ಕುಂದಗೋಳ ತಾಲೂಕು ಗ್ಯಾರಂಟಿ ಅಧ್ಯಕ್ಷ ಸ್ಥಾನಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ…!
ವರದಿ: ಪಬ್ಲಿಕ್ ಸಮಾಚಾರ ಕುಂದಗೋಳ: ದಿವಂಗತ ಸಚಿವ ಸಿ.ಎಸ್. ಶಿವಳ್ಳಿ ಅವರ ನಿಧನದ ಬಳಿಕ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಡಜನ್ಗಟ್ಟಲೆ ಮುಖಂಡರ ನಡುವಿನ ಒಳಜಗಳದಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಹುದ್ದೆಯೇ ಹಾವು-ಏಣಿ ಆಟಕ್ಕೆ ಸಾಕ್ಷಿಯಾಗಿದೆ. ಹೌದು, ಇಲ್ಲಿನ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ನಾಯಕರು ಪ್ರಭಾವ ಹೊಂದಿರುವ ಕಾರಣ ಇಂತಹ ಬೆಳವಣಿಗೆಗಳು ನಿರಂತರವಾಗಿ ನಡೆಯುತ್ತಿವೆ. ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಹುದ್ದೆ ಕಳೆದ ಮೂರು ವರ್ಷಗಳಲ್ಲಿ ಮೂರು ಬಾರಿ ಬದಲಾಗಿರುವುದು ಇದಕ್ಕೆ ಸ್ಪಷ್ಟ…

