ಕುಂದಗೋಳದಲ್ಲಿ ನಾಳೆ ತಾಲೂಕು 6ನೇ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ
ಕುಂದಗೋಳ: ಕಲ್ಯಾಣಪುರ ಬಸವಣ್ಣಜ್ಜನವರ ಕಲ್ಯಾಣ ಮಂಟಪದಲ್ಲಿ ತಾಲೂಕು 6ನೇ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ನವೆಂಬರ್ 15ರಂದು ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಗಾಳಿ ಮರೆಮ್ಮ ದೇವಾಲಯದಿಂದ ಆರಂಭವಾಗುವ ಭುವನೇಶ್ವರಿದೇವಿಯ ಭಾವಚಿತ್ರ ಮೆರವಣಿಗೆಗೆ ಮಾಜಿ ಶಾಸಕ ಹಾಗೂ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಅಕ್ಕಿ ಚಾಲನೆ ನೀಡಲಿದ್ದಾರೆ ಎಂದು ತಾಲೂಕು ಕಚುಸಾಪ ಅಧ್ಯಕ್ಷ ವೈ.ಡಿ. ಹೊಸೂರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಕನ್ನಡ ತೇರಿನ ಮೆರವಣಿಗೆಯು ಕಲ್ಯಾಣ ಮಂಟಪಕ್ಕೆ ಆಗಮಿಸಿದ ಬಳಿಕ ಸಮ್ಮೇಳನದ…

