ನವಲಗುಂದದಲ್ಲಿ ಜ. 8 ರಿಂದ ಧಾರವಾಡ ಸಂಸದರ ಕ್ರೀಡಾ ಮಹೋತ್ಸವ: ಹೊನಲು ಬೆಳಕಿನ ಪಂದ್ಯಾವಳಿಗೆ ಕ್ರೀಡಾಂಗಣ ಸಜ್ಜು

ನವಲಗುಂದ: ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ‘ಧಾರವಾಡ ಸಂಸದ ಟ್ರೋಫಿ 2025-26’ ಕ್ರೀಡಾ ಮಹೋತ್ಸವಕ್ಕೆ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಮೈದಾನ ಸಜ್ಜಾಗಿದೆ. ಜನವರಿ 8 ಮತ್ತು 9 ರಂದು ಎರಡು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾ ಹಬ್ಬಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಲಿದ್ದಾರೆ. ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆ ಹಾಗೂ…

Read More

ಮಾಜಿ ಸೈನಿಕರ ಮಕ್ಕಳಿಗೆ ಕ್ರೀಡಾ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

​ಧಾರವಾಡ: ಕೇಂದ್ರೀಯ ಸೈನಿಕ ಮಂಡಳಿಯ ವತಿಯಿಂದ ಅಂತರರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಸೇವೆಯಲ್ಲಿರುವ ಸೈನಿಕರ ಮತ್ತು ಮಾಜಿ ಸೈನಿಕರ ಮಕ್ಕಳು ಹಾಗೂ ಅವಲಂಬಿತರಿಗೆ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ​ಈ ವಿದ್ಯಾರ್ಥಿವೇತನ ವಿತರಣಾ ಪ್ರಕ್ರಿಯೆಯು ಪ್ರತಿ ವರ್ಷ ಏಪ್ರಿಲ್ ತಿಂಗಳಿನಿಂದ ಆರಂಭವಾಗಲಿದ್ದು, ಅರ್ಹ ಕ್ರೀಡಾಪಟುಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಂತರರಾಷ್ಟ್ರೀಯ ಅಥವಾ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿರುವ ಸಾಧಕ ವಿದ್ಯಾರ್ಥಿಗಳು ಮತ್ತು ಅವಲಂಬಿತರು ಸಂಬಂಧಪಟ್ಟ ಕ್ರೀಡಾಕೂಟದ ಪ್ರಮಾಣಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು…

Read More

ಧಾರವಾಡ: ಅಪಾಯಕಾರಿ ಮರಗಳ ತೆರವಿಗೆ ಜ. 8 ರಂದು ಬಹಿರಂಗ ಹರಾಜು

ಧಾರವಾಡ: ನಗರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಚೇರಿಗಳ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯು ಜನೆವರಿ 08 ರಂದು ಬಹಿರಂಗ ಹರಾಜು ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ​ನಗರದ ಸಾರ್ವಜನಿಕ ಸ್ಥಳಗಳಲ್ಲಿ ಸಂಚಾರಕ್ಕೆ ಹಾಗೂ ಕಟ್ಟಡಗಳಿಗೆ ಮುಳುವಾಗುವಂತಿರುವ ಒಟ್ಟು 32 ಮರಗಳು ಮತ್ತು 39 ಮರದ ಟೊಂಗೆಗಳನ್ನು ಕಡಿಯಲು ಈ ಹರಾಜು ನಡೆಸಲಾಗುತ್ತಿದೆ. ಆಸಕ್ತರು ಜನೆವರಿ 08, 2026 ರಂದು ಮಧ್ಯಾಹ್ನ 3 ಗಂಟೆಗೆ ಧಾರವಾಡದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ…

Read More

​ಗೋಡಂಬಿ ಬೆಳೆಯ ವೈಜ್ಞಾನಿಕ ತರಬೇತಿ: ಆಸಕ್ತ ರೈತರಿಂದ ಅರ್ಜಿ ಆಹ್ವಾನ

​ಧಾರವಾಡ: ಇಲ್ಲಿನ ಕುಂಬಾಪುರ ಫಾರ್ಮ್‌ನಲ್ಲಿರುವ ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ರೈತರಿಗಾಗಿ ವೈಜ್ಞಾನಿಕ ಪದ್ಧತಿಯಲ್ಲಿ ಗೋಡಂಬಿ ಬೆಳೆಯುವ ಕುರಿತು ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ​ಮುಂಬರುವ ಜನವರಿ 19, 2026 ರಂದು ನಡೆಯಲಿರುವ ಈ ತರಬೇತಿ ಶಿಬಿರದಲ್ಲಿ ಗೋಡಂಬಿ ಬೆಳೆಗೆ ಸಂಬಂಧಿಸಿದ ಸುಧಾರಿತ ತಂತ್ರಜ್ಞಾನಗಳು, ಹೆಚ್ಚು ಇಳುವರಿ ನೀಡುವ ತಳಿಗಳ ಆಯ್ಕೆ ಹಾಗೂ ತೋಟದ ಸಮಗ್ರ ನಿರ್ವಹಣೆಯ ಕುರಿತು ತಜ್ಞರು ಮಾಹಿತಿ ನೀಡಲಿದ್ದಾರೆ. ಇದರೊಂದಿಗೆ ಪೋಷಕಾಂಶಗಳ ನಿರ್ವಹಣೆ, ಕೀಟ ಮತ್ತು…

