ಧಾರವಾಡ: ಭಾವೈಕ್ಯತೆಯ ಬೆಸುಗೆಯಾಗಿ ಮೂಡಿಬಂದ ‘ಕನ್ನಡ ಗಾನ ಕೌಸ್ತುಭ-2025’ ಸಂಗೀತ ಸಂಭ್ರಮ

ಧಾರವಾಡ: ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳ ಜೊತೆಗೆ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡುತ್ತಿರುವ ಧಾರವಾಡ ಕರೋಕೆ ತಂಡದ ಸೇವೆ ಅತ್ಯಂತ ಶ್ಲಾಘನೀಯವಾಗಿದೆ ಎಂದು ಬೇಲೂರು ಶಿವಾನಂದ ಮಠದ ಶ್ರೀ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧಾರವಾಡ ಕರೋಕೆ ತಂಡ ಹಮ್ಮಿಕೊಂಡಿದ್ದ ‘ಕನ್ನಡ ಗಾನ ಕೌಸ್ತುಭ-2025’ ರ ಏಳನೇ ಆವೃತ್ತಿಯ ಕನ್ನಡ ಗೀತೆಗಳ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಪ್ರತಿಯೊಬ್ಬರೂ ಜೀವನದಲ್ಲಿ ಒಂದು…

Read More

ನವಲಗುಂದ ಪ್ರಾಧ್ಯಾಪಕ ಬಸವರಾಜ ಸೂಡಿ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ

ನವಲಗುಂದ: ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು ಏಳು ವರ್ಷಗಳ ಕಾಲ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಸವರಾಜ ಜಿ. ಸೂಡಿ ಅವರು ಪ್ರತಿಷ್ಠಿತ ಪಿಎಚ್.ಡಿ ಪದವಿಗೆ ಭಾಜನರಾಗಿದ್ದಾರೆ. ಮಧ್ಯಪ್ರದೇಶದ ಸ್ವಾಮಿ ವಿವೇಕಾನಂದ ವಿಶ್ವವಿದ್ಯಾಲಯವು ಇವರ ಸಂಶೋಧನಾ ಪ್ರಬಂಧವನ್ನು ಅಂಗೀಕರಿಸಿ ಈ ಉನ್ನತ ಪದವಿಯನ್ನು ಪ್ರಧಾನ ಮಾಡಿದೆ. ​ಬಸವರಾಜ ಸೂಡಿ ಅವರು “ಕರ್ನಾಟಕದ ಧಾರವಾಡ ಜಿಲ್ಲೆಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬಳಕೆದಾರರ ವಿಶೇಷ ಉಲ್ಲೇಖದೊಂದಿಗೆ ಗ್ರಾಹಕರ…

Read More

ಧಾರವಾಡ ಜಿಲ್ಲೆಯ ಮೂರು ಗ್ರಾಮಗಳಲ್ಲಿ ‘ಗ್ರಾಮ-ಒನ್’ ಕೇಂದ್ರಕ್ಕೆ ಅರ್ಜಿ ಆಹ್ವಾನ: ಆಸಕ್ತರಿಗೆ ಸುವರ್ಣಾವಕಾಶ

​ ಧಾರವಾಡ: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ತಲುಪಿಸುವ ಮಹತ್ವಾಕಾಂಕ್ಷೆಯ ‘ಗ್ರಾಮ-ಒನ್’ ಕೇಂದ್ರದ ಫ್ರಾಂಚೈಸಿಗಳನ್ನು ಸ್ಥಾಪಿಸಲು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯು ಅರ್ಜಿಗಳನ್ನು ಆಹ್ವಾನಿಸಿದೆ. ಜಿಲ್ಲೆಯ ಆಯ್ದ ಮೂರು ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಈ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ​ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಡಕಿಹೊನ್ನಳ್ಳಿ ಮತ್ತು ದೇವಲಿಂಗಿಕೊಪ್ಪ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ಗ್ರಾಮ-ಒನ್ ಕೇಂದ್ರಗಳ…

Read More

ಧಾರವಾಡ: ಕೃಷಿ ಇಲಾಖೆಗಳ ಯೋಜನೆಗಳ ಕುರಿತು ಸೋಷಿಯೋ ಎಕನಾಮಿಕ್ ಅಧ್ಯಯನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಿರ್ದೇಶನ; ಅನುದಾನ ಲ್ಯಾಪ್ಸ್ ಆಗದಂತೆ ಅಧಿಕಾರಿಗಳಿಗೆ ಎಚ್ಚರಿಕೆ

