ಕರ್ನಾಟಕ ಬಜೆಟ್ 2026-27: ಧಾರವಾಡ ಜಿಲ್ಲೆಯ ಪಾಲಿಗೆ ಸಿಕ್ಕಿದ್ದೇನು? ಇಲ್ಲಿದೆ ವಿವರ

​ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಶೈಕ್ಷಣಿಕ ಕಾಶಿ ಧಾರವಾಡ ಜಿಲ್ಲೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ. ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಗಳಿಗೆ ಸ್ಪಂದಿಸಿರುವ ಸರ್ಕಾರ, ಶಿಕ್ಷಣ, ಉದ್ಯೋಗ ಮತ್ತು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಭರಪೂರ ಅನುದಾನ ಘೋಷಿಸಿದೆ. ​ನ್ಯಾಯಾಂಗ ಮತ್ತು ಶಿಕ್ಷಣಕ್ಕೆ ಹೈಟೆಕ್ ಸ್ಪರ್ಶ: ಧಾರವಾಡ ಜಿಲ್ಲೆಯ ನ್ಯಾಯಾಂಗ ವ್ಯವಸ್ಥೆಯನ್ನು ಆಧುನೀಕರಿಸಲು 110 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾಯೋಗಿಕವಾಗಿ ‘ಇ-ಕೋರ್ಟ್’ ಸ್ಥಾಪನೆಗೆ ನಿರ್ಧರಿಸಲಾಗಿದೆ. ಇನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ 110 ಕೋಟಿ…

Read More

​ಕುಂದಗೋಳ ತಾ.ಪಂ ಇಒ ಜಗದೀಶ ಕಮ್ಮಾರ ಉಡುಪಿಯ ಹೆಬ್ರಿಗೆ ವರ್ಗಾವಣೆ: ಕುಂದಗೊಳಕ್ಕೆ ಅಳ್ಳಾವರ ಇಒ ಪ್ರಶಾಂತ ತುರಕಾಣಿಗೆ ಹೆಚ್ಚುವರಿ ಪ್ರಭಾರ

ಧಾರವಾಡ: ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಆಡಳಿತಾತ್ಮಕ ಬದಲಾವಣೆಗಳಾಗಿದ್ದು, ಕುಂದಗೋಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ​ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳ ಆದೇಶದನ್ವಯ, ಕುಂದಗೋಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಶ್ರೀ ಜಗದೀಶ ಎಸ್. ಕಮ್ಮಾರ ಅವರನ್ನು ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕು ಪಂಚಾಯತ್‌ನ ತೆರವಾಗಿರುವ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ನಿಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಗದೀಶ ಕಮ್ಮಾರ ಅವರನ್ನು ಮಾರ್ಚ್…

Read More

​ಮಾ. 7 ರಂದು ಕಮಡೊಳ್ಳಿಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಭೂಮಿ ಪೂಜೆ: ಗಣ್ಯರ ಉಪಸ್ಥಿತಿ

​ಧಾರವಾಡ: ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಶ್ರೀಮತಿ ಆರ್.ಎಫ್.ಪಾಟೀಲ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮವು ಮಾರ್ಚ್ 7 ರಂದು ಮಧ್ಯಾಹ್ನ 2 ಗಂಟೆಗೆ ಅದ್ದೂರಿಯಾಗಿ ನೆರವೇರಲಿದೆ. ​ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಕಟ್ಟಡದ ಭೂಮಿ ಪೂಜೆ ನೆರವೇರಿಸಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ…

Read More

ಮಹಿಳಾ ಪತ್ರಕರ್ತೆಯರಿಗಾಗಿ ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ ವಿಶೇಷ ತರಬೇತಿ: ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್ ಸಿ.ಎಸ್.ಆರ್. (CSR) ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಪತ್ರಕರ್ತೆಯರಿಗಾಗಿ ವಿಶೇಷ ವಸತಿಯುತ ತರಬೇತಿ ಶಿಬಿರವನ್ನು ಆಯೋಜಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ​ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮಾರ್ಚ್ 25 ರಿಂದ 27ರ ವರೆಗೆ ಮೂರು ದಿನಗಳ ಕಾಲ ಈ ತರಬೇತಿ ನಡೆಯಲಿದೆ. ಈ ಶಿಬಿರದಲ್ಲಿ ಪ್ರಮುಖವಾಗಿ ಡಿಜಿಟಲ್ ಮಾಧ್ಯಮದ ಸವಾಲುಗಳು, ಪತ್ರಿಕೋದ್ಯಮದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆ, ಸಾಫ್ಟ್‌ಸ್ಕಿಲ್ ಅಭಿವೃದ್ಧಿ ಹಾಗೂ ನಾಯಕತ್ವ ಗುಣಗಳ ಕುರಿತು ಪರಿಣತರಿಂದ ತರಬೇತಿ ನೀಡಲಾಗುವುದು….

