ಹೆಸ್ಕಾಂ ಬೇಜವಾಬ್ದಾರಿಗೆ ಬಲಿಯಾಯಿತೇ ಏಳು ವರ್ಷದ ಕಂದಮ್ಮ? ಸಂಶಿ ಗ್ರಾಮದಲ್ಲಿ ಘೋರ ದುರಂತ: ಸಾರ್ವಜನಿಕರ ತೀವ್ರ ಆಕ್ರೋಶ

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದಲ್ಲಿ ಬುಧವಾರ ಹೆಸ್ಕಾಂ (HESCOM) ಇಲಾಖೆಯ ನಿರ್ಲಕ್ಷ್ಯಕ್ಕೆ ಏಳು ವರ್ಷದ ಮುಗ್ಧ ಬಾಲಕಿ ತಂಜಿಯಾ ತೌಸಿಪ್ ಪಠಾಣ್ ಬಲಿಯಾದ ದುರ್ಘಟನೆ ಸಂಭವಿಸಿದ್ದು, ಇಡೀ ಗ್ರಾಮದಲ್ಲಿ ಆಕ್ರೋಶ ಮತ್ತು ಶೋಕದ ವಾತಾವರಣ ನಿರ್ಮಾಣವಾಗಿದೆ. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಇಲಾಖೆಯ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂಬ ಗಂಭೀರ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ. ಗ್ರಾಮದ ಸೊಸಾಯಿಟಿ ಸಮೀಪದ ಮನೆಯೊಂದರ ಬಳಿ ವಿದ್ಯುತ್ ಕಂಬ ಮತ್ತು ಮುಖ್ಯ ವಿದ್ಯುತ್ ಲೈನ್ ಅತ್ಯಂತ ಅಪಾಯಕಾರಿಯಾಗಿ ಅಳವಡಿಸಲಾಗಿತ್ತು ಎನ್ನಲಾಗಿದೆ….

Read More

ಪಠ್ಯೇತರ ಚಟುವಟಿಕೆಗಳಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಶಾಸಕ ಎನ್.ಎಚ್. ಕೋನರಡ್ಡಿ

ನವಲಗುಂದ: ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸರ್ವತೋಮುಖ ಅಭಿವೃದ್ಧಿ ಸಾಧಿಸಬೇಕು ಎಂದು ನವಲಗುಂದ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎನ್.ಎಚ್. ಕೋನರಡ್ಡಿ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್‌, ರೆಡ್ ಕ್ರಾಸ್‌, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಸಮಾರೋಪ ಹಾಗೂ ಬಿ.ಎ. ಮತ್ತು ಬಿ.ಕಾಂ. ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು….

Read More

ಆಂಬುಲೆನ್ಸ್ ವಿಳಂಬ: ಅಪಘಾತಕ್ಕೀಡಾಗಿದ್ದ ವಿದ್ಯಾರ್ಥಿ ಸಾವು, ತುರ್ತು ಸೇವೆಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ಕುಂದಗೋಳ: ತುರ್ತು ಚಿಕಿತ್ಸಾ ಸೇವೆಗಳ ವಿಳಂಬ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ನಿರ್ಲಕ್ಷ್ಯ ಮತ್ತೊಂದು ಅಮಾಯಕ ಜೀವವನ್ನು ಬಲಿತೆಗೆದುಕೊಂಡಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಸಂಶಿ ಗ್ರಾಮದ ಸಮೀಪ ನಡೆದಿದೆ. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಪ್ಪತ್ತು ವರ್ಷದ ವಿದ್ಯಾರ್ಥಿ ಆನಂದ್ ಬಸಪ್ಪ ಮುಂಡರಗಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಮೃತಪಟ್ಟಿದ್ದು, ಆಂಬುಲೆನ್ಸ್ ಸಕಾಲಕ್ಕೆ ಬಂದಿದ್ದರೆ ಯುವಕನ ಪ್ರಾಣ ಉಳಿಯಬಹುದಿತ್ತು ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ತಾಲೂಕಿನ ಗುಡಗೇರಿ ಗ್ರಾಮದ ನಿವಾಸಿಯಾಗಿದ್ದ ಆನಂದ್, ಭಾನುವಾರ ರಾತ್ರಿ ಸುಮಾರು…

Read More

ಸಂಶಿ ಗ್ರಾಮದ ಗುಡಗೇರಿ ಕ್ರಾಸ್ ಬಳಿ ಬೈಕ್–ಟ್ಯಾಂಕರ್ ಅಪಘಾತ: ಅಂಬುಲೆನ್ಸ್ ವಿಳಂಬಕ್ಕೆ ಗಾಯಾಳು ನರಳಾಟ

