ಇಚ್ಛಾಮರಣಕ್ಕೆ ಮುಂದಾಗಿದ್ದ ಕುಬಿಹಾಳ ಗ್ರಾಮದ ಯುವಕನಿಂದ ದಾಖಲೆ ಸಲ್ಲಿಕೆ ವಿಫಲ: ಸುಳ್ಳು ಆರೋಪ ಮಾಡದಂತೆ ನ್ಯಾಯಾಧೀಶರ ಎಚ್ಚರಿಕೆ

ಕುಂದಗೋಳ : ತಾಲೂಕಿನ ಕುಬಿಹಾಳ ಗ್ರಾಮ ಪಂಚಾಯತಿ ಸೇರಿದಂತೆ ಒಟ್ಟು 26 ಪಂಚಾಯತಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ರಾಷ್ಟ್ರಪತಿಗಳಿಗೆ ಪತ್ರ ಬರೆದು ಇಚ್ಛಾಮರಣಕ್ಕೆ ಮುಂದಾಗಿದ್ದ ಯುವಕ ನಾಗರಾಜ ಗುರುಶಿದ್ದಪ್ಪ ಹುಬ್ಬಳ್ಳಿ, ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನೇತೃತ್ವದಲ್ಲಿ ನಡೆದ ವಿಚಾರಣೆಯ ವೇಳೆ ಸೂಕ್ತ ದಾಖಲೆಗಳನ್ನು ಒದಗಿಸುವಲ್ಲಿ ವಿಫಲರಾದರು. ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಕಾಮಗಾರಿಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ನಾಗರಾಜ,…

Read More

ಪದಕ ವಿಜೇತ ಪರಿಶಿಷ್ಟ ಜಾತಿ/ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಧಾರವಾಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ೨೦೨೫-೨೬ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ, ಅಧಿಕೃತ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ​೨೦೨೪ನೇ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ: ೦೧-೦೧-೨೦೨೪ ರಿಂದ ೩೧-೧೨-೨೦೨೪ ರವರೆಗೆ) ನಡೆದ ಅಧಿಕೃತ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ​ಆಸಕ್ತ ಮತ್ತು…

Read More

ಎನ್.ಐ.ಎಸ್ ತರಬೇತಿ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಧಾರವಾಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ೨೦೨೫-೨೬ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಎನ್.ಐ.ಎಸ್ (NIS) ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ​ಎನ್.ಐ.ಎಸ್ ಅಡಿಯಲ್ಲಿ ನಡೆಸಲಾಗುವ ಆರು ವಾರಗಳ ಸರ್ಟಿಫಿಕೇಟ್ ಕೋರ್ಸ್ (Six week Certificate Course), ಪಿ.ಜಿ. ಡಿಪ್ಲೋಮಾ (P.G. Diploma) ಮತ್ತು ಎಂ.ಎಸ್.ಸಿ ಸ್ಪೋರ್ಟ್ಸ್ ಕೋಚಿಂಗ್ (M.S.C Sports Coaching) ತರಬೇತಿ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಈ ಸೌಲಭ್ಯ ಪಡೆಯಬಹುದಾಗಿದೆ. ​ಆಸಕ್ತ ಮತ್ತು…

Read More

ನವಲಗುಂದ: ಉಚಿತ ಬ್ಯಾಂಕಿಂಗ್, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ; ಜ.18 ಅರ್ಜಿ ಸಲ್ಲಿಕೆ ಕೊನೆಯ ದಿನ

ನವಲಗುಂದ: ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗಾಗಿ ಉಚಿತ ಬ್ಯಾಂಕಿಂಗ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 18 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ. ​ಶಾಂಭವಿ ವಿನೋದ ಅಸೂಟಿ ಟ್ರಸ್ಟ್ ನವಲಗುಂದ ಹಾಗೂ ಧಾರವಾಡದ ಟ್ರ್ಯಾಕ್ ಇಟ್ ಅಕಾಡೆಮಿ (Track It Academy) ಸಹಯೋಗದೊಂದಿಗೆ ಈ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಬ್ಯಾಂಕಿಂಗ್, ಎಸ್.ಎಸ್.ಸಿ (SSC), ಅಗ್ನಿವೀರ್ ಹಾಗೂ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ….