ಧಾರವಾಡ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಯೋಜನೆಗಳ ಅಡಿ ಬಿಡುಗಡೆಯಾಗಿರುವ ಅನುದಾನವು ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕು ಮತ್ತು ಯಾವುದೇ ಕಾರಣಕ್ಕೂ ಹಣ ಲ್ಯಾಪ್ಸ್ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನವೆಂಬರ್ ಅಂತ್ಯದವರೆಗಿನ ಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ…

Read More

ಗುಡೇನಕಟ್ಟಿ ಸಾರಾಯಿ ದಂಧೆ: ‘ಶ್ರಾವ್ಯಾ ದಾಬಾ’ ಹೆಸರಿನಲ್ಲಿ ಕಾನೂನಿಗೆ ಸವಾಲು; ಅಧಿಕಾರಿಯ ಕೃಪಾಕಟಾಕ್ಷವೋ ಅಥವಾ ನಿರ್ಲಕ್ಷ್ಯವೋ?

ಕುಂದಗೋಳ: ತಾಲ್ಲೂಕಿನ ಗುಡೇನಕಟ್ಟಿ ಗ್ರಾಮದ ಮಂಟೂರ–ಗುಡೇನಕಟ್ಟಿ ರಸ್ತೆಯ ಹೊರವಲಯದಲ್ಲಿರುವ ‘ಶ್ರಾವ್ಯಾ ದಾಬಾ’ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಸಾರಾಯಿ ದಂಧೆಯು ಸ್ಥಳೀಯ ಆಡಳಿತದ ವೈಫಲ್ಯವನ್ನು ಬಯಲು ಮಾಡಿದೆ. ಅಬಕಾರಿ ಇಲಾಖೆಯ ಪರವಾನಗಿ ಮಾತ್ರವಲ್ಲದೆ, ಸ್ಥಳೀಯ ಗ್ರಾಮ ಪಂಚಾಯತ್ ಮತ್ತು ಆಹಾರ ಇಲಾಖೆ ಸೇರಿದಂತೆ ಯಾವುದೇ ಸರ್ಕಾರಿ ನಿಯಮಗಳಿಗೂ ತಲೆಬಾಗದೆ, ಸಕಲ ಕಾನೂನುಗಳನ್ನು ಗಾಳಿಗೆ ತೂರಿ ಈ ದಂಧೆ ರಾಜಾರೋಷವಾಗಿ ನಡೆಯುತ್ತಿರುವುದು ಇಡೀ ವ್ಯವಸ್ಥೆಯ ದಕ್ಷತೆ ಬಗ್ಗೆ ಗಂಭೀರ ಸಂಶಯ ಮೂಡಿಸಿದೆ. ದಂಧೆಕೋರರು ಹೊರಗಿನಿಂದ ಅಗ್ಗದ ಮದ್ಯ ತಂದು…

Read More

ಕೃಷಿ ಜಮೀನಿಗೆ ರಸ್ತೆ, ರೈತರಿಗೆ ಬೆಲೆ ಭದ್ರತೆ ಒದಗಿಸಿ: ಕುಂದಗೋಳ ಮತಕ್ಷೇತ್ರದ ಶಾಸಕ ಎಂ ಆರ್ ಪಾಟೀಲ್ ಸದನದಲ್ಲಿ ಬಲವಾದ ಆಗ್ರಹ

ಕುಂದಗೋಳ:ವಿಧಾನಸಭೆ ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ರೈತರ ಸಂಕಷ್ಟ ನಿವಾರಣೆ ಕುರಿತು ಕುಂದಗೋಳ ಶಾಸಕ ಎಮ್. ಆರ್. ಪಾಟೀಲ್ ಅವರು ಶುಕ್ರವಾರ ಚಳಿಗಾಲದ ಅಧಿವೇಶನದಲ್ಲಿಈ ಭಾಗದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಗಂಭೀರ ವಿಷಯಗಳನ್ನು ಪ್ರಸ್ತಾಪಿಸಿದರು. ರಸ್ತೆ ಕೊರತೆ, ಬೆಳೆ ನಷ್ಟದ ಸಂಕಷ್ಟಉತ್ತರ ಕರ್ನಾಟಕವು ಪ್ರಧಾನವಾಗಿ ಕೃಷಿ ಮತ್ತು ಉದ್ದಿಮೆ ಆಧಾರಿತ ಪ್ರದೇಶವಾಗಿದೆ. ಇಲ್ಲಿ ಕಪ್ಪು ಭೂಮಿ ಹೇರಳವಾಗಿದ್ದರೂ, ಉತ್ತಮ ಬೆಳೆ ಬಂದರೂ ಅದನ್ನು ಮಾರುಕಟ್ಟೆಗೆ ಸಾಗಿಸಲು ರಸ್ತೆಗಳು ಇಲ್ಲದಿರುವುದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ಹಿಂದೆ ಇದ್ದ…

