ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಧಾರವಾಡ, ಡಿ. 09: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2025-26 ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮಹತ್ವದ ಯೋಜನೆಗಳ ಪ್ರಯೋಜನ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ​ಧನಶ್ರೀ, ಚೇತನಾ, ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳ ಅಡಿಯಲ್ಲಿ ಸಹಾಯಧನ ಅಥವಾ ಸಾಲ ಸೌಲಭ್ಯ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬಹುದು. ​ಅರ್ಜಿದಾರರು ಸೇವಾ ಸಿಂಧೂ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹತ್ತಿರದ ಬಾಪೂಜಿ…

Read More

ಜಿಲ್ಲಾ ಮಟ್ಟದ ‘ಕಲಾ ಪ್ರತಿಭೋತ್ಸವ’ಕ್ಕೆ ಸಕಲ ಸಿದ್ಧತೆ: ಡಿ. 11 ಮತ್ತು 12 ರಂದು ಕಾರ್ಯಕ್ರಮ

ಧಾರವಾಡ, ಡಿ. 09: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಡಿಸೆಂಬರ್ 11 ಮತ್ತು 12, 2025 ರಂದು ಜಿಲ್ಲಾ ಮಟ್ಟದ ‘ಕಲಾ ಪ್ರತಿಭೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಈ ಪ್ರತಿಭೋತ್ಸವ ಜರುಗಲಿದ್ದು, ಇದರಲ್ಲಿ ವಿವಿಧ ಕಲಾಪ್ರಕಾರಗಳ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಮತ್ತು ಯುವ ಪ್ರತಿಭೆಗಳು ಭಾಗವಹಿಸಲಿದ್ದಾರೆ. ​ಉದ್ಘಾಟನಾ ಸಮಾರಂಭಕ್ಕೆ ಗಣ್ಯರ ಆಗಮನ ​ಡಿ. 11 ರಂದು ಬೆಳಿಗ್ಗೆ 10 ಗಂಟೆಗೆ ಕಲಾ…

Read More

ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಕಡ್ಡಾಯ: ಜಿಲ್ಲಾ ಪಂಚಾಯತ್ ಸಿಇಓ ಭುವನೇಶ ಪಾಟೀಲ ಸೂಚನೆ

ಧಾರವಾಡ, ಡಿ.09: ವಸತಿನಿಲಯಗಳ ವಿದ್ಯಾರ್ಥಿಗಳ ಆರೋಗ್ಯ ಸುಧಾರಣೆ, ಮೂಲಭೂತ ಸೌಕರ್ಯಗಳು ಹಾಗೂ ಶೈಕ್ಷಣಿಕ ಫಲಿತಾಂಶ ಸುಧಾರಣೆ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಭುವನೇಶ ಪಾಟೀಲ ಅವರು ಮಂಗಳವಾರ (ಡಿ.09) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ​ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಮಾಜ ಕಲ್ಯಾಣ, ಬಿಸಿಎಂ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ತಿಂಗಳು ನಿಗದಿತ ಅವಧಿಗೆ ವಸತಿನಿಲಯದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮತ್ತು ಆಪ್ತ…

Read More

ಹಿಂಗಾರು ಬೆಳೆ ನಿರ್ವಹಣೆ: ರೈತರಿಗೆ ತಜ್ಞರ ತಂಡದಿಂದ ಕ್ಷೇತ್ರ ಭೇಟಿ ಮತ್ತು ಸಲಹೆ

ಧಾರವಾಡ, ಡಿ.09: ಹಿಂಗಾರು ಹಂಗಾಮು 2025-26ರ ಪ್ರಮುಖ ಬೆಳೆಗಳಾದ ಕಡಲೆ (Chickpea) ಮತ್ತು ಜೋಳದಲ್ಲಿ (Jowar) ಕಂಡುಬರುತ್ತಿರುವ ಕೀಟ ಮತ್ತು ರೋಗಗಳ ನಿರ್ವಹಣೆ ಕುರಿತು ಸೂಕ್ತ ಸಲಹೆ ನೀಡಲು ಜಿಲ್ಲಾ ಪೀಡೆ ಸರ್ವೆಕ್ಷಣಾ ತಂಡವು ಸೋಮವಾರ (ಡಿ.08) ರಂದು ಧಾರವಾಡ ತಾಲ್ಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿತು. ​ಜಿಲ್ಲಾ ಪೀಡೆ ಸರ್ವೆಕ್ಷಣಾ ತಂಡದಲ್ಲಿ ಸಸ್ಯರೋಗ ತಜ್ಞರಾದ ಡಾ. ಪಿ. ನಾಗರಾಜು, ಧಾರವಾಡ ಕೃ.ವಿ.ವಿ. ವಿಸ್ತರಣಾ ನಿರ್ದೇಶನಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಸುಭಾಷ ಕಂದಕೂರ, ಉಪ ಕೃಷಿ ನಿರ್ದೇಶಕ…

