ಇಚ್ಛಾಮರಣಕ್ಕೆ ಮುಂದಾಗಿದ್ದ ಕುಬಿಹಾಳ ಗ್ರಾಮದ ಯುವಕನಿಂದ ದಾಖಲೆ ಸಲ್ಲಿಕೆ ವಿಫಲ: ಸುಳ್ಳು ಆರೋಪ ಮಾಡದಂತೆ ನ್ಯಾಯಾಧೀಶರ ಎಚ್ಚರಿಕೆ
ಕುಂದಗೋಳ : ತಾಲೂಕಿನ ಕುಬಿಹಾಳ ಗ್ರಾಮ ಪಂಚಾಯತಿ ಸೇರಿದಂತೆ ಒಟ್ಟು 26 ಪಂಚಾಯತಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ರಾಷ್ಟ್ರಪತಿಗಳಿಗೆ ಪತ್ರ ಬರೆದು ಇಚ್ಛಾಮರಣಕ್ಕೆ ಮುಂದಾಗಿದ್ದ ಯುವಕ ನಾಗರಾಜ ಗುರುಶಿದ್ದಪ್ಪ ಹುಬ್ಬಳ್ಳಿ, ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನೇತೃತ್ವದಲ್ಲಿ ನಡೆದ ವಿಚಾರಣೆಯ ವೇಳೆ ಸೂಕ್ತ ದಾಖಲೆಗಳನ್ನು ಒದಗಿಸುವಲ್ಲಿ ವಿಫಲರಾದರು. ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಕಾಮಗಾರಿಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದ ನಾಗರಾಜ,…