Read More

ಕುಂದಗೋಳ: ಹಳೆಯ ದ್ವೇಷಕ್ಕೆ ನಿಂಗರಾಜ ಎಂಬ ಅಪ್ರಾಪ್ತನ ಬರ್ಬರ ಹತ್ಯೆ; ಮೂವರು ಅಪ್ರಾಪ್ತ ಬಾಲಕರಿಂದ ಕೃತ್ಯ

ಕುಂದಗೋಳ: ಪಟ್ಟಣದ ಸರ್ವೋದಯ ಶಾಲೆಯ ಹಿಂಭಾಗದಲ್ಲಿರುವ ಸೊಸೈಟಿಯ ಖುಲ್ಲಾ ಜಾಗದಲ್ಲಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಬಾಲಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿ, ಮತ್ತೊಬ್ಬನಿಗೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ನಿಂಗರಾಜ ಎಂಬ ಯುವಕನೇ ಕೊಲೆಯಾದ ದುರ್ದೈವಿಯಾಗಿದ್ದು, ಸಂಜು ತಂದೆ ಮಹಾಂತೇಶ ಶಿರಸಂಗಿ ಎಂಬುವವರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೊಳಗಾದ ಮೂವರು ಅಪ್ರಾಪ್ತ ಬಾಲಕರ ವಿರುದ್ಧ ದೂರು ದಾಖಲಾಗಿದೆ. ದಿನಾಂಕ 14-01-2025 ರಂದು ಮಧ್ಯಾಹ್ನ 3:45 ರಿಂದ 4:00 ಗಂಟೆಯ ಸುಮಾರಿಗೆ…

Read More

ಶಾಲಾ ಮಕ್ಕಳ ಅಪಹರಣ ಪ್ರಕರಣ: ತನಿಖೆಗೆ ಸಮಿತಿ ರಚನೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ: ಜಿಲ್ಲಾಧಿಕಾರಿ ದಿವ್ಯಪ್ರಭು

​ಧಾರವಾಡ, ಜ. ೧೪: ಕಮಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಅಪಹರಣ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಶಾಲಾ ಅವಧಿಯಲ್ಲಿಯೇ ಈ ಘಟನೆ ನಡೆದಿದ್ದು, ಈ ಕುರಿತು ತನಿಖೆ ನಡೆಸಿ ವರದಿ ನೀಡಲು ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ನೀಡುವ ವರದಿ ಪರಿಶೀಲಿಸಿ, ಲೋಪ ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಎಚ್ಚರಿಕೆ ನೀಡಿದರು. ​ಅವರು ಬುಧವಾರ ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಅಪಹರಣದಿಂದ ಪಾರಾಗಿ…

Read More

ಕುಂದಗೋಳ: 10 ನೇ ತರಗತಿ ವಿದ್ಯಾರ್ಥಿಯ ಶಂಕಾಸ್ಪದ ಸಾವು; ಕೊಲೆ ಶಂಕೆ?

ಕುಂದಗೋಳ: ಪಟ್ಟಣದ ಕರೋಗಲ ಓಣಿಯ ೧೬ ವರ್ಷದ ೧೦ನೇ ತರಗತಿ ವಿದ್ಯಾರ್ಥಿಯೋರ್ವ ಶಂಕಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಶಂಕಿಸಲಾಗಿದೆ. ​ಮೃತನನ್ನು ನಿಂಗರಾಜ ಮಲ್ಲಿಕಾರ್ಜುನ ಅವಾರಿ (೧೬) ಎಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ ಪಕ್ಕದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಶವ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು. ​ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಧಾರವಾಡ ಜಿಲ್ಲಾ ಎಸ್ಪಿ ಹಾಗೂ ಕುಂದಗೋಳ ಪೊಲೀಸರು…

Read More

ಕುಂದಗೋಳ: ಅಂದಾಜು17 ವರ್ಷದ ಬಾಲಕನ ಶಂಕಾಸ್ಪದ ಸಾವು, ಕೊಲೆ ಶಂಕೆ?