Read More

ಹುಬ್ಬಳ್ಳಿ-ಧಾರವಾಡ ನಡುವೆ ಇ-ಆರ್-ಟಿ ಸೇವೆ: ಸಚಿವ ಸಂತೋ‍ಷ್ ಲಾಡ್ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರಗಳ ನಡುವೆ ಆರಂಭಿಸಲು ಉದ್ದೇಶಿಸಿರುವ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (E-RT) ಯೋಜನೆಯ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋ‍ಷ್ ಎಸ್. ಲಾಡ್ ಅವರು ಇತ್ತೀಚೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಯೋಜನೆಯ ಪ್ರಾತ್ಯಕ್ಷಿಕೆ (Demonstration) ವೀಕ್ಷಿಸಿದರು. ​ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ಅವರ ಉಪಸ್ಥಿತಿಯಲ್ಲಿ ಈ ಮಹತ್ವದ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮೂರೂ ಸಚಿವರು…

Read More

ನಕಲಿ ವೈದ್ಯರೇ ಎಚ್ಚರ! ಕ್ಲಿನಿಕ್ ನೋಂದಣಿ ಕಡ್ಡಾಯ: ಸರ್ಕಾರದ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಧಾರವಾಡ ಆಯುಷ ಇಲಾಖೆ

ಧಾರವಾಡ: ಡಿ. 08: ಜಿಲ್ಲೆಯಲ್ಲಿ ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರಿಗೆ ಧಾರವಾಡ ಜಿಲ್ಲಾ ಆಯುಷ್ ಇಲಾಖೆ ಕಠಿಣ ಎಚ್ಚರಿಕೆ ನೀಡಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ​ನೋಂದಣಿ ಕಡ್ಡಾಯ, ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ​ಜಿಲ್ಲೆಯಲ್ಲಿ ವೈದ್ಯ ವೃತ್ತಿ ನಡೆಸುತ್ತಿರುವವರು ಕಡ್ಡಾಯವಾಗಿ ಕೆಎಯುಪಿ (KAUP) ಮಂಡಳಿಯ ನೋಂದಣಿ ಪ್ರಮಾಣ ಪತ್ರವನ್ನು ಹೊಂದಿರಬೇಕು. ಅಷ್ಟೇ ಅಲ್ಲದೆ, ವೈದ್ಯಕೀಯ ಸೇವೆ ಒದಗಿಸುತ್ತಿರುವ ಎಲ್ಲಾ ಕ್ಲಿನಿಕ್‍ಗಳು ಕೆಪಿಎಂಇ (KPME)…

Read More

ಸರಳ, ಸಾಮೂಹಿಕ ಮತ್ತು ಅಂತರ್ಜಾತಿ ವಿವಾಹಗಳು ಸಮಾಜದಲ್ಲಿ ಸಮಾನತೆ ತರಲು ಸಹಾಯಕ; ದಂಪತಿಗಳು ಇಬ್ಬರೇ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ನವಲಗುಂದ: ಸಮಾಜದಲ್ಲಿ ಸಮಾನತೆಯನ್ನು ನೆಲೆಗೊಳಿಸಲು ಸರಳ, ಸಾಮೂಹಿಕ ಹಾಗೂ ಅಂತರ್ಜಾತಿ ವಿವಾಹಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರೆ ನೀಡಿದರು. ಜಾತಿ ವ್ಯವಸ್ಥೆ ನಿರ್ಮೂಲನೆಗೆ ಇದು ಪ್ರಮುಖ ಸಾಧನವಾಗಿದ್ದು, ಸಮಾಜದ ಸರ್ವರಲ್ಲಿ ಸಮಾನತೆ ತರಲು ಸಹಾಯಕವಾಗುತ್ತದೆ ಎಂದರು. ​ರವಿವಾರದಂದು ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಅವರ ಪುತ್ರ ನವೀನಕುಮಾರ್ ಅವರ ವಿವಾಹ ಆರತಕ್ಷತೆ ಅಂಗವಾಗಿ ಆಯೋಜಿಸಲಾಗಿದ್ದ 75 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ನವದಂಪತಿಗಳಿಗೆ…

Read More

ಸಂಶಿ: ಪಾದಚಾರಿಗೆ ಬೈಕ್ ಡಿಕ್ಕಿ, ಗಂಭೀರ ಗಾಯ – ಸಮಯಕ್ಕೆ ಬಾರದ ಆಂಬ್ಯುಲೆನ್ಸ್‌!

