ನೆಚ್ಚಿನ ಶಿಕ್ಷಕಿ ಜರಿನಾ ಎಮ್. ಸೌದಾಗರ ಅಗಲಿಕೆ: ಅಣ್ಣಿಗೇರಿಯಲ್ಲಿ ವಿದ್ಯಾರ್ಥಿಗಳ ಕಣ್ಣೀರು, ಶಾಲೆಯಲ್ಲಿ ಶೋಕಸಾಗರ

ಅಣ್ಣಿಗೇರಿ: ಗುರು-ಶಿಷ್ಯರ ಪವಿತ್ರ ಸಂಬಂಧಕ್ಕೆ ಸಾಕ್ಷಿಯಂತಿದ್ದ ಶಿಕ್ಷಕಿಯೊಬ್ಬರ ಅಕಾಲಿಕ ನಿಧನವು ಇಡೀ ಶಾಲೆಯನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಇಲ್ಲಿನ ಅಮೃತ ಕಲಾ ಕುಂಜ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 24 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿದ್ದ ಬನಶಂಕರಿ ನಗರದ ನಿವಾಸಿ ಜರಿನಾ ಎಮ್. ಸೌದಾಗರ (46) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ದಶಕಗಳ ಕಾಲ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹದ ಜೊತೆಗೆ ಪ್ರೀತಿ-ಮಮತೆಯನ್ನು ಹಂಚಿದ್ದ ಶಿಕ್ಷಕಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಶಾಲಾ ಆವರಣದಲ್ಲಿ ಮೌನ ಆವರಿಸಿತು. ​ತಮ್ಮ ನೆಚ್ಚಿನ ಶಿಕ್ಷಕಿ…

Read More

ಪಿಎಚ್.ಡಿ ಸಂಶೋಧಕರಿಗೆ ಮಾಸಿಕ ವ್ಯಾಸಂಗ ವೇತನ: ಅರ್ಜಿ ಆಹ್ವಾನ

​ಧಾರವಾಡ: 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಆರಂಭಿಸಿರುವ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ ಹಾಗೂ ಫೆಲೋಶಿಪ್‌ಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ​ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅದರ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಸಂಶೋಧನೆ ಆರಂಭಿಸಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಅರ್ಜಿ…

Read More

ಸಂಶಿ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

​ಸಂಶಿ: ಇಲ್ಲಿನ ಸಂಶಿ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕೇಂದ್ರ ಕಚೇರಿಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ 2026ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎ. ಬಿ. ಉಪ್ಪಿನ ಕ್ಯಾಲೆಂಡರ್ ಲೋಕಾರ್ಪಣೆ ಮಾಡಿ, ಹೊಸ ವರ್ಷವು ಸಂಸ್ಥೆಯ ಎಲ್ಲಾ ಗ್ರಾಹಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಸುಖ-ಸಮೃದ್ಧಿ ತರಲಿ ಎಂದು ಆಶಿಸಿದರು. ​ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಎಂ. ಎಚ್. ನಾಯ್ಕರ ಉಪಸ್ಥಿತರಿದ್ದು, ಸಂಸ್ಥೆಯ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮಂಡಳಿಯ…

Read More

ಮರ್ಯಾದಾ ಹತ್ಯೆ ಪ್ರಕರಣ: ಕರ್ತವ್ಯ ಲೋಪ ಹಿನ್ನೆಲೆ ಬೆಳಗಲಿ ಗ್ರಾಮ ಪಂಚಾಯಿತಿ PDO ಅಮಾನತು

​ಹುಬ್ಬಳ್ಳಿ: ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಷ್ಟಾಚಾರ ಪಾಲನೆ ಹಾಗೂ ಕರ್ತವ್ಯದಲ್ಲಿ ಬೇಜವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಬೆಳಗಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜ ಗಿರಿಯಪ್ಪನವರ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಈ ಅಮಾನತು ಆದೇಶ ಹೊರಡಿಸಿದ್ದಾರೆ. ಪ್ರಕರಣದ ಗಂಭೀರತೆಯ ನಡುವೆಯೂ ಅಧಿಕಾರಿಗಳು ನಿಯಮಾನುಸಾರ ನಡೆದುಕೊಳ್ಳದ ಕಾರಣ ಈ ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ​ಅಮಾನತಿಗೆ ಕಾರಣಗಳೇನು?: ಮರ್ಯಾದೆಗೇಡು…

