ಕುಂದಗೋಳ ತಾಲೂಕು ಗ್ಯಾರಂಟಿ ಅಧ್ಯಕ್ಷ ಸ್ಥಾನಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ…!

ವರದಿ: ಪಬ್ಲಿಕ್ ಸಮಾಚಾರ ಕುಂದಗೋಳ: ದಿವಂಗತ ಸಚಿವ ಸಿ.ಎಸ್. ಶಿವಳ್ಳಿ ಅವರ ನಿಧನದ ಬಳಿಕ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಡಜನ್‌ಗಟ್ಟಲೆ ಮುಖಂಡರ ನಡುವಿನ ಒಳಜಗಳದಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಹುದ್ದೆಯೇ ಹಾವು-ಏಣಿ ಆಟಕ್ಕೆ ಸಾಕ್ಷಿಯಾಗಿದೆ. ಹೌದು, ಇಲ್ಲಿನ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ನಾಯಕರು ಪ್ರಭಾವ ಹೊಂದಿರುವ ಕಾರಣ ಇಂತಹ ಬೆಳವಣಿಗೆಗಳು ನಿರಂತರವಾಗಿ ನಡೆಯುತ್ತಿವೆ. ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಹುದ್ದೆ ಕಳೆದ ಮೂರು ವರ್ಷಗಳಲ್ಲಿ ಮೂರು ಬಾರಿ ಬದಲಾಗಿರುವುದು ಇದಕ್ಕೆ ಸ್ಪಷ್ಟ…

Read More

ಗುಡಿಸಾಗರ ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ವಿದ್ಯಾರ್ಥಿಗಳಿಗೆ ಪುಸ್ತಕ, ಸಿಹಿ ವಿತರಣೆ

ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ಜೂನ್ 1ರ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಸುದೀರ್ಘ ಬೇಸಿಗೆ ರಜೆಯ ಮಜಾವನ್ನು ಮುಗಿಸಿ ಮರಳಿ ಶಾಲೆಗೆ ಹೆಜ್ಜೆ ಇಟ್ಟ ಮುದ್ದು ಮಕ್ಕಳಿಗೆ ಶಾಲೆಯ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು. ​ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವಾದ್ದರಿಂದ ಶಾಲಾ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದು ವಿಶೇಷವಾಗಿತ್ತು. ಶಾಲೆಗೆ ಬಂದ…

Read More

ಕುಂದಗೋಳ ಪಟ್ಟಣ ಪಂಚಾಯಿತಿಗೆ ನೂತನ ಮುಖ್ಯಾಧಿಕಾರಿಯಾಗಿ ಗಂಗಾಧರ ಸಾನಕ್ಯಾನವರ ನೇಮಕ

ಕುಂದಗೋಳ: ರಾಜ್ಯ ಸರ್ಕಾರದ ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಕುಂದಗೋಳ ಪಟ್ಟಣ ಪಂಚಾಯಿತಿಯ ನೂತನ ಮುಖ್ಯಾಧಿಕಾರಿಯಾಗಿ ಗಂಗಾಧರ ಸಾನಕ್ಯಾನವರ ಅವರನ್ನು ನೇಮಕ ಮಾಡಲಾಗಿದೆ. ಕುಂದಗೋಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯಾಗಿದ್ದ ಸಿ.ವಿ. ಕುಲಕರ್ಣಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಮೇ 31ರಂದು ಈ ಹುದ್ದೆ ತೆರವಾಗಿತ್ತು. ತೆರವಾದ ಹುದ್ದೆಗೆ ರಾಜ್ಯ ಸರ್ಕಾರವು ಮೇ 27ರಂದು ಹೊರಡಿಸಿದ ಆದೇಶದ ಅನ್ವಯ ಗಂಗಾಧರ ಸಾನಕ್ಯಾನವರ ಅವರನ್ನು ಮುಖ್ಯಾಧಿಕಾರಿಯಾಗಿ ನೇಮಕಗೊಳಿಸಿದೆ. ನೂತನ ಮುಖ್ಯಾಧಿಕಾರಿಯಾಗಿ ಗಂಗಾಧರ ಸಾನಕ್ಯಾನವರ ಅವರು ಜೂನ್ 1ರಂದು ಅಧಿಕಾರ ಸ್ವೀಕರಿಸಿದ್ದಾರೆ….

Read More

ಧಾರವಾಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಐದು ಜನ ಶಾಸಕರಲ್ಲಿ ಯಾರಿಗೆ ಒಲಿಯಲಿದೆ ಮಂತ್ರಿ ಭಾಗ್ಯ?

