ನಾಟಕಗಳಿಗೆ ಎಲ್ಲಾ ಕಾಲದಲ್ಲೂ ಬೆಲೆಯಿದೆ: ಚಿಂತಕ ರಮೇಶ ಜಂಗಲ
ಧಾರವಾಡ, ನ. 24: ನಾಟಕಗಳಿಗೆ ಎಲ್ಲಾ ಕಾಲದಲ್ಲೂ ಬೆಲೆ ಇದೆ. ನಮ್ಮ ಸಾಮಾಜಿಕ ಸಂಬಂಧಗಳನ್ನು ಗಟ್ಟಿಗೊಳಿಸುವ ಸಾಮರ್ಥ್ಯ ನಾಟಕಗಳಿಗೆ ಇದೆ ಎಂದು ಬೆಳಗಾವಿಯ ಚಿಂತಕ ರಮೇಶ ಜಂಗಲ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ವಿದ್ಯಾವರ್ಧಕ ಸಂಘವು (ಕವಿವ ಸಂಘ) ಆಯೋಜಿಸಿರುವ ಹತ್ತು ದಿನಗಳ ನಾಟಕೋತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ‘ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ’ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗುವ ಎಂಟು ದಶಕಗಳ ಹಿಂದೆಯೇ ಕನ್ನಡ ಕಟ್ಟುವ ಕಾರ್ಯವನ್ನು ಈ ಸಂಘವು…

