ಮೊಹಮ್ಮದ್ ಹ್ಯಾರಿಸ್ ಮದರಖಂಡಿ ಹಾಗೂ ವಿವೇಕ ಬೋರಳಕರ ಅವರನ್ನು…

Read More

ಮಾವು ಬೆಳೆಗಾರರು ಕೈಗೊಳ್ಳಬೇಕಾಗಿರುವ ಸಸ್ಯ ಸಂರಕ್ಷಣಾ ಮತ್ತು ಪೂರಕ ಕ್ರಮಗಳು

ಧಾರವಾಡ, ಜ. 01: ಮಾವಿನಲ್ಲಿ ಹೂ ಬಿಡುವ ಪ್ರಕ್ರಿಯೆ ಡಿಸೆಂಬರ್‌ನಿಂದ ಪ್ರಾರಂಭವಾಗಿ ಫೆಬ್ರುವರಿ ಅಂತ್ಯದವರೆಗೂ ವಿವಿಧ ಪ್ರದೇಶಗಳಲ್ಲಿ ಕಂಡುಬರುತ್ತದೆ. ಕೆಲವೊಮ್ಮೆ ನವೆಂಬರ್ ಮಧ್ಯಭಾಗದಿಂದಲೂ ಹೂ ಬಿಡುವುದು ಕಂಡುಬರುತ್ತದೆ. ಹೂ ಬಿಟ್ಟ ನಂತರ ಉಪದ್ರವಿ ಕೀಟಗಳಾದ ಜಿಗಿಹುಳು, ಹೂತೆನೆ, ಕುಡಿ ಕೊರಕ, ಥ್ರಿಪ್ಸ್, ನುಸಿ, ಹಿಟ್ಟು ತಿಗಣೆ, ಒಟೆ ಕೊರಕ ಹಾಗೂ ಹೂತೆನೆ ಕಪ್ಪಾಗುವ ರೋಗ, ಬೂದಿ ರೋಗ, ಕಾಡಿಗೆ ರೋಗ, ಎಲೆಚಿಬ್ಬು ರೋಗಗಳು ಹೆಚ್ಚಿನ ಹಾನಿಯನ್ನುಂಟು ಮಾಡುತ್ತವೆ. ಅಗತ್ಯ ಪೂರಕ ಕ್ರಮಗಳು:ಸಿಂಪರಣಾ ದ್ರಾವಣಗಳನ್ನು ಮಾವಿನ ಮರದ ಕಾಂಡ…

Read More

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರಅಂತಿಮ ಮತದಾರರ ಪಟ್ಟಿ ಪ್ರಕಟಣೆ

ಧಾರವಾಡ, ಜ. 01: ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ನವೆಂಬರ್ 01, 2025 ಕ್ಕೆ ಅನ್ವಯವಾಗುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರಕಟಿಸಲು ನಿರ್ದೇಶನ ನೀಡಲಾಗಿತ್ತು. ಅದರಂತೆ ನವೆಂಬರ್ 25, 2025 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ನವೆಂಬರ್ 25, 2025 ರಿಂದ ಡಿಸೆಂಬರ್ 10, 2025 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳ ಪರಿಶೀಲನೆಯ ನಂತರ ಪಶ್ಚಿಮ ಪದವೀಧರರ ಮತಕ್ಷೇತ್ರದ…

Read More

ವಿದ್ಯಾರ್ಥಿಗಳ ನೈತಿಕ ಬದುಕಿಗೆ ಮೌಲ್ಯಗಳೇ ಚೌಕಟ್ಟು – ಡಾ. ಎಂ.ವೈ. ಸಾವಂತ

ಧಾರವಾಡ: ವಿದ್ಯಾರ್ಥಿಗಳ ನೈತಿಕ ಜೀವನಕ್ಕೆ ಮೌಲ್ಯಗಳೇ ದೃಢವಾದ ಚೌಕಟ್ಟು. ಮೌಲ್ಯಗಳು ವಿದ್ಯಾರ್ಥಿಗಳ ಅಂತರಂಗದ ಜೀವನದಲ್ಲಿ ಹುದುಗಿರುವ ಅಮೂಲ್ಯ ಸಂಪತ್ತಾಗಿವೆ ಎಂದು ಶಿಕ್ಷಣ ತಜ್ಞ ಡಾ. ಎಂ.ವೈ. ಸಾವಂತ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಶತಾಯುಷಿ ಲಿ.ಜಿ.ಜಿ. ದೊಡವಾಡ ಅವರ ತಂದೆ ಪೂಜ್ಯ ಶರಣ ಲಿಂ. ಗುರುಪಾದ ದುಂಡಪ್ಪ ದೊಡವಾಡ ದತ್ತಿ ಕಾರ್ಯಕ್ರಮದಲ್ಲಿ ಅವರು ‘ಮೌಲ್ಯಯುತ ಶಿಕ್ಷಣ – ಇಂದಿನ ಅಗತ್ಯತೆ’ ವಿಷಯದ ಕುರಿತು ಉಪನ್ಯಾಸ ನೀಡಿದರು. ಮೌಲ್ಯ ಶಿಕ್ಷಣವು ಕುಟುಂಬದಲ್ಲೇ, ಮಕ್ಕಳ ಬಾಲ್ಯಾವಸ್ಥೆಯಲ್ಲಿಯೇ…