ವರದಿ: ಗಿರೀಶ ಘಾಟಗೆ ಧಾರವಾಡ: ರಾಜ್ಯದಲ್ಲಿ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ಬಹುತೇಕ ಖಚಿತವಾಗಿದ್ದು, ಅದರಂತೆ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ನಿಶ್ಚಿತ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರ ಸರ್ಕಾರದ ನೂತನ ಸಚಿವ ಸಂಪುಟದ ಮೊದಲ ಪಾಳಿಯಲ್ಲಿ ಸಚಿವರಾಗಲಿರುವ ಸಂಭಾವ್ಯ 14 ಶಾಸಕರ ಹೆಸರುಗಳು ಮುಂಚೂಣಿಗೆ ಬಂದಿದ್ದು, ಹೈಕಮಾಂಡ್ ಮಟ್ಟದಲ್ಲಿ ಪಟ್ಟಿ ಸಿದ್ಧವಾಗುತ್ತಿದೆ. ಅದರಂತೆ ರಾಜ್ಯದಲ್ಲಿಯೇ ಎರಡನೇ ದೊಡ್ಡ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ…

Read More

ಈಜಲು ಹೋಗಿ ಜಲಸಮಾಧಿಯಾದ ಮೂವರು ಹದಿಹರೆಯದ ಬಾಲಕರು: ಸಿಂಗನಳ್ಳಿಯಲ್ಲಿ ಆವರಿಸಿದ ಶೋಕಛಾಯೆ

ಧಾರವಾಡ: ಬೇಸಿಗೆಯ ತೀವ್ರ ಬಿಸಿಲಿನ ತಾಪಕ್ಕೆ ತಣ್ಣಗಾಗಲು ಕೆರೆಗೆ ಈಜಲು ಹೋದ ಮೂವರು ಹದಿಹರೆಯದ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಸಿಂಗನಳ್ಳಿ ಗ್ರಾಮದ ಸಮೀಪದ ಕರೆಮ್ಮನಕೆರೆಯಲ್ಲಿ ಶನಿವಾರ ಸಂಭವಿಸಿದೆ. ​ಸಿಂಗನಳ್ಳಿ ಗ್ರಾಮದ ನಿವಾಸಿಗಳಾದ ಅನ್ವರ ಇಬ್ರಾಹಿಂ ವಟ್ನಾಳ (13), ಸುಭಾನಿ ಇಸಾಕ್ ಬಾಗಜಿಕೊಪ್ಪ (12) ಹಾಗೂ ಮೆಹಬೂಬಸುಭಾನಿ ದಾದಾಫೀರ ವಡ್ನಾಳ (15) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ​ಪ್ರಸ್ತುತ ದಿನಗಳಲ್ಲಿ ಬೇಸಿಗೆಯ ತಾಪಮಾನ ಅತಿಯಾಗಿ ಹೆಚ್ಚಾಗಿದ್ದರಿಂದ ಮೂವರೂ ಬಾಲಕರು ಮಧ್ಯಾಹ್ನದ ವೇಳೆ ಈಜಾಡಲು ಕರೆಮ್ಮನಕೆರೆಗೆ ತೆರಳಿದ್ದರು….

Read More

ಗೌಡಗೇರಿಯ ಜಮೀನಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ:

ಕುಂದಗೋಳ: ತಾಲ್ಲೂಕಿನಲ್ಲಿ ಹೆಸ್ಕಾಂ ಇಲಾಖೆಗೆ ಹಿಡಿದ ಗ್ರಹಣವೋ ಅಥವಾ ಕಳಂಕವೋ ತಿಳಿಯದಂತಾಗಿದ್ದು, ವಿದ್ಯುತ್ ಸ್ಪರ್ಶದಿಂದ ರೈತರೊಬ್ಬರು ದುರಂತ ಅಂತ್ಯ ಕಂಡಿರುವ ಘಟನೆ ತಾಲೂಕಿನ ಗೌಡಗೇರಿ ಗ್ರಾಮದಲ್ಲಿ ಸಂಭವಿಸಿದೆ. ಮೊನ್ನೆಯಷ್ಟೇ ಸಂಶಿ ಗ್ರಾಮದಲ್ಲಿ 06 ವರ್ಷದ ಮುಗ್ಧ ಬಾಲಕಿ ವಿದ್ಯುತ್ ತಾಗಿ ಮೃತಪಟ್ಟ ಘಟನೆ ಹಸಿರಾಗಿರುವಾಗಲೇ, ಇದೀಗ ಮತ್ತೊಂದು ಜೀವ ಬಲಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಗೌಡಗೇರಿ ಗ್ರಾಮದ ನಿವಾಸಿಯಾದ ಸುರೇಶ ಬಸಪ್ಪ ಮಣ್ಣೂರ (52) ಮೃತಪಟ್ಟ ದುರ್ದೈವಿ ರೈತರಾಗಿದ್ದಾರೆ. ಇವರು ಗ್ರಾಮದ ಸರ್ವೆ ನಂಬರ್…

