ಸಂವಿಧಾನವು ದೇಶದ ಮೌಲ್ಯಗಳನ್ನು ಸಾಕಾರಗೊಳಿಸುವ ಪವಿತ್ರ ಗ್ರಂಥ: ಸವಿತಾ ಚಿಕ್ಕಣ್ಣವರ

ನವಲಗುಂದ: ಭಾರತದ ಸಂವಿಧಾನವು ಕೇವಲ ಕಾನೂನುಗಳ ಸಂಕಲನವಲ್ಲ, ಅದು ನಮ್ಮ ದೇಶದ ಮೌಲ್ಯಗಳು, ತತ್ವಗಳು ಮತ್ತು ಆಡಳಿತಾತ್ಮಕ ಚೌಕಟ್ಟನ್ನು ಸಾಕಾರಗೊಳಿಸುವ ಪವಿತ್ರ ಗ್ರಂಥವಾಗಿದೆ ಎಂದು ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಸವಿತಾ ಚಿಕ್ಕಣ್ಣವರ ಅಭಿಪ್ರಾಯಪಟ್ಟರು. ​ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಜಗತ್ತಿನ ಅತಿ ದೊಡ್ಡ ಸಂವಿಧಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಮ್ಮ ಸಂವಿಧಾನವು ದೇಶದ ಬಲಿಷ್ಠತೆಗೆ ಅಡಿಪಾಯವಾಗಿದೆ. ನೂರಾರು ಹೋರಾಟಗಾರರು ಬಲಿದಾನ ನೀಡಿ ತಂದುಕೊಟ್ಟ…

Read More

ಅಣ್ಣಿಗೇರಿಯಲ್ಲಿ ತಾಲೂಕು ಆಡಳಿತದಿಂದ ಸಡಗರದ ಗಣರಾಜ್ಯೋತ್ಸವ ಆಚರಣೆ

ಅಣ್ಣಿಗೇರಿ: ಪಟ್ಟಣದ ಶಾಸಕರ ಮಾದರಿ ಶಾಲೆಯ ಮೈದಾನದಲ್ಲಿ ಸೋಮವಾರ ಅಣ್ಣಿಗೇರಿ ತಾಲೂಕು ಆಡಳಿತದ ವತಿಯಿಂದ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ​ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅಣ್ಣಿಗೇರಿ ತಹಶೀಲ್ದಾರ್ ಮಂಜುನಾಥ ದಾಸಪ್ಪನವರ ಅವರು, ಗಣರಾಜ್ಯೋತ್ಸವವು ನಮ್ಮ ಸಂವಿಧಾನದ ಏಕತೆ ಮತ್ತು ಪ್ರಜಾಪ್ರಭುತ್ವದ ಶಕ್ತಿಯನ್ನು ಸ್ಮರಿಸುವ ಮಹತ್ವದ ದಿನವಾಗಿದೆ. ದೇಶದ ಉನ್ನತ ಮೌಲ್ಯಗಳನ್ನು ಕಾಪಾಡುವ ಸಂಕಲ್ಪದೊಂದಿಗೆ ನಾವೆಲ್ಲರೂ ಮುನ್ನಡೆಯೋಣ ಎಂದು ಕರೆ ನೀಡಿದರು. ​ನಂತರ ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ ಮಾತನಾಡಿ, ಅಣ್ಣಿಗೇರಿ ನಗರವನ್ನು ಸ್ವಚ್ಛ ಮತ್ತು…

Read More

​ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಪ್ರತಿಯೊಬ್ಬರಿಗೂ ಸ್ಮರಣೀಯ: ನಿವೃತ್ತ ಶಿಕ್ಷಕ ಕಲ್ಲಯ್ಯ ಮಠಪತಿ

ನವಲಗುಂದ: 1950ರಲ್ಲಿ ಸಂವಿಧಾನ ಜಾರಿಗೆ ಬಂದ ಈ ದಿನದಂದು ಭಾರತವು ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಹೊರಹೊಮ್ಮಿತು. ಈ ಮಹತ್ವದ ದಿನದ ಹಿಂದೆ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವಿದ್ದು, ಅದನ್ನು ಪ್ರತಿಯೊಬ್ಬ ಭಾರತೀಯನೂ ಸದಾ ಸ್ಮರಿಸಬೇಕು ಎಂದು ನಿವೃತ್ತ ಶಿಕ್ಷಕ ಕಲ್ಲಯ್ಯ ಮಠಪತಿ ತಿಳಿಸಿದರು. ​ತಾಲೂಕಿನ ಗೊಬ್ಬಗುಂಪಿ ಗ್ರಾಮದ ರೇವಣಸಿದ್ದೇಶ್ವರ ಯುವಕ ಮಂಡಳದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಸಂವಿಧಾನದ ಆಶಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ದೇಶದ ಏಕತೆ ಮತ್ತು…

