ನಕಲಿ, ವಸೂಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ, ಡಿ.23: ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂಬ ಅಂಗಗಳು ಸಂವಿಧಾನದಲ್ಲಿವೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಮಾಧ್ಯಮವನ್ನು ಗುರುತಿಸಲಾಗಿದೆ. ಅಧಿಕೃತ ಪತ್ರಕರ್ತರನ್ನು ಗುರುತಿಸಿ ಗೌರವಿಸಲು ಸಹಾಯವಾಗುವಂತೆ ನಕಲಿ ಹಾಗೂ ವಸೂಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ವಿಶೇಷವಾಗಿ ಅನೇಕರು ಮಾಧ್ಯಮದ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಹೆದರಿಸುವುದು, ಒತ್ತಡಕ್ಕೆ ಒಳಪಡಿಸುವುದು ನಡೆಯುತ್ತಿದ್ದು, ಸರ್ಕಾರಿ ನೌಕರರಲ್ಲಿ ಮಾಧ್ಯಮ ಹಾಗೂ ಮಾಧ್ಯಮ ಪ್ರತಿನಿಧಿಗಳ ಬಗ್ಗೆ ಸರಿಯಾದ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು…