ಕುಂದಗೋಳ: ಹುಬ್ಬಳ್ಳಿ-ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಬಳಿ ನಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್‌ ಲಭ್ಯವಾಗದೆ ಸ್ಥಳೀಯ ಆಸ್ಪತ್ರೆಯಲ್ಲಿ ನರಳಾಟ ನಡೆಸಿದ ದಾರುಣ ಪರಿಸ್ಥಿತಿ ಎದುರಾಯಿತು. ​ಅಪಘಾತದ ವಿವರ ​ಸಂಶಿ ಗ್ರಾಮದ ಬಳಿ, ರಸ್ತೆಯ ಮೇಲೆ ಹೊರಟಿದ್ದ ಮಂಜುನಾಥ ದ್ಯಾಮನಗೌಡ ಧರಣಿ ಎಂಬುವವರಿಗೆ ಮಲಿಕರೆಹಾನ್ ನದಾಫ್ ಎಂಬ ಯುವಕ ಚಲಾಯಿಸುತ್ತಿದ್ದ…

Read More

ಬೃಹತ್‌ ಸ್ಪಿರಿಟ್‌ ಹಾಗೂ ಗಾಂಜಾ ಜಾಲ ಭೇದಿಸಿದ ಧಾರವಾಡ ಪೊಲೀಸರು: ಇಬ್ಬರ ಬಂಧನ

ಬೃಹತ್‌ ಸ್ಪಿರಿಟ್‌ ಹಾಗೂ ಗಾಂಜಾ ಜಾಲ ಭೇದಿಸಿದ ಧಾರವಾಡ ಪೊಲೀಸರು: ಇಬ್ಬರ ಬಂಧನ ​ಧಾರವಾಡ, ಡಿಸೆಂಬರ್ 8: ಜಿಲ್ಲಾ ಪೊಲೀಸರು ಅಬಕಾರಿ ಕಾಯಿದೆ ಅಡಿಯಲ್ಲಿ ದಾಖಲಾಗಿದ್ದ ಪ್ರಮುಖ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರ ವಶದಿಂದ ಬೃಹತ್ ಪ್ರಮಾಣದ ಒಣಗಿದ ಮಾದಕ ಗಾಂಜಾವನ್ನು ಜಪ್ತಿ ಮಾಡುವ ಮೂಲಕ ಸ್ಪಿರಿಟ್ ಮತ್ತು ಮಾದಕವಸ್ತುಗಳ ಅಕ್ರಮ ಜಾಲವನ್ನು ಭೇದಿಸಿದ್ದಾರೆ. ​ನವೆಂಬರ್ 24 ರಂದು ಮುಂಜಾನೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ತೇಗೂರ ಗ್ರಾಮದ ಭಾರತ ಪ್ಯಾಲೇಸ್ ಹೋಟೆಲ್…

Read More

ಗ್ರಾಮೀಣ ಅಭಿವೃದ್ಧಿಯಲ್ಲಿ ಯುವ ಶಕ್ತಿ: ಎನ್.ಎಸ್.ಎಸ್. ಶಿಬಿರದಲ್ಲಿ ಶಂಕರ ಹಲಗತ್ತಿ ಕರೆ

​ ಧಾರವಾಡ: ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿಯಾಗಿದ್ದು, ದೇಶದ ಭವಿಷ್ಯವು ಅದರ ಯುವ ಜನಾಂಗದ ಸ್ವಭಾವ, ಸಾಮರ್ಥ್ಯ ಮತ್ತು ಚಾರಿತ್ರ್ಯವನ್ನು ಅವಲಂಬಿಸಿರುತ್ತದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ (ಕ.ವಿ.ವ. ಸಂಘ) ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ (ಎನ್.ಎಸ್.ಎಸ್.) ಮೂಲಕ ತಮ್ಮ ಶಕ್ತಿ, ಸಾಮರ್ಥ್ಯವನ್ನು ಸದ್ಬಳಕೆ ಮಾಡಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು. ​ಅವರು ಕ.ವಿ.ವ. ಸಂಘದ ‘ಕಲಾ ಮತ್ತು ಜಾನಪದ ಮಂಟಪ’ವು ಕಲಘಟಗಿ ಗುಡ್‌ನ್ಯೂಸ್ ಪ್ರಥಮ…

Read More