ಹೃದಯಾಘಾತವಲ್ಲ, ಕೊಲೆ ಶಂಕೆ: 2 ತಿಂಗಳ ಬಳಿಕ ಸಾರಿಗೆ ಸಿಬ್ಬಂದಿಯ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ
ಧಾರವಾಡ/ಅಣ್ಣಿಗೇರಿ: ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ನಂಬಲಾದ ಪ್ರಕರಣವೊಂದು ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಮಗನ ಸಾವು ಸಹಜವಾದುದಲ್ಲ, ಇದೊಂದು ಕೊಲೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ, ಹೂತಿದ್ದ ಶವವನ್ನು ಎರಡು ತಿಂಗಳ ಬಳಿಕ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ ಘಟನೆ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ನಡೆದಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKSRTC) ಚಾಲಕರಾಗಿದ್ದ ಬಾಬಾಜಾನ್ ಚಿನ್ನೂರು (51) ಮೃತಪಟ್ಟವರು. ಪತ್ನಿ ವಹಿದಾಬಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಬಾಬಾಜಾನ್,…

