ಧಾರವಾಡ: ಗುಡಿ ಕೈಗಾರಿಕೆ ಮತ್ತು ಕರಕುಶಲ ವಸ್ತು ಪ್ರದರ್ಶನಕ್ಕೆ ಸಚಿವ ಸಂತೋಷ ಲಾಡ್ ಚಾಲನೆ
ಧಾರವಾಡ: ಜಿಲ್ಲಾ ಪಂಚಾಯತ್ನ ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗದ ವತಿಯಿಂದ 2025-26ನೇ ಸಾಲಿನ ವಸ್ತುಪ್ರದರ್ಶನ ಯೋಜನೆಯಡಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಕುಶಲಕರ್ಮಿಗಳ ಹಾಗೂ ಗುಡಿ ಕೈಗಾರಿಕೆಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮಂಗಳವಾರ ಚಾಲನೆ ನೀಡಿದರು. ನಗರದ ಕರ್ನಾಟಕ ಕಾಲೇಜು (ಕೆಸಿಡಿ) ಮೈದಾನದಲ್ಲಿ ಫೆಬ್ರವರಿ 28ರವರೆಗೆ ನಡೆಯಲಿರುವ ಈ ಮೇಳವನ್ನು ಉದ್ಘಾಟಿಸಿದ ಸಚಿವರು, ಮಳಿಗೆಗಳಿಗೆ ಭೇಟಿ ನೀಡಿ ಕುಶಲಕರ್ಮಿಗಳೊಂದಿಗೆ ಸಂವಾದ ನಡೆಸಿದರು. ಪ್ರದರ್ಶನದಲ್ಲಿ ಭಾಗವಹಿಸಿದ್ದ ಗುಡಿ…