Read More

ಸಂವಿಧಾನದ ಆದರ್ಶಗಳು ನಮ್ಮನ್ನು ಉಜ್ವಲ ಭವಿಷ್ಯಕ್ಕೆ ಕೊಂಡೊಯ್ಯಲಿ: ಮುತ್ತಪ್ಪ ಬಿಸನಾಳ

ನವಲಗುಂದ: ಭಾರತವು ವಸಾಹತುಶಾಹಿ ಆಡಳಿತದಿಂದ ಮುಕ್ತವಾಗಿ, ಔಪಚಾರಿಕವಾಗಿ ಗಣರಾಜ್ಯವಾಗಿ ಘೋಷಿತವಾದ ಈ ದಿನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣ. ಸಂವಿಧಾನದ ಉನ್ನತ ಆದರ್ಶಗಳು ನಮ್ಮನ್ನು ಉಜ್ವಲ ಭವಿಷ್ಯದತ್ತ ಕೊಂಡೊಯ್ಯಲಿ ಎಂದು ಎಸ್‌ಡಿಎಂಸಿ ಅಧ್ಯಕ್ಷ ಮುತ್ತಪ್ಪ ಬಿಸನಾಳ ಆಶಯ ವ್ಯಕ್ತಪಡಿಸಿದರು. ​ಪಟ್ಟಣದ ಹಳ್ಳದ ಓಣಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-3 ರಲ್ಲಿ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಭಾರತೀಯರೆಲ್ಲರೂ ಏಕತೆಯ ಭಾವನೆಯೊಂದಿಗೆ ದೇಶದ ಪ್ರಗತಿಯ ಹಾದಿಯಲ್ಲಿ ಹೆಜ್ಜೆ ಹಾಕೋಣ ಎಂದು ಕರೆ…

Read More

​ಜೀವನ ಎಂದರೆ ಡೊನೇಷನ್ ಇಲ್ಲದ ಪಾಠಶಾಲೆ: ಗವಿಸಿದ್ದೇಶ್ವರ ಶ್ರೀ

ಅಣ್ಣಿಗೇರಿ: ಜೀವನದಲ್ಲಿ ಮನುಷ್ಯರನ್ನು ನಂಬಿ ಕೆಟ್ಟವರಿದ್ದಾರೆ, ಆದರೆ ಮಣ್ಣನ್ನು ನಂಬಿ ಕೆಟ್ಟವರಿಲ್ಲ. ಜೀವನ ಎಂದರೆ ಯಾವುದೇ ಡೊನೇಷನ್ ಇಲ್ಲದ ಪಾಠಶಾಲೆ, ಇದು ಸಮಾಜದ ಪ್ರತಿ ಕ್ಷಣಕ್ಕೂ ನಮಗೆ ಪಾಠವನ್ನು ಕಲಿಸುತ್ತದೆ ಎಂದು ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ನುಡಿದರು. ​ತಾಲೂಕಿನ ಶಲವಡಿ ಗ್ರಾಮದ ಶ್ರೀ ಗುರುಶಾಂತೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ (ಕೆಪಿಎಸ್) ರವಿವಾರ 1995-96ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಗುರುವಂದನೆ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗುವ…

Read More

ಮಕ್ಕಳ ಸಂತೆ: ವ್ಯವಹಾರ ಜ್ಞಾನ ವೃದ್ಧಿಗೆ ಸಹಕಾರಿ – ಬಿಇಒ ಉಮೇಶ ಬೊಮ್ಮಕ್ಕನವರ

ನವಲಗುಂದ: ಶಾಲಾ ಹಂತದಲ್ಲಿ ಆಯೋಜಿಸುವ ‘ಮಕ್ಕಳ ಸಂತೆ’ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನ, ಹಣದ ಮಹತ್ವ ಹಾಗೂ ಗ್ರಾಹಕರನ್ನು ಸೆಳೆಯುವ ಸಂವಹನ ಕೌಶಲಗಳನ್ನು ಕಲಿಸಲು ಅತ್ಯುತ್ತಮ ವೇದಿಕೆಯಾಗಿವೆ ಎಂದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಅಭಿಪ್ರಾಯಪಟ್ಟರು. ​ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-3 ರಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಕ್ಕಳು ಸ್ವತಃ ತಯಾರಿಸಿದ ತಿಂಡಿ-ತಿನಿಸುಗಳು, ತರಕಾರಿಗಳು ಹಾಗೂ ಆಟಿಕೆಗಳನ್ನು ಮಾರಾಟ ಮಾಡುವ ಮೂಲಕ ಪ್ರಾಯೋಗಿಕ ಕಲಿಕೆಯನ್ನು ಪಡೆಯುತ್ತಾರೆ. ಇಂತಹ…

Read More

ನಾಳೆ ಹುಬ್ಬಳ್ಳಿಯಲ್ಲಿ ಬೃಹತ್ ಮನೆ ಹಂಚಿಕೆ ಕಾರ್ಯಕ್ರಮ: ಕುಂದಗೋಳದಿಂದ ಅಂದಾಜು 10 ಸಾವಿರ ಜನ ಭಾಗವಹಿಸುವ ನಿರೀಕ್ಷೆ – ಮುಂಖಡ ಶಿವಾನಂದ ಬೆಂತೂರ