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದ ಹುಬ್ಬಳ್ಳಿ–ಲಕ್ಷ್ಮೇಶ್ವರ ರಸ್ತೆಯ ಮಾರ್ಗ ಮಧ್ಯದಲ್ಲಿರುವ ಗುಡಗೇರಿ ಕ್ರಾಸ್ ಬಳಿ ಬೈಕ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ರಾತ್ರಿ ನಡೆದಿದೆ. ಗುಡಗೇರಿ ಗ್ರಾಮದ ಆನಂದ ಬಸವರಾಜ ಮುಂಡರಗಿ ಅವರು ಬೈಕ್‌ನಲ್ಲಿ ಡೀಸೆಲ್ ತರಲು ಸಂಶಿ ಗ್ರಾಮಕ್ಕೆ ತೆರಳಿದ್ದ ವೇಳೆ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಪರಿಣಾಮ ಅವರ ತಲೆ ಹಾಗೂ ಬಾಯಿಗೆ ಗಂಭೀರ ಗಾಯಗಳಾಗಿದ್ದು, ರಕ್ತಸ್ರಾವದ…

Read More

ಪ್ರತ್ಯೇಕ ಪಾಲಿಕೆ ಹೋರಾಟ ತೀವ್ರ: ಧಾರವಾಡದ 12 ಕಾಂಗ್ರೆಸ್ ಸದಸ್ಯರ ರಾಜೀನಾಮೆ

ಧಾರವಾಡ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಬೇಕು ಎಂಬ ಬೇಡಿಕೆಗೆ ಸಂಬಂಧಿಸಿದ ಹೋರಾಟ ತೀವ್ರಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ 12 ಮಂದಿ ಕಾಂಗ್ರೆಸ್ ಸದಸ್ಯರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಸಲ್ಲಿಸಿದವರಲ್ಲಿ ಒಬ್ಬ ನಾಮನಿರ್ದೇಶಿತ ಸದಸ್ಯರೂ ಸೇರಿದ್ದಾರೆ. ಸದಸ್ಯರು ತಮ್ಮ ರಾಜೀನಾಮೆ ಪತ್ರಗಳನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಸಲ್ಲಿಸಿದ್ದು, ಪ್ರತ್ಯೇಕ ಪಾಲಿಕೆ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. 71ನೇ ವಿಧಾನಸಭಾ…

Read More

ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ: ಕುಂದಗೋಳ ತಾಲ್ಲೂಕಿನ ರಟ್ಟಿಗೇರಿಯಲ್ಲಿ ಘಟನೆ, ಪ್ರಕರಣ ದಾಖಲು

ಕುಂದಗೋಳ: ತಾಲ್ಲೂಕಿನ ರಟ್ಟಿಗೇರಿ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಸಾರ್ವಜನಿಕವಾಗಿ ಮಾನಭಂಗಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದ್ದು, ಈ ಕುರಿತು ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಟ್ಟಿಗೇರಿ ಗ್ರಾಮದ ನಿವಾಸಿಯಾದ 40 ವರ್ಷದ ನೀಲಮ್ಮ ಮಂಜುನಾಥ ಗೌಡಗೇರಿ ಎಂಬುವವರೇ ದೌರ್ಜನ್ಯಕ್ಕೊಳಗಾದ ಮಹಿಳೆಯಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿರುವ ಇವರು ಮೇ 22ರಂದು ಮಧ್ಯಾಹ್ನ 1-30ರ ಸುಮಾರಿಗೆ ಎಂದಿನಂತೆ ಆಡುಗಳನ್ನು ಮೇಯಿಸಲು ಗ್ರಾಮದ ಹತ್ತಿರದ ಗುಡ್ಡದ ಕಡೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ಆರೋಪಿಯು ಇವರನ್ನು ಹಿಂಬಾಲಿಸಿಕೊಂಡು…