Read More

ಧಾರವಾಡ: ಸಾಹಿತ್ಯ ಮನುಷ್ಯತ್ವದ ಘನತೆ ಎತ್ತಿ ಹಿಡಿಯಲಿ – ಪ್ರೊ. ರಾಘವೇಂದ್ರ ಪಾಟೀಲ

ಧಾರವಾಡ: ಸಾಹಿತ್ಯ ಎಂಬುದು ಕೇವಲ ಅಕ್ಷರಗಳ ಜೋಡಣೆಯಲ್ಲ, ಅದು ಮನುಷ್ಯತ್ವದ ಘನತೆಯನ್ನು ಎತ್ತಿ ಹಿಡಿಯುವ ಶಕ್ತಿಯಾಗಬೇಕು. ಕರುಣೆ ಮತ್ತು ಕ್ರೌರ್ಯಗಳ ನಡುವಿನ ಸಂಘರ್ಷದಲ್ಲಿ ಯಾವಾಗಲೂ ಕಾರುಣ್ಯವೇ ಜಯಗಳಿಸಬೇಕು ಎಂದು ಖ್ಯಾತ ಸಾಹಿತಿ ಪ್ರೊ. ರಾಘವೇಂದ್ರ ಪಾಟೀಲರು ಆಶಯ ವ್ಯಕ್ತಪಡಿಸಿದರು. ನಗರದ ಅನುಷ್ಕಾ ಪ್ರಕಾಶನ ಹಾಗೂ ಹಿರೇಮಲ್ಲೂರು ಈಶ್ವರನ್ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ನಾಲ್ಕು ಪ್ರಮುಖ ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಸಾಹಿತ್ಯವು ಒಂದು ಉನ್ನತ ಕಲೆಯಾಗಿದ್ದು, ಅದು…

Read More

ಶಿರೂರು: ಎಸ್‌ಬಿಐ ಬ್ಯಾಂಕ್ ಗೋಡೆ ಒಡೆದು ದರೋಡೆಗೆ ಯತ್ನ; ಸೈರನ್ ಸದ್ದಿಗೆ ಹೆದರಿ ಓಡಿ ಹೋದ ಖದೀಮರು

ನವಲಗುಂದ: ತಾಲ್ಲೂಕಿನ ಶಿರೂರು ಗ್ರಾಮದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯ ಗೋಡೆಯನ್ನು ಒಡೆದು ದರೋಡೆ ಮಾಡಲು ಯತ್ನಿಸಿದ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ಬ್ಯಾಂಕ್‌ನ ಭದ್ರತಾ ಸೈರನ್ ಸಕಾಲಕ್ಕೆ ಮೊಳಗಿದ್ದರಿಂದ ಸಂಭವಿಸಬಹುದಾಗಿದ್ದ ಭಾರಿ ದರೋಡೆ ತಪ್ಪಿದಂತಾಗಿದೆ. ಬುಧವಾರ ತಡರಾತ್ರಿ ಆಗಮಿಸಿದ ಖದೀಮರು ಬ್ಯಾಂಕ್‌ನ ಹಿಂಭಾಗದ ಗೋಡೆಯನ್ನು ಒಡೆಯುವ ಮೂಲಕ ಒಳನುಗ್ಗಲು ಪ್ರಯತ್ನಿಸಿದ್ದಾರೆ. ಅರ್ಧದಷ್ಟು ಗೋಡೆ ಒಡೆದ ಸಂದರ್ಭದಲ್ಲೇ ಬ್ಯಾಂಕ್‌ನಲ್ಲಿದ್ದ ಭದ್ರತಾ ಸೈರನ್ ಸದ್ದು ಮಾಡಲಾರಂಭಿಸಿದೆ. ಸೈರನ್ ಶಬ್ದದಿಂದ ಗಾಬರಿಗೊಂಡ ದರೋಡೆಕೋರರು ಕೃತ್ಯವನ್ನು ಅರ್ಧಕ್ಕೆ ಕೈಬಿಟ್ಟು…