Read More

ಅಣ್ಣಿಗೇರಿ ದಾಸೋಹ ಮಠದ 62ನೇ ಜಾತ್ರಾ ಮಹೋತ್ಸವ: ಅಡ್ಡಪಲ್ಲಕ್ಕಿ ಉತ್ಸವದ ವೈಭವ

ಅಣ್ಣಿಗೇರಿ ದಾಸೋಹ ಮಠದ 62ನೇ ಜಾತ್ರಾ ಮಹೋತ್ಸವ: ಅಡ್ಡಪಲ್ಲಕ್ಕಿ ಉತ್ಸವದ ವೈಭವ ಅಣ್ಣಿಗೇರಿ: ಪಟ್ಟಣದ ಐತಿಹಾಸಿಕ ದಾಸೋಹ ಮಠದ 62ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಅಡ್ಡಪಲ್ಲಕ್ಕಿ ಉತ್ಸವವು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಜರುಗಿತು. ಭಕ್ತಸಾಗರದ ನಡುವೆ ನಡೆದ ಈ ಭವ್ಯ ಮೆರವಣಿಗೆಯಲ್ಲಿ ದಾಸೋಹ ಮಠದ ಶಿವಕುಮಾರ ಮಹಾಸ್ವಾಮಿಗಳು ಪಲ್ಲಕ್ಕಿಯಲ್ಲಿ ಆಸೀನರಾಗಿ ಭಕ್ತರಿಗೆ ಆಶೀರ್ವಾದ ನೀಡಿದರು. ಶ್ರೀ ಮಠದಿಂದ ಆರಂಭಗೊಂಡ ಮೆರವಣಿಗೆಯು ಪಟ್ಟಣದ ಮಾರುಕಟ್ಟೆ ಹಾಗೂ ಅಗಸಿ ಓಣಿಯ ಮಾರ್ಗವಾಗಿ ಸಾಗಿತು. ಈ ವೇಳೆ…

Read More

ಇನಾಂವೀರಾಪುರ ದೌರ್ಜನ್ಯ ಪ್ರಕರಣ: ವಿವೇಕಾನಂದ ಆಸ್ಪತ್ರೆ ಹಾಗೂ ಗ್ರಾಮಕ್ಕೆ ಜಾಗೃತ ಮತ್ತು ಉಸ್ತುವಾರಿ ಸಮಿತಿ ತಂಡ ಭೇಟಿ

ಹುಬ್ಬಳ್ಳಿ: ತಾಲ್ಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಕುಟುಂಬದ ಮೇಲಿನ ಭೀಕರ ದೌರ್ಜನ್ಯದ ಹಿನ್ನೆಲೆಯಲ್ಲಿ, ಜಿಲ್ಲಾ ಹಾಗೂ ಉಪವಿಭಾಗ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರ ತಂಡವು ಸಂತ್ರಸ್ತರಿಗೆ ಸಾಂತ್ವನ ನೀಡಲು ಬುದುವಾರದಂದು ಭೇಟಿ ನೀಡಿತು. ​ಸಮಿತಿಯ ಸದಸ್ಯರು ಮೊದಲು ಹುಬ್ಬಳ್ಳಿ ನಗರದ ವಿವೇಕಾನಂದ ಆಸ್ಪತ್ರೆಗೆ ಭೇಟಿ ನೀಡಿ, ದಾಳಿಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಕುಟುಂಬದ ಸದಸ್ಯರ ಆರೋಗ್ಯ ವಿಚಾರಿಸಿದರು. ಘಟನೆಯ ಕುರಿತು ಗಾಯಾಳುಗಳಿಂದ ಮಾಹಿತಿ ಪಡೆದ ತಂಡವು, ಅವರಿಗೆ ಧೈರ್ಯ ತುಂಬುವ ಕೆಲಸ…

Read More

ಹೆಸರು ಬದಲಾವಣೆ ಹಾಗೂ ಬಡವರ ಯೋಜನೆಗಳ ಕಡಿತವೇ ಬಿಜೆಪಿಯ ಅಜೆಂಡಾ: ಬಸವರಾಜ ಮಾದರ ಆಕ್ರೋಶ

ಧಾರವಾಡ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಬಡವರ ಪರ ಯೋಜನೆಗಳ ಹೆಸರು ಬದಲಾಯಿಸುವುದು ಮತ್ತು ಅವುಗಳಿಗೆ ನೀಡುವ ಅನುದಾನ ಕಡಿತಗೊಳಿಸಿ ಬಡವರ ಬದುಕಿಗೆ ಕಂಟಕವಾಗುವುದೇ ಕೇಂದ್ರ ಬಿಜೆಪಿ ಸರ್ಕಾರದ ಮುಖ್ಯ ಅಜೆಂಡಾ ಎಂದು ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರ ಬಸವರಾಜ ಮಾದರ ಅವರು ತೀವ್ರವಾಗಿ ಟೀಕಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರ ವಿಕೇಂದ್ರೀಕರಣ ಮತ್ತು ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸಲು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ…

Read More

ಮನುಷ್ಯತ್ವದ ಕಗ್ಗೊಲೆಗೆ ಮೌನವೇಕೆ? ಮಾನ್ಯಾಳ ಸಾವಿನ ಸುತ್ತಲ ಜಾತಿ ರಾಜಕೀಯ ಮತ್ತು ಸಂಘಟನೆಗಳ ಇಬ್ಬಂದಿತನ!