Read More

*ಜಗದ್ಗುರು ರೇಣುಕಾಚಾರ್ಯರ ಕೊಡುಗೆ ಅಪಾರ*

ಕುಂದಗೋಳ: ಮಾನವ ಧರ್ಮಕ್ಕೆ ಜಯವಾಗಲಿ ಎಂಬ ಧ್ಯೇಯದೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರೆಯುವ ನಿಟ್ಟಿನಲ್ಲಿ ಶ್ರಮಿಸಿದ ಜಗದ್ಗುರು ರೇಣುಕಾಚಾರ್ಯರ ಕೊಡುಗೆ ಅಪಾರ ಎಂದು ಸ್ಥಳೀಯ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಮುತ್ತಣ್ಣ ಜಡಿಮಠ ಹೇಳಿದರು. ತಾಲೂಕಿನ ಸಂಶಿ ಗ್ರಾಮದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾಜಿಕ ಅಭಿವೃದ್ಧಿಗಾಗಿ ಮಠಗಳನ್ನು ಸ್ಥಾಪಿಸುವ ಮೂಲಕ ಧರ್ಮ, ಶಾಂತಿ, ಸಹಬಾಳ್ವೆ ಹಾಗೂ ಸಮಸಮಾಜದ ಬಗ್ಗೆ ಜಾಗೃತಿ ಮೂಡಿಸಿದ ಕೀರ್ತಿ…

Read More

​ಸಚಿವ ಸಂತೋಷ ಲಾಡ್ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ: ವಿಶೇಷ ಚೇತನರಿಗೆ 10 ಲಕ್ಷ ಮೌಲ್ಯದ ಸೌಲಭ್ಯ ವಿತರಣೆ

ಧಾರವಾಡ: ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ 51ನೇ ಜನ್ಮದಿನದ ಅಂಗವಾಗಿ ಜಿಲ್ಲೆಯಾದ್ಯಂತ ವಿಶೇಷ ಚೇತನರು ಹಾಗೂ ನಿರಾಶ್ರಿತರ ಏಳಿಗೆಗಾಗಿ ಹಮ್ಮಿಕೊಂಡಿದ್ದ ಸಮಾಜಮುಖಿ ಕಾರ್ಯಕ್ರಮಗಳು ಗಮನ ಸೆಳೆದವು. ನಗರದ ಶಿಕ್ಷಕಿಯರ ಸರ್ಕಾರಿ ತರಬೇತಿ ಕಾಲೇಜು (ಟಿಸಿಡಬ್ಲ್ಯೂ) ಸಭಾಂಗಣದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಂತೋಷ ಲಾಡ್ ಫೌಂಡೇಶನ್ ಮತ್ತು ಜನಮುಖಿ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶೇಷ ಚೇತನರು ಹಾಗೂ ಅವರ ಕುಟುಂಬದವರೊಂದಿಗೆ ಸಂವಾದ ಮತ್ತು ಸಾಧನ ಸಲಕರಣೆ ವಿತರಣಾ…

Read More

ಕುಂದಗೋಳ ತಾಲ್ಲೂಕಿನ ಮುಳ್ಳೊಳ್ಳಿ ಗ್ರಾಮದ ಶ್ರೀ ಚನ್ನವೀರೇಶ್ವರ ವಿರಕ್ತ ಮಠದಲ್ಲಿ ಮೂರನೇ ದಿನದ ಬಸವ ಪುರಾಣ ಕಾರ್ಯಕ್ರಮ,