Read More

ನವಲಗುಂದ ತಾಲ್ಲೂಕಿನ ಕೃಷಿ ಭೂಮಿಯಲ್ಲಿ ಕೇಂದ್ರ ತಂಡದಿಂದ ವಿಸ್ತೃತ ಮಣ್ಣು ಸಮೀಕ್ಷೆ

ನವಲಗುಂದ: ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಕೃಷಿ ಭೂಮಿಗಳಲ್ಲಿ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಬೆಂಗಳೂರು ಕೇಂದ್ರದ ‘ಸಾಯಿಲ್ ಆಂಡ್ ಲ್ಯಾಂಡ್ ಯೂಸ್ ಸರ್ವೆ ಆಫ್ ಇಂಡಿಯಾ’ (SLUSI) ತಂಡವು ವಿಸ್ತೃತ ಮಣ್ಣು ಸಮೀಕ್ಷೆಯನ್ನು ಕೈಗೊಂಡಿದೆ. ​ಡಾ. ಮಲ್ಲಿಕಾರ್ಜುನ ರೂಡಗಿ, ಕೆ. ಮುರುಗಯ್ಯ ಮತ್ತು ನವೀನ್ ಕುಮಾರ್ ಅವರನ್ನೊಳಗೊಂಡ ತಂಡವು ಪ್ರಸ್ತುತ ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ತಾಲ್ಲೂಕುಗಳು ಹಾಗೂ ಗದಗ ಜಿಲ್ಲೆಯ ನರಗುಂದ, ರೋಣ ಮತ್ತು ಗದಗ…

Read More

ಗಾಮನಗಟ್ಟಿ ಕೈಗಾರಿಕಾ ಪ್ರದೇಶ: ಜನೆವರಿ 21 ರಂದು ಲಾಟರಿ ಮೂಲಕ ವಸತಿ ನಿವೇಶನ ಹಂಚಿಕೆ

ಧಾರವಾಡ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (KIADB) ಧಾರವಾಡ ವಲಯದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ ವಸತಿ ನಿವೇಶನಗಳ ಹಂಚಿಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈಗಾಗಲೇ ನಿವೇಶನಗಳಿಗಾಗಿ ಹಣ ಸಂದಾಯ ಮಾಡಿರುವ ಅರ್ಜಿದಾರರಿಗೆ ಲಾಟರಿ (ಚೀಟಿ ಎತ್ತುವಿಕೆ) ಮೂಲಕ ನಿವೇಶನ ಸಂಖ್ಯೆಯನ್ನು ಹಂಚಿಕೆ ಮಾಡಲು ದಿನಾಂಕ ನಿಗದಿಪಡಿಸಲಾಗಿದೆ. ​ಬರುವ ಜನೆವರಿ 21, 2026 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಅಶೋಕ ನಗರದ ಪೊಲೀಸ್ ಠಾಣೆ ಸಮೀಪವಿರುವ ಡಾ. ಬಿ.ಎಸ್. ಕರ್ಕಿ ಕನ್ನಡ ಸಭಾ ಭವನದಲ್ಲಿ ಹಂಚಿಕೆ…

Read More

ಮರ್ಯಾದಾ ಹತ್ಯೆ ಖಂಡಿಸಿ ಕುಂದಗೋಳದಲ್ಲಿ ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆಆರೋಪಿಗಳಿಗೆ ಕಾನೂನು ಶಿಕ್ಷೆಗೆ ಆಗ್ರಹ

ಕುಂದಗೋಳ: ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರ ಗ್ರಾಮದ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಅನ್ಯ ಜಾತಿಯ ಯುವತಿ ಮಾನ್ಯಾಳನ್ನು ಆಕೆಯ ಕುಟುಂಬದವರೇ ಮರ್ಯಾದಾ ಹತ್ಯೆ ಮಾಡಿ, ಆಕೆಯ ಪತಿಯ ಕುಟುಂಬದ ಮೇಲೆಯೂ ಪೈಶಾಚಿಕವಾಗಿ ಹಲ್ಲೆ ನಡೆಸಿರುವುದನ್ನು ಖಂಡಿಸಿ, ಚಲವಾದಿ ಸಮಾಜ ಹಿತ ರಕ್ಷಣಾ ಸಮಿತಿ ಹಾಗೂ ವಿವಿಧ ದಲಿತ ಪರ ಒಕ್ಕೂಟಗಳ ನೇತೃತ್ವದಲ್ಲಿ ಕುಂದಗೋಳದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಿರಸ್ತೆದಾರ ಮಹೇಶ ಶ್ಯಾನಬಾಳ ಅವರಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ…

Read More

ಇನಾಂ ವೀರಾಪೂರ ಪ್ರಕರಣ ಕುರಿತ ಸಭೆಗ್ರಾಮದಲ್ಲಿ ಶಾಂತಿ ಕಾಪಾಡಿ; ಇಂತಹ ದುರ್ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ– ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸೂಚನೆ

ಧಾರವಾಡ, ಡಿ.30: ಇನಾಂ ವೀರಾಪೂರ ಗ್ರಾಮದಲ್ಲಿ ಶಾಂತಿ ಹಾಗೂ ಸೌಹಾರ್ದತೆ ನೆಲೆಸುವಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ ಮತ್ತು ಸಮರ್ಪಕ ರಕ್ಷಣೆ ಒದಗಿಸಬೇಕು ಎಂದು ಬಾಗಲಕೋಟ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಿದರು. ಮಂಗಳವಾರದಂದು (ಡಿ.30) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿದ ಸಚಿವರು, ಇನಾಂ ವೀರಾಪೂರ ಗ್ರಾಮದಲ್ಲಿ ನಡೆದ ದೌರ್ಜನ್ಯ ಹಾಗೂ ಕೊಲೆ ಪ್ರಕರಣದ…

Read More