ಕುಂದಗೋಳ: ಪಟ್ಟಣದ ಪೂಜಾರ ಓಣಿಯ ಅಂದಾಜು 17 ವರ್ಷದ ಬಾಲಕನೊಬ್ಬ ಶಂಕಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಶಂಕಿಸಲಾಗಿದೆ. ​ಮೃತನನ್ನು ಲಿಂಗರಾಜ ಅವಾರಿ ಅಂದಾಜು (17) ಎಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ ಪಕ್ಕದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಶವ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು. ​ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಕುಂದಗೋಳ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಸಾವಿನ ಸುತ್ತ…

Read More

ಕಾದಂಬರಿಗಳ ಮೂಲಕ ಭಾಷಾ ಜಾಗೃತಿ ಮೂಡಿಸಿದ ಕೀರ್ತಿ ಗಳಗನಾಥರಿಗೆ ಸಲ್ಲುತ್ತದೆ: ಸಿ. ಆರ್. ಜೋಶಿ

ಧಾರವಾಡ: ಗಳಗನಾಥರು ಆಧುನಿಕ ಕನ್ನಡ ಸಾಹಿತ್ಯದ ಮೊದಲ ಕಾದಂಬರಿಕಾರರು. ಮರಾಠಿ ಪ್ರಾಬಲ್ಯವಿದ್ದ ಕಾಲಘಟ್ಟದಲ್ಲಿ ತಮ್ಮ ಕಾದಂಬರಿಗಳ ಮೂಲಕ ನಾಡಿನಾದ್ಯಂತ ಸಾಹಿತ್ಯ ಪ್ರಸಾರ ಮಾಡಿ, ಕನ್ನಡಿಗರಲ್ಲಿ ಭಾಷಾ ಜಾಗೃತಿ ಮೂಡಿಸಿದರು ಎಂದು ನಿವೃತ್ತ ಉಪನ್ಯಾಸಕ ಸಿ. ಆರ್. ಜೋಶಿ ಅಭಿಪ್ರಾಯಪಟ್ಟರು. ​ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಕನ್ನಡ ಕಾದಂಬರಿ ಪಿತಾಮಹ ಗಳಗನಾಥರು ಹಾಗೂ ಸಂಶೋಧಕ ಶ್ರೀ ನಾ. ಶ್ರೀ. ರಾಜಪುರೋಹಿತರ ಸ್ಮರಣಾರ್ಥ ದತ್ತಿ ಉಪನ್ಯಾಸ’ ಕಾರ್ಯಕ್ರಮದಲ್ಲಿ ‘ಬದುಕು-ಬರಹ’ ವಿಷಯದ ಕುರಿತು ಅವರು ಮಾತನಾಡಿದರು. ​ಮರಾಠಿ ಪ್ರಭಾವವಿದ್ದ…

Read More

ಬಾಲ್ಯವಿವಾಹ ತಡೆಗೆ ಧಾರ್ಮಿಕ ಮುಖಂಡರ ಸಹಕಾರ ಅತ್ಯಗತ್ಯ; ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ: ನ್ಯಾಯಾಧೀಶ ಪರಶುರಾಮ ದೊಡ್ಡಮನಿ

ಧಾರವಾಡ: ಬಾಲ್ಯವಿವಾಹ ಎಂಬುದು ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ನಿರ್ಮೂಲನೆ ಮಾಡುವಲ್ಲಿ ಧಾರ್ಮಿಕ ಮುಖಂಡರ ಪಾತ್ರ ಮಹತ್ವದ್ದಾಗಿದೆ. ವಿವಾಹ ನಿಶ್ಚಯಿಸುವ ಸಂದರ್ಭದಲ್ಲಿ ವಯಸ್ಸಿನ ಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ತಪ್ಪಿದಲ್ಲಿ ಅದರಲ್ಲಿ ಭಾಗಿಯಾಗುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಎಚ್ಚರಿಕೆ ನೀಡಿದರು. ​‘ಬಾಲ್ಯವಿವಾಹ ಮುಕ್ತ ಭಾರತ-100 ದಿನಗಳ ಅಭಿಯಾನ’ದ ಅಂಗವಾಗಿ ಜಿಲ್ಲಾ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು…

Read More