ಕುಂದಗೋಳ: ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ (ಸ್ಲಂ ಬೋರ್ಡ್) ವತಿಯಿಂದ ಜನವರಿ 24ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಕುಂದಗೋಳ ತಾಲೂಕಿನಿಂದ ಸುಮಾರು 10 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಶಿವಾನಂದ ಬೆಂತೂರ ಕರೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ಸ್ಲಂ ಬೋರ್ಡ್ ಅಧ್ಯಕ್ಷರೂ…

Read More

​ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತ್‌ಗಳಿಗೆ ₹25 ಸಾವಿರ ನಗದು ಪುರಸ್ಕಾರ: ಅರ್ಜಿ ಆಹ್ವಾನ

ಧಾರವಾಡ, ಜ. 22: ಬಾಲ್ಯವಿವಾಹ ಪಿಡುಗನ್ನು ಸಂಪೂರ್ಣವಾಗಿ ತಡೆಗಟ್ಟಿ, ‘ಶೂನ್ಯ ಸಹಿಷ್ಣುತೆ’ ಸಾಧಿಸಿರುವ ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ 2024-25ನೇ ಸಾಲಿಗೆ ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತ್ ಪ್ರಶಸ್ತಿಗಾಗಿ ಅರ್ಹ ಪಂಚಾಯತ್‌ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ​ಬಾಲ್ಯವಿವಾಹ ಮುಕ್ತ ಕರ್ನಾಟಕವನ್ನಾಗಿಸುವ ವಿನೂತನ ಯೋಜನೆಯಡಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬಾಲ್ಯವಿವಾಹದ ವಿಚಾರದಲ್ಲಿ ರಾಜಿ ಇಲ್ಲದ (ಶೂನ್ಯ ಸಹಿಷ್ಣುತೆ) ನಿಲುವು ಹೊಂದಿರುವ ಮತ್ತು ಅದನ್ನು ಪರಿಣಾಮಕಾರಿಯಾಗಿ ತಡೆಗಟ್ಟಿರುವ ಪಂಚಾಯತ್‌ಗಳನ್ನು ಗುರುತಿಸಲಾಗುವುದು. ಪ್ರತಿ ಜಿಲ್ಲೆಯಿಂದ ಆಯ್ಕೆಯಾಗುವ ಒಂದು…

Read More

​ಧಾರವಾಡ: ನಾಪತ್ತೆಯಾಗಿದ್ದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ನಿರ್ಜನ ಪ್ರದೇಶದಲ್ಲಿ ಶವ ಪತ್ತೆ

ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದ 19 ವರ್ಷದ ಯುವತಿಯೋರ್ವಳನ್ನು ಬರ್ಬರವಾಗಿ ಹತ್ಯೆಗೈದು, ಶವವನ್ನು ನಗರದ ಹೊರವಲಯದಲ್ಲಿ ಎಸೆದು ಹೋಗಿರುವ ಆಘಾತಕಾರಿ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ​ನಗರದ ಗಾಂಧಿ ಚೌಕ್ ನಿವಾಸಿ ಝಕಿಯಾ ಮುಲ್ಲಾ (19) ಎಂಬುವವರೇ ಹತ್ಯೆಯಾದ ದುರ್ದೈವಿ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಝಕಿಯಾ, ರಾತ್ರಿಯಾದರೂ ಮನೆಗೆ ಮರಳಿರಲಿಲ್ಲ. ಇದರಿಂದ ಕಂಗಾಲಾದ ಕುಟುಂಬಸ್ಥರು ರಾತ್ರಿಯಿಡೀ ಹುಡುಕಾಟ ನಡೆಸಿದ್ದರು. ಆದರೆ, ಇಂದು (ಬುಧವಾರ) ಮುಂಜಾನೆ ನಗರದ ಹೊರವಲಯದ…

Read More

ಮಹಿಳಾ ಅಧಿಕಾರಿಗಳಿಗೆ ಅಶ್ಲೀಲ ನಿಂದನೆ, ಜೀವ ಬೆದರಿಕೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಜಯ ಕರ್ನಾಟಕ ಬೃಹತ್ ಪ್ರತಿಭಟನೆ

​ಧಾರವಾಡ, : ಚಿಕ್ಕಬಳ್ಳಾಪುರ ಹಾಗೂ ಮುಖ್ಯಮಂತ್ರಿಗಳ ಸ್ವಕ್ಷೇತ್ರ ವರುಣಾದಲ್ಲಿ ಮಹಿಳಾ ಅಧಿಕಾರಿಗಳ ಮೇಲೆ ನಡೆದ ದೌರ್ಜನ್ಯ, ಅಶ್ಲೀಲ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣಗಳನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬುದುವಾರದಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ​ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಾದ ಅಮೃತಾ ಗೌಡ ಹಾಗೂ ಪೌರಕಾರ್ಮಿಕರಿಗೆ ಅಶ್ಲೀಲ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಹಾಗೂ ವರುಣಾ ಕ್ಷೇತ್ರದಲ್ಲಿ…

Read More