ಕುಂದಗೋಳ: ತಾಲ್ಲೂಕಿನ ಮುಳ್ಳೋಳ್ಳಿ ಗ್ರಾಮದ ಶ್ರೀ ಚನ್ನವೀರೇಶ್ವರ ವಿರಕ್ತಮಠದ ಪಕ್ಕದ ಜಮೀನಿನಲ್ಲಿ ಆಡಿಯ. ಹಂದಿಗುಂದದ ಶ್ರೀ ಶ್ರೀ ಶಿವಾನಂದ ಮಹಾಸ್ವಾಮಿಗಳ ವತಿಯಿಂದ ಮೂರನೇ ದಿನದ ಬಸವ ಪುರಾಣ ಪ್ರವಚನ ಕಾರ್ಯಕ್ರಮ ನಡೆಯುತ್ತಿದೆ. ಇದನ್ನು My Public samachar ( ಮಾಯ್ ಪಬ್ಲಿಕ್ ಸಮಾಚಾರ ಸುದ್ದಿ ಮಾಹಿನಿಯು ಚಾನೇಲ್ ನಲ್ಲಿ ಸಂಜೆ 6.30 ಕ್ಕೆ ನೇರ ಪ್ರಸಾರ ಇರುತ್ತದೆ. ತಪ್ಪದೆ ವಿಕ್ಷೀಸಿ.

Read More

ಸರ್ವೋತ್ತಮ ಸೇವಾ ಪ್ರಶಸ್ತಿ: ಅರ್ಜಿ ಸಲ್ಲಿಕೆಗೆ ಮಾರ್ಚ್ 4 ಕೊನೆಯ ದಿನ

ಧಾರವಾಡ: ರಾಜ್ಯ ಸರ್ಕಾರದ 2026ನೇ ಸಾಲಿನ ಪ್ರತಿಷ್ಠಿತ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗಾಗಿ ಅರ್ಹ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಮಾರ್ಚ್ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಸೇವೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅಧಿಕಾರಿ ಮತ್ತು ನೌಕರರನ್ನು ಗುರುತಿಸಿ ಗೌರವಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನಾಮನಿರ್ದೇಶನ ಪ್ರಕ್ರಿಯೆಯನ್ನು ಆರಂಭಿಸಿದೆ. ಜಿಲ್ಲಾ ಮಟ್ಟದಲ್ಲಿ ಈ ಪ್ರಕ್ರಿಯೆಯ ಸುಗಮ ನಿರ್ವಹಣೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ…

Read More

ನೇಮಕಾತಿಗಾಗಿ ಭುಗಿಲೆದ್ದ ಆಕ್ರೋಶ: ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ

ಧಾರವಾಡ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.50 ಲಕ್ಷಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ, ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಸಹಸ್ರಾರು ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ 10 ಗಂಟೆಗೆ ಶ್ರೀನಗರ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜುಬಿಲಿ ವೃತ್ತದವರೆಗೆ ಸಾಗಿತು. ಈ ವೇಳೆ ಸಾವಿರಾರು ವಿದ್ಯಾರ್ಥಿಗಳು ಸರ್ಕಾರದ ವಿಳಂಬ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು….

Read More

ಇತಿಹಾಸ ಪ್ರಸಿದ್ಧ ರಾಮಲಿಂಗೇಶ್ವರ ಕಾಮಣ್ಣನ ದೇವಸ್ಥಾನದಲ್ಲಿ ಫೆ.26ರಂದು ಕಳಸಾರೋಹಣ

ನವಲಗುಂದ : ಪಟ್ಟಣದ ಇತಿಹಾಸ ಪ್ರಸಿದ್ಧ ಹಾಗೂ ಭಕ್ತರ ಆರಾಧ್ಯ ದೈವವಾಗಿರುವ ಶ್ರೀ ರಾಮಲಿಂಗೇಶ್ವರ ಕಾಮಣ್ಣನ ದೇವಸ್ಥಾನದಲ್ಲಿ ಕಳಸಾರೋಹಣ, ನೂತನ ಕಾರ್ಯಾಲಯ ಹಾಗೂ ಯಾತ್ರಿನಿವಾಸ ಉದ್ಘಾಟನೆ ಮತ್ತು ಭಕ್ತರ ಮನೆಗಳ ಹಸ್ತಾಂತರ ಕಾರ್ಯಕ್ರಮವು ಫೆ.26ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ರಾಮಲಿಂಗ ಓಣಿಯಲ್ಲಿ ನಡೆಯಲಿದೆ. ಕಾರ್ಯಕ್ರಮವು ಭಾವೈಕ್ಯತಾ ಮಹಾಸಂಸ್ಥಾನ ಪೀಠ, ಶಿರಹಟ್ಟಿಯ ಪೂಜ್ಯ ಶ್ರೀ ಮನ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ಧರಾಮ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ.ಪಂಚಗ್ರಹ ಹಿರೇಮಠ, ನವಲಗುಂದದ ಪೂಜ್ಯ ಶ್ರೀ ಷ.ಬ್ರ. ಶ್ರೀ…

Read More