ಮಹದಾಯಿ ಯೋಜನೆ ಜಾರಿಯಲ್ಲಿ ಯಾವುದೇ ನಿರ್ಲಕ್ಷ್ಯವಿಲ್ಲ; ಸಿಬಿಲ್ ಸ್ಕೋರ್ ನೋಡಿ ಸಾಲ ನಿರಾಕರಿಸಿದರೆ ಶಿಸ್ತುಕ್ರಮ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ನವಲಗುಂದ: ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಕಾಮಗಾರಿ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು. ಪಟ್ಟಣದ ಮಾಡೆಲ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಸದರ ಕ್ರೀಡಾ ಮಹೋತ್ಸವಕ್ಕೆ ಆಗಮಿಸಿದ್ದ ವೇಳೆ ರೈತಭವನಕ್ಕೆ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು. ಯೋಜನೆಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಪರಿಸರ ಇಲಾಖೆಯ ಅನುಮತಿ ಮತ್ತು ಗೆಜೆಟ್ ನೋಟಿಫಿಕೇಶನ್ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಆದರೆ, ಅರಣ್ಯ ಇಲಾಖೆಗೆ ಸಂಬಂಧಿಸಿದ ಗಿಡಗಳನ್ನು ತೆರವುಗೊಳಿಸಿದಾಗ ಪರ್ಯಾಯವಾಗಿ…