Read More

ಮುಂಗಾರು ಬಿತ್ತನೆಗೆ ಅಗತ್ಯ ಬೀಜ, ರಸಗೊಬ್ಬರ ದಾಸ್ತಾನು ಇದೆ: ರೈತರಿಗೆ ಆತಂಕ ಬೇಡ – ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯ ಪ್ರಮಾಣದ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಲಭ್ಯವಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ಗುರುವಾರ ಕೃಷಿ ಇಲಾಖೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ರಸಗೊಬ್ಬರ ಮಾರಾಟಗಾರರು ಮತ್ತು ರೈತ ಪ್ರಮುಖರೊಂದಿಗೆ ಗೂಗಲ್ ಮೀಟ್ ಮೂಲಕ ಜರುಗಿದ ತುರ್ತು ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದ ಅವರು, ಜೂನ್ ಮೊದಲ ವಾರದಿಂದ ಮುಂಗಾರು ಹಂಗಾಮು ಆರಂಭವಾಗಲಿದ್ದು,…

Read More

ಸಾಲ ಬಾದೆ ತಾಳಲಾರದೆ ರೈತ ಆತ್ಮಹತ್ಯೆ

ಕುಂದಗೋಳ: ಸಾಲ ಬಾಧೆ ಹಾಗೂ ಬೆಳೆ ನಷ್ಟದಿಂದ ಮನನೊಂದ ರೈತರೊಬ್ಬರು ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಕೇಡಿಸುವ ಘಟನೆ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ನಡೆದಿದೆ. ಹಿರೇಹರಕುಣಿ ಗ್ರಾಮದ ನಿವಾಸಿಯಾದ ಶಿವಾನಂದ ವಿರುಪಾಕ್ಷಪ್ಪ ಹೂಗಾರ (64) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತರಾಗಿದ್ದಾರೆ. ಮೃತ ಶಿವಾನಂದ ಅವರು ತಮ್ಮ ಜಮೀನು ಸಾಗುವಳಿಗಾಗಿ ಹಿರೇಹರಕುಣಿಯ ಕೆ.ವಿ.ಜಿ. ಬ್ಯಾಂಕ್‌ನಲ್ಲಿ 02 ಲಕ್ಷ ರೂಪಾಯಿಗಳ ಬೆಳೆ ಸಾಲವನ್ನು ಮಾಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಜಮೀನಿನಲ್ಲಿ ಸರಿಯಾಗಿ ಬೆಳೆ ಬಾರದೆ, ಇತ್ತ ಬಂದ ಬೆಳೆಗೆ…

Read More

ಮಹಿಳಾ ಪೊಲೀಸ್ ಠಾಣೆಗಳು ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುವ ಕೇಂದ್ರಗಳಾಗಲಿ: ಡಾ. ನಾಗಲಕ್ಷ್ಮಿ ಚೌದರಿ

ಧಾರವಾಡ: ಮಹಿಳೆಯರ ಮೇಲಿನ ದೌರ್ಜನ್ಯ, ಕಿರುಕುಳ ಹಾಗೂ ಸೈಬರ್ ಅಪರಾಧ ಪ್ರಕರಣಗಳಿಗೆ ತ್ವರಿತ ಸ್ಪಂದನೆ ನೀಡುವುದು ಪೊಲೀಸ್ ಇಲಾಖೆಯ ಮೊದಲ ಆದ್ಯತೆಯಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಹೇಳಿದರು. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಸಮೀಪದ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ, ಮೂಲಸೌಕರ್ಯಗಳು ಹಾಗೂ ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದ ಅವರು, ಮಹಿಳೆಯರು ಯಾವುದೇ ರೀತಿಯ ಅನ್ಯಾಯ, ಶೋಷಣೆ ಅಥವಾ ಕಿರುಕುಳಕ್ಕೆ ಒಳಗಾದಾಗ…

Read More

ಮಹಿಳೆಯರ ಬದುಕಿಗೆ ಆಶಾಕಿರಣವಾಗಲಿ ಸರ್ಕಾರಿ ಇಲಾಖೆಗಳು: ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ

ಧಾರವಾಡ: ಮಹಿಳೆಯರ ಅಭಿವೃದ್ಧಿ ಮತ್ತು ಸುರಕ್ಷತೆಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಎಲ್ಲಾ ಇಲಾಖೆಗಳು ಸಮನ್ವಯದಿಂದ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಧಿಕಾರಿಗಳು ಮಾತೃ ಹೃದಯದಿಂದ ಕರ್ತವ್ಯ ನಿರ್ವಹಿಸಿದಾಗ ಮಾತ್ರ ನೊಂದ ಮಹಿಳೆಯರಿಗೆ ನ್ಯಾಯ ಸಿಗಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ಸ್ಪಂದನ ಹಾಗೂ ಮಹಿಳಾ ಮತ್ತು ಮಕ್ಕಳ…

Read More