Read More

ಕರ್ನಾಟಕ ಜಾನಪದ ಅಕಾಡೆಮಿ ಫೆಲೋಶಿಪ್: ಅಧ್ಯಯನ ಲೇಖನಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಜಾನಪದ ಅಕಾಡೆಮಿಯು ಜಾನಪದ ಕ್ಷೇತ್ರದ ವಿವಿಧ ವಿಷಯಗಳ ಕುರಿತು ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಲು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಕಾಡೆಮಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ನಿಗದಿಪಡಿಸಿರುವ ವಿವಿಧ ಶೀರ್ಷಿಕೆಗಳನ್ನು ಆಧರಿಸಿ ಅಧ್ಯಯನ ನಡೆಸಲು ಈ ಅವಕಾಶ ಕಲ್ಪಿಸಲಾಗಿದೆ. ​ಅಭ್ಯರ್ಥಿಗಳು ಅಕಾಡೆಮಿ ಸೂಚಿಸಿರುವ ಶೀರ್ಷಿಕೆಗಳಲ್ಲಿ ತಮಗೆ ಆಸಕ್ತಿಯಿರುವ ಒಂದು ವಿಷಯವನ್ನು ಆಯ್ಕೆ ಮಾಡಿಕೊಂಡು, ಅದರ ಬಗ್ಗೆ ಐದು ಪುಟಗಳ ಸಾರಲೇಖ (Synopsis) ಸಿದ್ಧಪಡಿಸಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ…

Read More

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಇನಾಂವೀರಾಪುರ ಗ್ರಾಮ ಭೇಟಿ; ವಾಸ್ತವಿಕ ಪರಿಸ್ಥಿತಿ ಅವಲೋಕನ

ಧಾರವಾಡ ಜ.06: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್ ಭಟ್ ಅವರು ಇಂದು (ಜ.06) ಬೆಳಿಗ್ಗೆ ಇನಾಂವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಕುಟುಂಬದ ಮೇಲೆ ಆಗಿರುವ ದೌರ್ಜನ್ಯ ಪ್ರಕರಣದ ಹಿನ್ನಲೆಯಲ್ಲಿ ವಾಸ್ತವಿಕ ಪರಿಸ್ಥಿತಿಯನ್ನು ಅವಲೋಕಿಸಿದರು. ದಲಿತ ಕುಟುಂಬಗಳು ವಾಸಿಸುವ ಓಣಿ ಹಾಗೂ ದೌರ್ಜನ್ಯಕ್ಕೆ ಒಳಗಾದ ವಿವೇಕಾನಂದ ಅವರ ಮನೆ ಹಾಗೂ ದೌರ್ಜನ್ಯ ಮತ್ತು ಕೊಲೆ ಕೃತ್ಯ ನಡೆದ ಸ್ಥಳ ಪರಿಶೀಲಿಸಿ, ಸ್ಥಳೀಯ ನಿವಾಸಿಗಳಿಂದ, ಪೆÇಲೀಸ್ ಅಧಿಕಾರಿಗಳಿಂದ ಹಾಗೂ ಇತರರಿಂದ ವಿವರವಾದ ಮಾಹಿತಿಯನ್ನು…

