ಜನವರಿ 5 ರಂದು ಧಾರವಾಡದಲ್ಲಿ ‘ಪಂಚ ಗ್ಯಾರಂಟಿ ಉತ್ಸವ’: ಅದ್ಧೂರಿ ಆಚರಣೆಗೆ ಸಿದ್ಧತೆ
ಧಾರವಾಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಯಶಸ್ಸಿನ ಸಂಭ್ರಮಕ್ಕಾಗಿ ಜಿಲ್ಲೆಯಲ್ಲಿ ಬರುವ ಜನವರಿ 5, 2026 ರಂದು ಅತ್ಯಂತ ಅದ್ಧೂರಿಯಾಗಿ ‘ಪಂಚ ಗ್ಯಾರಂಟಿ ಉತ್ಸವ’ವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಸೋಮವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಬೆಳಗಾವಿ ವಿಭಾಗೀಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ್ ಅವರು ಈ ವಿಷಯ ತಿಳಿಸಿದರು. ಈ ಉತ್ಸವವು ಸರ್ಕಾರದ ಸೌಲಭ್ಯಗಳು ಜನಸಾಮಾನ್ಯರಿಗೆ ತಲುಪಿರುವುದರ ಪ್ರತಿಬಿಂಬವಾಗಬೇಕು ಎಂದು…

