ನನ್ನ ಗಣತಿ ದೇಶದ ಶಕ್ತಿ: ಸ್ವಯಂ ಗಣತಿಯಲ್ಲಿ ಭಾಗವಹಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿ
ಧಾರವಾಡ: ದೇಶದ ಭವಿಷ್ಯದ ಯೋಜನೆಗಳು ಮತ್ತು ಅಭಿವೃದ್ಧಿಯ ದಿಕ್ಸೂಚಿಯಾಗಿರುವ 2027ರ ಜನಗಣತಿ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಹಾಗೂ ಡಿಜಿಟಲ್ ಇಂಡಿಯಾ ಅಭಿಯಾನದಡಿ ಲಭ್ಯವಿರುವ ‘ಸ್ವಯಂ ಗಣತಿ’ (Self-Enumeration) ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರು ಕರೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನಗಣತಿಯು ಕೇವಲ ಅಂಕಿ-ಅಂಶಗಳ ಸಂಗ್ರಹವಲ್ಲ, ಇದು ಸುಭದ್ರ ಭಾರತದ ನಿರ್ಮಾಣಕ್ಕೆ ನಾಗರಿಕರು ನೀಡುವ…