Read More

ಬ್ಯಾಹಟ್ಟಿ ಗ್ರಾಮದಲ್ಲಿ ಸೌಹಾರ್ದಯುತವಾಗಿ ಜರುಗಿದ ಬಕ್ರೀದ್ ಹಬ್ಬ ಆಚರಣೆ

ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಸಮಸ್ತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಭಕ್ತಿ, ಶಾಂತಿ ಹಾಗೂ ಸಹೋದರತ್ವದ ಸಂದೇಶದೊಂದಿಗೆ ಅತ್ಯಂತ ಸಂಭ್ರಮದಿಂದ ಆಚರಿಸಿದರು. ಬೆಳಗಿನ ಜಾವದಿಂದಲೇ ಗ್ರಾಮದಲ್ಲಿನ ಮಸೀದಿಗಳಲ್ಲಿ ವಿಶೇಷ ನಮಾಜ್ ನೆರವೇರಿಸಲಾಯಿತು. ಮುಸ್ಲಿಂ ಸಮುದಾಯದ ಹಿರಿಯರು, ಯುವಕರು ಹಾಗೂ ಮಕ್ಕಳು ಹೊಸ ವಸ್ತ್ರ ಧರಿಸಿ ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಹಬ್ಬದ ಸಂತಸ ಹಂಚಿಕೊಂಡರು. ಬಕ್ರೀದ್ ಹಬ್ಬವು ತ್ಯಾಗ, ಮಾನವೀಯತೆ ಮತ್ತು ದಾನಧರ್ಮದ ಪ್ರತೀಕವಾಗಿರುವ ಹಿನ್ನೆಲೆಯಲ್ಲಿ, ಈ ಸಂದರ್ಭದಲ್ಲಿ ಅಲ್ಲಾಹನ ಕೃಪೆಗೆ ಕೃತಜ್ಞತೆ ಸಲ್ಲಿಸಲಾಯಿತು….

Read More

ಧಾರವಾಡದಲ್ಲಿ ಆರವ್ ಪೌಂಡೇಶನ್ ಉದ್ಘಾಟನೆ: ಸಮಾಜಮುಖಿ ಕಾರ್ಯಕ್ಕೆ ಗಣ್ಯರ ಸಾಕ್ಷಿ

ಧಾರವಾಡ: ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆ ಮಾಡುವ ಮಹೋನ್ನತ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದಿರುವ ‘ಆರವ್ ಪೌಂಡೇಶನ್ (ರಿ) ಧಾರವಾಡ’ ಸಂಸ್ಥೆಯ ಉದ್ಘಾಟನಾ ಸಮಾರಂಭವು ಮೇ 26 ರಂದು ನಗರದ ರಂಗಾಯಣ ಭವನದಲ್ಲಿ ಅತ್ಯಂತ ವಿಜೃಂಭಣೆಯಿಂದ ಹಾಗೂ ಯಶಸ್ವಿಯಾಗಿ ನೆರವೇರಿತು. ಶಿರಕೊಳದ ಶ್ರೀ ಶ್ರೀ ಶ್ರೀ ಷ.ಬ್ರ. ಗುರುಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿದ ಈ ಸಮಾರಂಭವನ್ನು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಹನಮಂತಪ್ಪ ಆಲ್ಕೋಡ ಅವರು ದೀಪ ಬೆಳಗಿಸುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ…

Read More

ರೈತರು ಹಾಗೂ ಸಣ್ಣ ಉದ್ಯಮಿಗಳಿಗೆ ಬ್ಯಾಂಕುಗಳಿಂದ ಕಿರುಕುಳ ನೀಡಬಾರದು: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಎಚ್ಚರಿಕೆ

ಧಾರವಾಡ: ಜಿಲ್ಲೆಯಲ್ಲಿ ಕೃಷಿ ಹಾಗೂ ಕೈಗಾರಿಕೆಗಳಿಗೆ ಪೂರಕವಾದ ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸಲು ಎಲ್ಲ ಬ್ಯಾಂಕ್‌ಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಸರ್ಕಾರದ ಕಟ್ಟುನಿಟ್ಟಿನ ನಿರ್ದೇಶನ ಹಾಗೂ ಆರ್‌ಬಿಐ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ರೈತರಿಗೆ ಮತ್ತು ಸಣ್ಣ ಉದ್ಯಮಿಗಳಿಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ (ಡಿ.ಎಲ್.ಆರ್.ಸಿ) ಜಂಟಿ ಸಭೆಯ…

Read More

ರಾಷ್ಟ್ರೀಯ ತೋಟಗಾರಿಕೆ ಮಿಷನ್: ವಿವಿಧ ಸಹಾಯಧನ ಸೌಲಭ್ಯಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ರಾಷ್ಟ್ರೀಯ ತೋಟಗಾರಿಕೆ ಮಿಷನ್: ವಿವಿಧ ಸಹಾಯಧನ ಸೌಲಭ್ಯಕ್ಕಾಗಿ ರೈತರಿಂದ ಅರ್ಜಿ ಆಹ್ವಾನಧಾರವಾಡ: ಪ್ರಸಕ್ತ 2026-27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳ ಸಹಾಯಧನ ಸೌಲಭ್ಯಕ್ಕಾಗಿ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಘಟಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ತೋಟಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಈ ಯೋಜನೆಯಡಿ, ಹೊಸ ಪ್ರದೇಶ ವಿಸ್ತರಣೆ ಅಡಿಯಲ್ಲಿ ಮಾವು, ಬಾಳೆ, ಪಪ್ಪಾಯ, ಕರಿಮೆಣಸು ಹಾಗೂ…

Read More