Read More

ಅಟಲ್‍ಜೀ ಜನಸ್ನೇಹಿ ಕೇಂದ್ರಗಳಿಗೆ ಡಾಟಾ ಎಂಟ್ರಿ ಆಪರೇಟರ್‌ಗಳ ನೇಮಕ: ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಅರ್ಜಿ ಆಹ್ವಾನ

​ಧಾರವಾಡ, ಡಿ. 12: ಧಾರವಾಡ ಜಿಲ್ಲೆಯ ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾಡಕಚೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಪೂರೈಸಲು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ​ಈ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಈ ಕುರಿತು ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಕರೆಯಲಾಗಿದೆ. ಅರ್ಹತೆ ಮತ್ತು ಆಸಕ್ತಿ ಇರುವ ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳು ಈ ಟೆಂಡರ್ ಪ್ರಕ್ರಿಯೆಯಲ್ಲಿ…

Read More

ವಿದ್ಯಾರ್ಥಿಗಳ ಆಹಾರ ಕಾಳಸಂತೆಯಲ್ಲಿ ಮಾರಾಟ ಆರೋಪ: ಮತ್ತಿಗಟ್ಟಿ ಮೂರಾರ್ಜಿ ವಸತಿ ಶಾಲೆಯಲ್ಲಿ 162 ಚೀಲ ಅಕ್ಕಿ ನಾಪತ್ತೆ!

“ಮಕ್ಕಳ ಸತ್ತರೆ ಏನು ಮಾಡ್ತೀರಿ ನೀವು?”: ಪ್ರಾಂಶುಪಾಲರ ವಿರುದ್ಧ ತಹಶೀಲ್ದಾರ್ ರಾಜು ಮಾವರಕರ ಕೆಂಡಾಮಂಡಲ; ನಿರ್ಲಕ್ಷ್ಯಕ್ಕೆ ನೋಟಿಸ್ ನೀಡಿ ಕ್ರಮದ ಎಚ್ಚರಿಕೆ ಕುಂದಗೋಳ, ಡಿ. 12: ತಾಲ್ಲೂಕಿನ ಮತ್ತಿಗಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೃಹತ್ ಪ್ರಮಾಣದ ಪಡಿತರ ಆಹಾರ ಸಾಮಗ್ರಿಗಳು ಕಾಣೆಯಾಗಿರುವ ಮತ್ತು ಅಸ್ವಚ್ಛತೆಯಿಂದ ಹಾಳಾಗಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ರಾಜು ಮಾವರಕರ ಅವರು ಶಾಲೆಯ ಪ್ರಾಂಶುಪಾಲರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅವ್ಯವಸ್ಥೆಗೆ…

Read More

ಮಕ್ಕಳ ಆತ್ಮವಿಶ್ವಾಸ ವೃದ್ಧಿಗೆ ನಾಟಕ ಮತ್ತು ಕಲೆ ಪೂರಕ: ಕೆ.ಎಚ್. ನಾಯಕ ಅಭಿಮತ

​ಧಾರವಾಡ, ಡಿ. 11: ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವಲ್ಲಿ ನಾಟಕ ಮತ್ತು ಕಲೆಗಳು ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಎಚ್. ನಾಯಕ ಅವರು ಅಭಿಪ್ರಾಯಪಟ್ಟರು. ​ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಮಾರಿಯಾ ಗ್ರಾಮೀಣ ಮಹಿಳಾ ಮತ್ತು ಮಕ್ಕಳ ಸಾಂಸ್ಕೃತಿಕ ಸಂಘದ ವತಿಯಿಂದ ಆಯೋಜಿಸಲಾಗಿದ್ದ ‘ಮಕ್ಕಳ ಹಬ್ಬ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ವೇದಿಕೆಯ ಮೇಲೆ ಹೆಜ್ಜೆ ಹಾಕಿದಾಗ ಅಥವಾ ಬಣ್ಣದ ಕುಂಚ ಹಿಡಿದಾಗ, ಯಾವುದೇ ತೀರ್ಪಿನ ಭಯವಿಲ್ಲದೆ ತಮ್ಮ…

Read More

ಡಿ. 21 ರಂದು ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ: 2.07 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ

ಧಾರವಾಡ, ಡಿ. 11: ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಡಿಯಲ್ಲಿ ಡಿಸೆಂಬರ್ 21 ರಂದು ಐದು ವರ್ಷದೊಳಗಿನ ಸುಮಾರು 2,07,837 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಬೃಹತ್ ಗುರಿಯನ್ನು ಹೊಂದಲಾಗಿದೆ. ಈ ಕುರಿತು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾ ಭವನದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಅಭಿಯಾನದ ಯಶಸ್ಸಿಗಾಗಿ ಆರೋಗ್ಯ, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದಿಂದ…

Read More