Read More

ಗುಡಗೇರಿ: ಶ್ರೀ ಶಾಂತಿನಾಥ ತೀರ್ಥಂಕರ ನೂತನ ಬಸದಿಯಲ್ಲಿ ಭಕ್ತಿಪೂರ್ವಕ ಹಾಲಗಂಬ ಪ್ರತಿಷ್ಠಾಪನೆ

ಕುಂದಗೋಳ: ತಾಲೂಕಿನ ಗುಡಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ 1008 ಭಗವಾನ್ ಶಾಂತಿನಾಥ ತೀರ್ಥಂಕರ ಬಸದಿಯ ಪಂಚಕಲ್ಯಾಣ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಇದರ ಅಂಗವಾಗಿ ಸೋಮವಾರ ನೂತನ ಬಸದಿಯ ಆವರಣದಲ್ಲಿ ಶಾಸ್ತ್ರೋಕ್ತವಾಗಿ ಹಾಲಗಂಬ ನೆಡುವ ಧಾರ್ಮಿಕ ಕಾರ್ಯಕ್ರಮ ಸಕಲ ವಿಧಿವಿಧಾನಗಳೊಂದಿಗೆ ಜರುಗಿತು. ಮುಂಬರುವ ಫೆಬ್ರವರಿ 1 ರಿಂದ 6 ರವರೆಗೆ ಅದ್ಧೂರಿಯಾಗಿ ನಡೆಯಲಿರುವ ಪಂಚಕಲ್ಯಾಣ ಮಹೋತ್ಸವದ ಪೂರ್ವಭಾವಿ ವಿಧಿಯಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಂಜಾನೆ ಶ್ರೀ 1008 ಭಗವಾನ್ ಮಹಾವೀರ ತೀರ್ಥಂಕರರ ಕೋಟೆ ಬಸದಿಯಲ್ಲಿ ಭಗವಂತನಿಗೆ ಪಂಚಾಮೃತ…

Read More

ಧಾರವಾಡ: ನಾಳೆ ಹಿರಿಯ ಸಂಗೀತಗಾರ ಡಾ. ಅಶೋಕ ಹುಗ್ಗನ್ನವರ ಅವರಿಗೆ ‘ನುಡಿ ನಮನ’

ಧಾರವಾಡ: ಇತ್ತೀಚೆಗೆ ನಿಧನರಾದ ಹಿರಿಯ ಸಂಗೀತಗಾರ ಹಾಗೂ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನ ಸದಸ್ಯ ಡಾ. ಅಶೋಕ ಹುಗ್ಗನ್ನವರ ಅವರಿಗೆ ಗೌರವ ಸಲ್ಲಿಸಲು ಜನೆವರಿ 06ರಂದು ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ​ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಾಯಣ ಆವರಣದಲ್ಲಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಭವನದಲ್ಲಿ ನಡೆಯಲಿದೆ. ​ಕಾರ್ಯಕ್ರಮದ ವಿವರ: ​ಗಣ್ಯರ…

Read More

ನನ್ನ ಬೆಳೆ ನನ್ನ ಹಕ್ಕು: ಹಿಂಗಾರು ಬೆಳೆ ಸಮೀಕ್ಷೆ ಆರಂಭ; ಜನೆವರಿ 15ರೊಳಗೆ ಮಾಹಿತಿ ನೀಡಲು ರೈತರಿಗೆ ಮನವಿ

ಧಾರವಾಡ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ನನ್ನ ಬೆಳೆ ನನ್ನ ಹಕ್ಕು’ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ಸ್ವತಃ ತಾವೇ ಮೊಬೈಲ್ ಆ್ಯಪ್ ಮೂಲಕ ದಾಖಲಿಸಲು ಕೃಷಿ ಇಲಾಖೆ ಅವಕಾಶ ಕಲ್ಪಿಸಿದೆ. ​ಆ್ಯಪ್ ಮೂಲಕ ವಿವರ ದಾಖಲಿಸಲು ಅವಕಾಶ: ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ ‘ಹಿಂಗಾರು ರೈತರ ಬೆಳೆ ಸಮೀಕ್ಷೆ 2025-26’ ಎಂಬ ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡು, ಜನೆವರಿ…

Read More

ಕುಂದಗೋಳ: ಕಡಲೆ ಖರೀದಿ ಕೇಂದ್ರ ಆರಂಭಿಸಿ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ತಹಶೀಲ್ದಾರ ರಾಜು ಮಾವರಕರಿಗೆ ರೈತರ ಮನವಿ

ಕುಂದಗೋಳ: ತಾಲೂಕಿನಾದ್ಯಂತ ಸತತ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು. ಕಡಲೆ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸಿ ತಕ್ಷಣವೇ ಎಂ.ಎಸ್.ಪಿ (MSP) ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿ ಕುಂದಗೋಳ ಬೆಳೆ ರಕ್ಷಕ ರೈತ ಸಂಘದ ವತಿಯಿಂದ ತಹಶೀಲ್ದಾರ್ ರಾಜು ಮಾವರಕರ ಅವರಿಗೆ ಮನವಿ ಸಲ್ಲಿಸಲಾಯಿತು. ಕಳೆದ 4–5 ವರ್ಷಗಳಿಂದ ಪ್ರಕೃತಿ ವಿಕೋಪ ಹಾಗೂ ಅತಿವೃಷ್ಟಿಯಿಂದ ತಾಲೂಕಿನ ರೈತರು ತತ್ತರಿಸಿ ಹೋಗಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ, ಗೊಬ್ಬರ ಹಾಗೂ ಕ್ರಿಮಿನಾಶಕಕ್ಕಾಗಿ ಸಾಲಸೋಲ ಮಾಡಿ…

Read More