​ಹುಬ್ಬಳ್ಳಿ: ಇನಾಂವೀರಾಪುರದಲ್ಲಿ ಹರಿದ ಆ ರಕ್ತ ಇಡೀ ನಾಗರಿಕ ಸಮಾಜಕ್ಕೆ ಹಚ್ಚಿದ ಮಸಿ. ಅಂತರ್ಜಾತಿ ವಿವಾಹವೆಂಬ ಒಂದೇ ಕಾರಣಕ್ಕೆ ಇಡೀ ಕುಟುಂಬವನ್ನೇ ಟ್ರ್ಯಾಕ್ಟರ್‌ನಿಂದ ಗುದ್ದಿಸಿ, ಮನೆಗೆ ನುಗ್ಗಿ ಕೊಡಲಿ-ರಾಡ್‌ಗಳಿಂದ ಮಹಿಳೆಯರ ಮೇಲೆ ಅಟ್ಟಹಾಸ ಮೆರೆದ ಈ ಘಟನೆ ಪ್ರಜಾಪ್ರಭುತ್ವದ ಅತಿದೊಡ್ಡ ಸೋಲು. ಆದರೆ, ಈ ಭೀಕರ ಕೃತ್ಯ ನಡೆದಾಗ ಸಮಾಜದಲ್ಲಿ ವ್ಯಕ್ತವಾಗುತ್ತಿರುವ “ಆಯ್ದ ಮೌನ” ಹಾಗೂ ಸಂಘಟನೆಗಳ ನಿಲುವುಗಳು ಈಗ ಗಂಭೀರ ಚರ್ಚೆಗೆ ಗ್ರಾಸವಾಗಿವೆ. ​ನಿಸರ್ಗದ ನಿಯಮ ಮರೆತ “ಬುದ್ಧಿಜೀವಿ” ಮನುಷ್ಯ ​ಈ ಜಗತ್ತಿನಲ್ಲಿ ಜಾತಿ ಎಂಬುದು…

Read More

ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಕರಡು ಇ-ಖಾತಾ ವಿತರಣೆಗೆ ಶಾಸಕ ಎನ್ ಎಚ್ ಕೋನರಡ್ಡಿ ಚಾಲನೆ

ನವಲಗುಂದ: ಪುರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಕರಡು ಇ-ಖಾತಾ ವಿತರಣಾ ಪ್ರಕ್ರಿಯೆಗೆ ಮಂಗಳವಾರ ಮಾನ್ಯ ಶಾಸಕರ ನೇತೃತ್ವದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ನಗರದ ಪುರಸಭೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾನ್ಯ ಶಾಸಕರು, ಇ-ಖಾತಾ ವ್ಯವಸ್ಥೆಯಿಂದ ಆಸ್ತಿ ದಾಖಲೆಗಳ ಪಾರದರ್ಶಕತೆ ಹೆಚ್ಚಳವಾಗಲಿದ್ದು, ನಾಗರಿಕರಿಗೆ ಆಸ್ತಿ ಸಂಬಂಧಿತ ಸೇವೆಗಳು ಸುಲಭವಾಗಿ ಹಾಗೂ ವೇಗವಾಗಿ ಲಭ್ಯವಾಗಲಿವೆ ಎಂದು ತಿಳಿಸಿದರು. ಡಿಜಿಟಲ್ ವ್ಯವಸ್ಥೆ ಅಳವಡಿಕೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುವುದರೊಂದಿಗೆ ಆಡಳಿತ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂದರು. ಈ ಸಂದರ್ಭದಲ್ಲಿ ಪುರಸಭೆ ಅಧಿಕಾರಿ…

Read More

ರೋಗ ನಿಯಂತ್ರಣ ಮತ್ತು ಸದೃಢ ಆರೋಗ್ಯಕ್ಕಾಗಿ ಸಿರಿಧಾನ್ಯಗಳ ಸೇವನೆ ಅಗತ್ಯ: ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ

ಧಾರವಾಡ: ಸಿರಿಧಾನ್ಯಗಳು ಪೌಷ್ಟಿಕಾಂಶಗಳ ಗಣಿಯಾಗಿದ್ದು, ಹೃದಯ ಆರೋಗ್ಯ ಕಾಪಾಡುವಲ್ಲಿ, ಮಧುಮೇಹ ನಿಯಂತ್ರಣ ಹಾಗೂ ದೇಹದ ತೂಕವನ್ನು ಸಮತೋಲನದಲ್ಲಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಸಾರ್ವಜನಿಕರು ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಿರಿಧಾನ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ಹೇಳಿದರು. ಮಂಗಳವಾರ ಬೆಳಿಗ್ಗೆ ಕೃಷಿ ಇಲಾಖೆಯಿಂದ ನಗರದ ಡಾ. ಮಲ್ಲಿಕಾರ್ಜುನ ಮನಸೂರ ಕಲಾಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ‘ಸಿರಿಧಾನ್ಯಗಳ ಜಾಗೃತಿ ಜಾಥಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು….

Read More